AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಸಾಕಷ್ಟು ಹಣ ಖರ್ಚಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ನಾನು ಗೃಹ ಸಚಿವರ ಜತೆ ಚರ್ಚಿಸಿದ್ದೇನೆ. ನೌಕರರ 10 ಬೇಡಿಕೆ ಪೈಕಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಾರಿಗೆ ನಿಗಮಗಳ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಈ ಬೇಡಿಕೆ ಈಡೇರಿಸಲು ಸಾಧ್ಯವಾಗದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಹಣ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಖರ್ಚಾಗುತ್ತಿದೆ. ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಅಸಾಧ್ಯ. ಇನ್ನೊಮ್ಮೆ ಚರ್ಚೆ ಮಾಡಿ ಪ್ರತಿಭಟನೆ‌ ನಡೆಸದಂತೆ […]

Bus Strike: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಸಾಕಷ್ಟು ಹಣ ಖರ್ಚಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್
ಆರ್.ಅಶೋಕ
guruganesh bhat
| Edited By: |

Updated on: Apr 06, 2021 | 3:19 PM

Share

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ನಾನು ಗೃಹ ಸಚಿವರ ಜತೆ ಚರ್ಚಿಸಿದ್ದೇನೆ. ನೌಕರರ 10 ಬೇಡಿಕೆ ಪೈಕಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಾರಿಗೆ ನಿಗಮಗಳ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಈ ಬೇಡಿಕೆ ಈಡೇರಿಸಲು ಸಾಧ್ಯವಾಗದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಹಣ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಖರ್ಚಾಗುತ್ತಿದೆ. ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಅಸಾಧ್ಯ. ಇನ್ನೊಮ್ಮೆ ಚರ್ಚೆ ಮಾಡಿ ಪ್ರತಿಭಟನೆ‌ ನಡೆಸದಂತೆ ಮನವಿ ಸಲ್ಲಿಸುತ್ತೇವೆ ಎಂದು ದೇವನಹಳ್ಳಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಇತ್ತ ಸಾರಿಗೆ ನೌಕರರ ಮುಷ್ಕರದ ಕುರಿತು ಬಾಗಲಕೋಟೆಯಲ್ಲಿ ಮಾತನಾಡಿದ ತೋಟಗಾರಿಕೆ ಸಚಿವ ಆರ್.ಶಂಕರ್, ‘ನೌಕರರು ಮುಷ್ಕರ ಮಾಡ್ತಿರುವುದು ಇದೇ‌ ಮೊದಲಲ್ಲ. ಸರ್ಕಾರ ಸಾರಿಗೆ ನೌಕರರನ್ನು ಕರೆದು ತೀರ್ಮಾನ ಮಾಡುತ್ತದೆ. ಯಾವುದೇ ಮುಷ್ಕರ ಮಾಡಿದರೂ ಸಾರ್ವಜನಿಕರಿಗೆ ತೊಂದರೆ ಆಗದಂತೆ‌ ನೊಡಿಕೊಳ್ಳಬೇಕು ಎಂದು ಮನವಿ ಸಲ್ಲಿಸುತ್ತೇನೆ. ಏನೇ ಇದ್ದರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ, ಮಾತುಕತೆಗೆ ಸರ್ಕಾರ‌ ಬದ್ಧವಿದೆ ಎಂದು ಹೇಳಿದರು.

ಸರ್ಕಾರ ಎಸ್ಮಾ ಜಾರಿ ಮಾಡುತ್ತೆ ಎಂಬ ಎಚ್ಚರಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಸರ್ಕಾರ ಮತ್ತು ನೌಕರರು ಒಂದು ವಾಹನದ ಎರಡು ಚಕ್ರ ಇದ್ದಂತೆ. ಒಟ್ಟಾಗಿ ಹೋದರೆ ಮಾತ್ರ ಜನಸಾಮಾನ್ಯರಿಗೆ ಕ್ಷೇಮ ಲಭಿಸುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

Bus Strike: ಹೆಚ್ಚು ಪ್ರಯಾಣಿಕರು ಸಂಚಾರ ಮಾಡುವ ಮಾರ್ಗ​ಗಳಲ್ಲಿ ನಾಳೆ ಖಾಸಗಿ ವಾಹನಗಳು ಸಂಚಾರ ಮಾಡಲಿವೆ: ಬಿಎಂಟಿಸಿ ಎಂಡಿ ಸಿ.ಶಿಖಾ

( KSRTC BMTC workers demands can not be acceptable says Karnataka Minister R Ashok in Devanahalli)

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ