AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸರ್ಕಾರಿ ಬಸ್​ ಸಂಚಾರಕ್ಕೆ ಖಾಸಗಿ ಮಾಲೀಕರಿಂದ ವಿರೋಧ; ಕೋಲು ಕೊಟ್ಟು ಪೆಟ್ಟು ತಿಂದಂತಾದ ಅಧಿಕಾರಿಗಳು

KSRTC BMTC Workers Strike: ಮೈಸೂರಿನಲ್ಲಿ ಅರ್ಧಗಂಟೆಗೊಂದರಂತೆ ಸರ್ಕಾರಿ ಬಸ್​ ವ್ಯವಸ್ಥೆ ಮಾಡಿದ್ದು, ಕೆಲ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಎಸ್​ಆರ್​ಟಿಸಿ ಬಸ್​ ಚಾಲನೆ ಆರಂಭವಾಗುತ್ತಿದ್ದಂತೆಯೇ ಖಾಸಗಿ ಬಸ್​ ಮಾಲೀಕರು ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬಸ್​ ಓಡಿಸೋದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

Bus Strike: ಸರ್ಕಾರಿ ಬಸ್​ ಸಂಚಾರಕ್ಕೆ ಖಾಸಗಿ ಮಾಲೀಕರಿಂದ ವಿರೋಧ; ಕೋಲು ಕೊಟ್ಟು ಪೆಟ್ಟು ತಿಂದಂತಾದ ಅಧಿಕಾರಿಗಳು
ಕೆಎಸ್​ಆರ್​ಟಿಸಿ
Skanda
| Edited By: |

Updated on: Apr 10, 2021 | 8:19 AM

Share

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಮುಷ್ಕರ ಹೂಡಿರುವ ಸಾರಿಗೆ ನೌಕರರು ಪಟ್ಟು ಸಡಿಲಿಸಲು ಒಪ್ಪದ ಕಾರಣ ನಾಲ್ಕನೇ ದಿನವೂ ರಾಜ್ಯದಲ್ಲಿ ಸರ್ಕಾರಿ ಬಸ್​ಗಳು ರಸ್ತೆಗಿಳಿದಿಲ್ಲ. ಕೆಲವೆಡೆ ತರಬೇತಿ ನಿರತ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲಾಗುತ್ತಿದೆಯಾದರೂ ಬೆರಳೆಣಿಕೆ ಸಂಖ್ಯೆಯಲ್ಲಿ ಮಾತ್ರ ಅದು ಸಾಧ್ಯವಾಗಿದೆ. ಹೀಗಾಗಿ ಸಾರಿಗೆ ನಿಗಮದ ಅಧಿಕಾರಿಗಳು ಖಾಸಗಿ ಬಸ್​ಗಳನ್ನೇ ಮುಂದಿಟ್ಟುಕೊಂಡು ಸಂಚಾರ ವ್ಯವಸ್ಥೆ ನಿರ್ವಹಿಸುತ್ತಿದ್ದಾರೆ. ಆದರೆ, ಇದೇ ಅವರಿಗೆ ಮುಳುವಾಗಿದ್ದು ಕೆಲವೆಡೆ ಸರ್ಕಾರಿ ಬಸ್​ ಬಿಡೋಣವೆಂದರೂ ಖಾಸಗಿ ಬಸ್ ಮಾಲೀಕರು ತಕರಾರು ತೆಗೆಯುತ್ತಿದ್ದಾರೆ. ಇದರಿಂದಾಗಿ ಸಾರಿಗೆ ನೌಕರರ ಮುಷ್ಕರದ ಸಂಕಷ್ಟ ಅನುಭವಿಸುತ್ತಿರುವ ಅಧಿಕಾರಿಗಳಿಗೆ ಈಗ ಖಾಸಗಿ ಬಸ್​ ಮಾಲೀಕರ ಮನವೊಲಿಸುವ ಅನಿವಾರ್ಯತೆಯೂ ಎದುರಾಗಿದ್ದು ಅವರ ಪರಿಸ್ಥಿತಿ ಕೋಲು ಕೊಟ್ಟು ಪೆಟ್ಟು ತಿಂದಂತಾಗಿದೆ.

ಮೈಸೂರಿನಲ್ಲಿ ಅರ್ಧಗಂಟೆಗೊಂದರಂತೆ ಸರ್ಕಾರಿ ಬಸ್​ ವ್ಯವಸ್ಥೆ ಮಾಡಿದ್ದು, ಕೆಲ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಎಸ್​ಆರ್​ಟಿಸಿ ಬಸ್​ ಚಾಲನೆ ಆರಂಭವಾಗುತ್ತಿದ್ದಂತೆಯೇ ಖಾಸಗಿ ಬಸ್​ ಮಾಲೀಕರು ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬಸ್​ ಓಡಿಸೋದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಂತರ ಪೊಲೀಸರು ಮಧ್ಯೆಪ್ರವೇಶಿಸಿ ಪರಿಸ್ಥಿತಿ ಬಗೆಹರಿಸುವ ಪ್ರಯತ್ನ ಮಾಡಿದ್ದು, ಸಾರಿಗೆ ಅಧಿಕಾರಿಗಳು ಅರ್ಧ ಗಂಟೆಗೊಂದರಂತೆ ಬಸ್​ ಬಿಡುವುದಿಲ್ಲ, ನಾವು ಬಸ್ ತರಿಸಲ್ಲ ಎಂದು ಖಾಸಗಿ ಬಸ್​ ಮಾಲೀಕರಿಗೆ ಮಾತು ಕೊಡಬೇಕಾದ ಅನಿವಾರ್ಯತೆ ಎದುರಾಯಿತು. ಅಧಿಕಾರಿಗಳು ಭರವಸೆ ಕೊಟ್ಟ ನಂತರವಷ್ಟೇ ಖಾಸಗಿ ಬಸ್​ಗಳು ಮತ್ತೆ ಸಂಚಾರ ಆರಂಭಿಸಿವೆ.

ಈ ಮಧ್ಯೆ, ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ಯಾವ ಆದೇಶಕ್ಕೂ ಜಗ್ಗದ ನೌಕರರು ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ನಾಲ್ಕು ನಿಗಮಗಳ ನೌಕರರೂ ಕರ್ತವ್ಯಕ್ಕೆ ಹಾಜರಾಗದೇ ದೂರ ಉಳಿದಿದ್ದು ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಮುಖಂಡರು ತಯಾರಿಯಲ್ಲಿ ತೊಡಗಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರು ಸಭೆ ನಡೆಸಲಿದ್ದು, ಯಾವ ರೀತಿ ಮುಷ್ಕರವನ್ನು ಮುಂದುವರೆಸಬೇಕೆಂದು ತೀರ್ಮಾನಿಸಲಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲಿಸಿದವರಿಗೆ ಸರ್ಕಾರದಿಂದ ನೋಟಿಸ್​ 

ಸಾರಿಗೆ ನಿಗಮ ನೌಕರರ ಮುಷ್ಕರ, ಕೆಎಸ್​ಆರ್​ಟಿಸಿಗೆ ಮೂರು ದಿನಗಳಲ್ಲಿ ರೂ. 51 ಕೋಟಿ ನಷ್ಟ!

(KSRTC BMTC Workers Strike: Private Bus owners opposes to operate KSRTC bus in Mysuru)

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು