AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಂದ ಯುಗಾದಿ ದಿನವೇ ಭಿಕ್ಷಾಟನಾ ಚಳವಳಿ.. ಹಬ್ಬಕ್ಕೂ ಸಂಬಳ ನೀಡಿಲ್ಲವೆಂದು ಆಕ್ರೋಶ

ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆ ಸಿಟ್ಟಾಗಿರುವ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾನೂನು ಹೋರಾಟಕ್ಕೂ ಮುಂದಾಗಿರುವ ಸಿಬ್ಬಂದಿ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ.

ಸಾರಿಗೆ ನೌಕರರಿಂದ ಯುಗಾದಿ ದಿನವೇ ಭಿಕ್ಷಾಟನಾ ಚಳವಳಿ.. ಹಬ್ಬಕ್ಕೂ ಸಂಬಳ ನೀಡಿಲ್ಲವೆಂದು ಆಕ್ರೋಶ
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
Skanda
| Edited By: ಆಯೇಷಾ ಬಾನು|

Updated on: Apr 13, 2021 | 7:30 AM

Share

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ತಿಕ್ಕಾಟ ಉಲ್ಬಣಿಸುತ್ತಲೇ ಇದ್ದು, ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆ ಸಿಟ್ಟಾಗಿರುವ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾನೂನು ಹೋರಾಟಕ್ಕೂ ಮುಂದಾಗಿರುವ ಸಿಬ್ಬಂದಿ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಆ ಮೂಲಕ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ.

ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳಲ್ಲಿ ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿರುವ ನೌಕರರು ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಕರ್ತವ್ಯಕ್ಕೆ ಹಾಜರಾಗಿರುವ ಹಲವು ನೌಕರರಿಗೆ ನಿನ್ನೆ ಸಂಬಳ ಬಿಡುಗಡೆ ಮಾಡಲಾಗಿದ್ದು, ಕೆಲಸಕ್ಕೆ ಹಾಜರಾಗದ ಕೆಲವರಿಗೆ ಸಂಬಳ ನೀಡಿಲ್ಲ. ಹೀಗಾಗಿ ಸಂಬಳ ಅವರು ಯುಗಾದಿ ಹಬ್ಬದ ದಿನವಾದ ಇಂದು ಬೀದಿಗಿಳಿಯಲಿದ್ದಾರೆ.

ಈ ಎಲ್ಲಾ ಪ್ರತಿಭಟನೆ ಕುರಿತಂತೆ ಮಾತನಾಡಿರುವ ಕೋಡಿಹಳ್ಳಿ ಚಂದ್ರಶೇಖರ್, ಇನ್ನು ಮುಂದೆ ನಡೆಯುವ ಎಲ್ಲಾ ಚಳುವಳಿಗಳಲ್ಲೂ ಕುಟುಂಬಸ್ಥರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಭಿಕ್ಷೆ ಬೇಡುವ ಮೂಲಕ ವಿಭಿನ್ನ ಚಳವಳಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಸಂಬಳ ಕೊಡದ ಕುರಿತು ಆಕ್ರೋಶ ಹೊರಹಾಕಿರುವ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ವಕೀಲ ಬಾಲನ್, ವೇತನ ಕೊಡದಿದ್ರೆ ಅದು ಕಾನೂನುಬಾಹಿರ. ಈ ಸಂಬಂಧ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಪೊಲೀಸ್ ಠಾಣೆಗಳಲ್ಲಿ ದೂರು ಕೊಡಲಿದ್ದಾರೆ ಎನ್ನುವುದನ್ನೂ ತಿಳಿಸಿದ್ದಾರೆ.

ಈ ಮಧ್ಯೆ ನಿನ್ನೆ ಕೂಡ ಬಿಎಂಟಿಸಿಯ 61 ಪ್ರೊಬೆಷನರಿ, 63 ತರಬೇತಿ ನೌಕರರನ್ನು ವಜಾ ಮಾಡಲಾಗಿದ್ದು, ಕಳೆದ 7 ದಿನಗಳಲ್ಲಿ ಒಟ್ಟು 260 ಕ್ಕೂ ಹೆಚ್ಚು ತರಬೇತಿ ನೌಕರರನ್ನ ವಜಾಗೊಳಿಸಲಾಗಿದೆ. ಅತ್ತ ಸರ್ಕಾರ ಆರನೇ ವೇತನ ಆಯೋಗ ಜಾರಿ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದು ಇತ್ತ ಸಾರಿಗೆ ನೌಕರರು ಬೇಡಿಕೆ ಈಡೇರುವವರೆಗೂ ಬಸ್ ಹತ್ತಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಸಂಬಳ ಆಗದ ಸಾರಿಗೆ ನೌಕರರಿಂದ ನಾಳೆ ಡಿಪೋ ಮ್ಯಾನೇಜರ್​ಗಳ ವಿರುದ್ಧ ದೂರು: ವಕೀಲ ಬಾಲನ್ 

ಕರ್ತವ್ಯಕ್ಕೆ ಹಾಜರಾದ 10,430 ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳ ಪಾವತಿಸಿದ ಸಾರಿಗೆ ಸಂಸ್ಥೆ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!