AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸರ್ಕಾರಿ ಬಸ್​ ಸಂಚಾರಕ್ಕೆ ಖಾಸಗಿ ಮಾಲೀಕರಿಂದ ವಿರೋಧ; ಕೋಲು ಕೊಟ್ಟು ಪೆಟ್ಟು ತಿಂದಂತಾದ ಅಧಿಕಾರಿಗಳು

KSRTC BMTC Workers Strike: ಮೈಸೂರಿನಲ್ಲಿ ಅರ್ಧಗಂಟೆಗೊಂದರಂತೆ ಸರ್ಕಾರಿ ಬಸ್​ ವ್ಯವಸ್ಥೆ ಮಾಡಿದ್ದು, ಕೆಲ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಎಸ್​ಆರ್​ಟಿಸಿ ಬಸ್​ ಚಾಲನೆ ಆರಂಭವಾಗುತ್ತಿದ್ದಂತೆಯೇ ಖಾಸಗಿ ಬಸ್​ ಮಾಲೀಕರು ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬಸ್​ ಓಡಿಸೋದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

Bus Strike: ಸರ್ಕಾರಿ ಬಸ್​ ಸಂಚಾರಕ್ಕೆ ಖಾಸಗಿ ಮಾಲೀಕರಿಂದ ವಿರೋಧ; ಕೋಲು ಕೊಟ್ಟು ಪೆಟ್ಟು ತಿಂದಂತಾದ ಅಧಿಕಾರಿಗಳು
ಕೆಎಸ್​ಆರ್​ಟಿಸಿ
Skanda
| Updated By: ಆಯೇಷಾ ಬಾನು|

Updated on: Apr 10, 2021 | 8:19 AM

Share

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಮುಷ್ಕರ ಹೂಡಿರುವ ಸಾರಿಗೆ ನೌಕರರು ಪಟ್ಟು ಸಡಿಲಿಸಲು ಒಪ್ಪದ ಕಾರಣ ನಾಲ್ಕನೇ ದಿನವೂ ರಾಜ್ಯದಲ್ಲಿ ಸರ್ಕಾರಿ ಬಸ್​ಗಳು ರಸ್ತೆಗಿಳಿದಿಲ್ಲ. ಕೆಲವೆಡೆ ತರಬೇತಿ ನಿರತ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲಾಗುತ್ತಿದೆಯಾದರೂ ಬೆರಳೆಣಿಕೆ ಸಂಖ್ಯೆಯಲ್ಲಿ ಮಾತ್ರ ಅದು ಸಾಧ್ಯವಾಗಿದೆ. ಹೀಗಾಗಿ ಸಾರಿಗೆ ನಿಗಮದ ಅಧಿಕಾರಿಗಳು ಖಾಸಗಿ ಬಸ್​ಗಳನ್ನೇ ಮುಂದಿಟ್ಟುಕೊಂಡು ಸಂಚಾರ ವ್ಯವಸ್ಥೆ ನಿರ್ವಹಿಸುತ್ತಿದ್ದಾರೆ. ಆದರೆ, ಇದೇ ಅವರಿಗೆ ಮುಳುವಾಗಿದ್ದು ಕೆಲವೆಡೆ ಸರ್ಕಾರಿ ಬಸ್​ ಬಿಡೋಣವೆಂದರೂ ಖಾಸಗಿ ಬಸ್ ಮಾಲೀಕರು ತಕರಾರು ತೆಗೆಯುತ್ತಿದ್ದಾರೆ. ಇದರಿಂದಾಗಿ ಸಾರಿಗೆ ನೌಕರರ ಮುಷ್ಕರದ ಸಂಕಷ್ಟ ಅನುಭವಿಸುತ್ತಿರುವ ಅಧಿಕಾರಿಗಳಿಗೆ ಈಗ ಖಾಸಗಿ ಬಸ್​ ಮಾಲೀಕರ ಮನವೊಲಿಸುವ ಅನಿವಾರ್ಯತೆಯೂ ಎದುರಾಗಿದ್ದು ಅವರ ಪರಿಸ್ಥಿತಿ ಕೋಲು ಕೊಟ್ಟು ಪೆಟ್ಟು ತಿಂದಂತಾಗಿದೆ.

ಮೈಸೂರಿನಲ್ಲಿ ಅರ್ಧಗಂಟೆಗೊಂದರಂತೆ ಸರ್ಕಾರಿ ಬಸ್​ ವ್ಯವಸ್ಥೆ ಮಾಡಿದ್ದು, ಕೆಲ ಸಿಬ್ಬಂದಿ ಮೂಲಕ ಬಸ್​ ಚಲಾಯಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಎಸ್​ಆರ್​ಟಿಸಿ ಬಸ್​ ಚಾಲನೆ ಆರಂಭವಾಗುತ್ತಿದ್ದಂತೆಯೇ ಖಾಸಗಿ ಬಸ್​ ಮಾಲೀಕರು ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬಸ್​ ಓಡಿಸೋದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಂತರ ಪೊಲೀಸರು ಮಧ್ಯೆಪ್ರವೇಶಿಸಿ ಪರಿಸ್ಥಿತಿ ಬಗೆಹರಿಸುವ ಪ್ರಯತ್ನ ಮಾಡಿದ್ದು, ಸಾರಿಗೆ ಅಧಿಕಾರಿಗಳು ಅರ್ಧ ಗಂಟೆಗೊಂದರಂತೆ ಬಸ್​ ಬಿಡುವುದಿಲ್ಲ, ನಾವು ಬಸ್ ತರಿಸಲ್ಲ ಎಂದು ಖಾಸಗಿ ಬಸ್​ ಮಾಲೀಕರಿಗೆ ಮಾತು ಕೊಡಬೇಕಾದ ಅನಿವಾರ್ಯತೆ ಎದುರಾಯಿತು. ಅಧಿಕಾರಿಗಳು ಭರವಸೆ ಕೊಟ್ಟ ನಂತರವಷ್ಟೇ ಖಾಸಗಿ ಬಸ್​ಗಳು ಮತ್ತೆ ಸಂಚಾರ ಆರಂಭಿಸಿವೆ.

ಈ ಮಧ್ಯೆ, ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ಯಾವ ಆದೇಶಕ್ಕೂ ಜಗ್ಗದ ನೌಕರರು ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ನಾಲ್ಕು ನಿಗಮಗಳ ನೌಕರರೂ ಕರ್ತವ್ಯಕ್ಕೆ ಹಾಜರಾಗದೇ ದೂರ ಉಳಿದಿದ್ದು ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಮುಖಂಡರು ತಯಾರಿಯಲ್ಲಿ ತೊಡಗಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರು ಸಭೆ ನಡೆಸಲಿದ್ದು, ಯಾವ ರೀತಿ ಮುಷ್ಕರವನ್ನು ಮುಂದುವರೆಸಬೇಕೆಂದು ತೀರ್ಮಾನಿಸಲಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲಿಸಿದವರಿಗೆ ಸರ್ಕಾರದಿಂದ ನೋಟಿಸ್​ 

ಸಾರಿಗೆ ನಿಗಮ ನೌಕರರ ಮುಷ್ಕರ, ಕೆಎಸ್​ಆರ್​ಟಿಸಿಗೆ ಮೂರು ದಿನಗಳಲ್ಲಿ ರೂ. 51 ಕೋಟಿ ನಷ್ಟ!

(KSRTC BMTC Workers Strike: Private Bus owners opposes to operate KSRTC bus in Mysuru)

ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್