AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸರ್ಕಾರಿ ಬಸ್​ ಸಂಚಾರಕ್ಕೆ ಖಾಸಗಿ ಮಾಲೀಕರಿಂದ ವಿರೋಧ; ಕೋಲು ಕೊಟ್ಟು ಪೆಟ್ಟು ತಿಂದಂತಾದ ಅಧಿಕಾರಿಗಳು

KSRTC BMTC Workers Strike: ಮೈಸೂರಿನಲ್ಲಿ ಅರ್ಧಗಂಟೆಗೊಂದರಂತೆ ಸರ್ಕಾರಿ ಬಸ್​ ವ್ಯವಸ್ಥೆ ಮಾಡಿದ್ದು, ಕೆಲ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಎಸ್​ಆರ್​ಟಿಸಿ ಬಸ್​ ಚಾಲನೆ ಆರಂಭವಾಗುತ್ತಿದ್ದಂತೆಯೇ ಖಾಸಗಿ ಬಸ್​ ಮಾಲೀಕರು ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬಸ್​ ಓಡಿಸೋದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

Bus Strike: ಸರ್ಕಾರಿ ಬಸ್​ ಸಂಚಾರಕ್ಕೆ ಖಾಸಗಿ ಮಾಲೀಕರಿಂದ ವಿರೋಧ; ಕೋಲು ಕೊಟ್ಟು ಪೆಟ್ಟು ತಿಂದಂತಾದ ಅಧಿಕಾರಿಗಳು
ಕೆಎಸ್​ಆರ್​ಟಿಸಿ
Skanda
| Edited By: |

Updated on: Apr 10, 2021 | 8:19 AM

Share

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಮುಷ್ಕರ ಹೂಡಿರುವ ಸಾರಿಗೆ ನೌಕರರು ಪಟ್ಟು ಸಡಿಲಿಸಲು ಒಪ್ಪದ ಕಾರಣ ನಾಲ್ಕನೇ ದಿನವೂ ರಾಜ್ಯದಲ್ಲಿ ಸರ್ಕಾರಿ ಬಸ್​ಗಳು ರಸ್ತೆಗಿಳಿದಿಲ್ಲ. ಕೆಲವೆಡೆ ತರಬೇತಿ ನಿರತ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲಾಗುತ್ತಿದೆಯಾದರೂ ಬೆರಳೆಣಿಕೆ ಸಂಖ್ಯೆಯಲ್ಲಿ ಮಾತ್ರ ಅದು ಸಾಧ್ಯವಾಗಿದೆ. ಹೀಗಾಗಿ ಸಾರಿಗೆ ನಿಗಮದ ಅಧಿಕಾರಿಗಳು ಖಾಸಗಿ ಬಸ್​ಗಳನ್ನೇ ಮುಂದಿಟ್ಟುಕೊಂಡು ಸಂಚಾರ ವ್ಯವಸ್ಥೆ ನಿರ್ವಹಿಸುತ್ತಿದ್ದಾರೆ. ಆದರೆ, ಇದೇ ಅವರಿಗೆ ಮುಳುವಾಗಿದ್ದು ಕೆಲವೆಡೆ ಸರ್ಕಾರಿ ಬಸ್​ ಬಿಡೋಣವೆಂದರೂ ಖಾಸಗಿ ಬಸ್ ಮಾಲೀಕರು ತಕರಾರು ತೆಗೆಯುತ್ತಿದ್ದಾರೆ. ಇದರಿಂದಾಗಿ ಸಾರಿಗೆ ನೌಕರರ ಮುಷ್ಕರದ ಸಂಕಷ್ಟ ಅನುಭವಿಸುತ್ತಿರುವ ಅಧಿಕಾರಿಗಳಿಗೆ ಈಗ ಖಾಸಗಿ ಬಸ್​ ಮಾಲೀಕರ ಮನವೊಲಿಸುವ ಅನಿವಾರ್ಯತೆಯೂ ಎದುರಾಗಿದ್ದು ಅವರ ಪರಿಸ್ಥಿತಿ ಕೋಲು ಕೊಟ್ಟು ಪೆಟ್ಟು ತಿಂದಂತಾಗಿದೆ.

ಮೈಸೂರಿನಲ್ಲಿ ಅರ್ಧಗಂಟೆಗೊಂದರಂತೆ ಸರ್ಕಾರಿ ಬಸ್​ ವ್ಯವಸ್ಥೆ ಮಾಡಿದ್ದು, ಕೆಲ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಎಸ್​ಆರ್​ಟಿಸಿ ಬಸ್​ ಚಾಲನೆ ಆರಂಭವಾಗುತ್ತಿದ್ದಂತೆಯೇ ಖಾಸಗಿ ಬಸ್​ ಮಾಲೀಕರು ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬಸ್​ ಓಡಿಸೋದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಂತರ ಪೊಲೀಸರು ಮಧ್ಯೆಪ್ರವೇಶಿಸಿ ಪರಿಸ್ಥಿತಿ ಬಗೆಹರಿಸುವ ಪ್ರಯತ್ನ ಮಾಡಿದ್ದು, ಸಾರಿಗೆ ಅಧಿಕಾರಿಗಳು ಅರ್ಧ ಗಂಟೆಗೊಂದರಂತೆ ಬಸ್​ ಬಿಡುವುದಿಲ್ಲ, ನಾವು ಬಸ್ ತರಿಸಲ್ಲ ಎಂದು ಖಾಸಗಿ ಬಸ್​ ಮಾಲೀಕರಿಗೆ ಮಾತು ಕೊಡಬೇಕಾದ ಅನಿವಾರ್ಯತೆ ಎದುರಾಯಿತು. ಅಧಿಕಾರಿಗಳು ಭರವಸೆ ಕೊಟ್ಟ ನಂತರವಷ್ಟೇ ಖಾಸಗಿ ಬಸ್​ಗಳು ಮತ್ತೆ ಸಂಚಾರ ಆರಂಭಿಸಿವೆ.

ಈ ಮಧ್ಯೆ, ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ಯಾವ ಆದೇಶಕ್ಕೂ ಜಗ್ಗದ ನೌಕರರು ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ನಾಲ್ಕು ನಿಗಮಗಳ ನೌಕರರೂ ಕರ್ತವ್ಯಕ್ಕೆ ಹಾಜರಾಗದೇ ದೂರ ಉಳಿದಿದ್ದು ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಮುಖಂಡರು ತಯಾರಿಯಲ್ಲಿ ತೊಡಗಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರು ಸಭೆ ನಡೆಸಲಿದ್ದು, ಯಾವ ರೀತಿ ಮುಷ್ಕರವನ್ನು ಮುಂದುವರೆಸಬೇಕೆಂದು ತೀರ್ಮಾನಿಸಲಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲಿಸಿದವರಿಗೆ ಸರ್ಕಾರದಿಂದ ನೋಟಿಸ್​ 

ಸಾರಿಗೆ ನಿಗಮ ನೌಕರರ ಮುಷ್ಕರ, ಕೆಎಸ್​ಆರ್​ಟಿಸಿಗೆ ಮೂರು ದಿನಗಳಲ್ಲಿ ರೂ. 51 ಕೋಟಿ ನಷ್ಟ!

(KSRTC BMTC Workers Strike: Private Bus owners opposes to operate KSRTC bus in Mysuru)

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ