AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

ಕೆಎಸ್ಆರ್​ಟಿಸಿ ಡಿಪೋಗಳಿಂದ ಹೊರರಾಜ್ಯಕ್ಕೆ ಹೋಗುವ ಬಸ್​ಗಳಲ್ಲಿ ಡ್ಯೂಟಿ ಬೇಕು ಅಂದರೆ ಅಧಿಕಾರಿಗಳಿಗೆ ಲಂಚ ಕೊಡಬೇಕು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಒಂದು ವೇಳೆ ಲಂಚ ಕೊಡದಿದ್ದರೆ ಕಿರುಕುಳ ಕೊಡುತ್ತಾರೆ ಎನ್ನಲಾಗಿದೆ. ಇದೀಗ ಈ ಆರೋಪ ಸಂಬಂಧ ಮತ್ತು ಗೂಗಲ್ ಪೇ ಮೂಲಕ ಲಂಚ ಪಡೆದಿರುವ ಸಂಪೂರ್ಣ ದಾಖಲೆ ‘ಟಿವಿ9’ಗೆ ಲಭ್ಯವಾಗಿದೆ.

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!
ಕೆಎಸ್ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
ಕಿರಣ್​ ಸೂರ್ಯ
| Edited By: |

Updated on:Aug 25, 2025 | 7:41 AM

Share

ಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದ ಬಗ್ಗೆ ‘ಟಿವಿ9’ ಸುದ್ದಿ ಪ್ರಸಾರ ಮಾಡಿತ್ತು. ಆ ನಂತರ 13 ಮಂದಿ ಅಧಿಕಾರಿಗಳು ಅಮಾನತು ಕೂಡ ಆಗಿದ್ದರು. ಇದೀಗ ಲಂಚ ಪಡೆಯುವ ಸರದಿ ಕೆಎಸ್ಆರ್​ಟಿಸಿಗೂ (KSRTC) ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದಕ್ಕೆ ಸಾಕ್ಷ್ಯವೂ ಲಭ್ಯವಾಗಿದೆ. ಕೆಎಸ್ಆರ್​ಟಿಸಿ ಡಿಪೋ- 1 ರಲ್ಲಿ ಸುಮಾರು 100ಕ್ಕೂ ಬಸ್​​ಗಳಿವೆ. ಈ ಬಸ್​​ಗಳು ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು ಸೇರಿದಂತೆ ಬೇರೆಬೇರೆ ರಾಜ್ಯಗಳಿಗೆ ಸಂಚಾರ ಮಾಡುತ್ತವೆ. ಇದರಿಂದ ಚಾಲಕ ಮತ್ತು ಕಂಡಕ್ಟರ್​ಗಳಿಗೆ ಸಾವಿರಾರು ರೂಪಾಯಿ ಭತ್ಯೆ ಮತ್ತು ಒಟಿ ದೊರೆಯುತ್ತದೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಅಸಿಸ್ಟೆಂಟ್ ಟ್ರಾಫಿಕ್ ಇನ್ಸ್‌ಪೆಕ್ಟರ್ (ATI) ಸಂಗೀತ, ಅಸಿಸ್ಟೆಂಟ್ ಟ್ರಾಫಿಕ್ ಸೂಪರಿಂಟೆಂಡೆಂಟ್ (ATS) ಸ್ವಪ್ನ, ಡ್ರೈವರ್ ಮತ್ತು ಕಂಡಕ್ಟರ್​​ಗಳಿಂದ ಗೂಗಲ್ ಪೇ, ಫೋನ್ ಪೇ ಮೂಲಕ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದು, ಈ ಬಗ್ಗೆ ಕೆಎಸ್ಆರ್​ಟಿಸಿ ಎಂಡಿಗೆ ದಾಖಲೆ ಸಮೇತ ದೂರು ನೀಡಲಾಗಿದೆ.

ಹಣ ನೀಡಿಲ್ಲವೆಂದಾದರೆ ಅಂತಹ ಡ್ರೈವರ್, ಕಂಡಕ್ಟರ್​​ಗಳಿಗೆ ಸರಿಯಾಗಿ ಡ್ಯೂಟಿ ನೀಡದೆ ಮತ್ತು ರಜೆ ನೀಡದೆ ಸತಾಯಿಸಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಡ್ರೈವರ್, ಕಂಡಕ್ಟರ್​ಗಳು ಅನಿವಾರ್ಯವಾಗಿ ಲಂಚ ನೀಡಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಈ ಇಬ್ಬರು ಅಧಿಕಾರಿಗಳು ಕೇವಲ ಉದಾಹರಣೆ ಅಷ್ಟೇ, ಕೆಎಸ್ಆರ್​ಟಿಸಿ ಡಿಪೋಗಳಲ್ಲಿ ಲಂಚ ನೀಡಿದರೆ ಮಾತ್ರ ಡ್ಯೂಟಿ ಎಂಬ ಕೆಟ್ಟ ವ್ಯವಸ್ಥೆ ಜಾರಿಯಾಲಿದ್ದು, ಈ ಹಣದಲ್ಲಿ ಹಿರಿಯ ಅಧಿಕಾರಿಗಳಿಗೂ ಪಾಲಿದೆ ಎಂಬ ಗಂಭೀರ ಆರೋಪವಿದೆ.

ಕೆಎಸ್ಆರ್​ಟಿಸಿ ಅಧಿಕಾರಿಗಳು ಲಂಚ ಪಡೆದ ಆರೋಪ: ಸಾರಿಗೆ ಸಚಿವರು ಹೇಳಿದ್ದೇನು?

ಕೆಎಸ್ಆರ್​ಟಿಸಿ ಅಧಿಕಾರಿಗಳು ಲಂಚ ಪಡೆಯುತ್ತಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಕೂಡಲೇ ಕ್ರಮ ಕೈಗೊಳ್ಳಲು ಕೆಎಸ್ಆರ್​ಟಿಸಿ ಎಂಡಿ ಅಕ್ರಂ ಪಾಷ ಅವರಿಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಗಣೇಶ ಹಬ್ಬದ ಪ್ರಯುಕ್ತ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

ಒಟ್ಟಿನಲ್ಲಿ, ಹಗಲು ರಾತ್ರಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುವ ಕಂಡಕ್ಟರ್, ಡ್ರೈವರ್​​ಗಳ ಬಳಿಯೇ ಈ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದರೆ, ಇವರಿಗೆಲ್ಲ ಹಿರಿಯ ಅಧಿಕಾರಿಗಳ ಬೆಂಬಲ ಇಲ್ಲದೆ ಇರುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಸರಿಯಾದ ತನಿಖೆ ಮಾಡಿದರೆ ಎಲ್ಲವೂ ಬಯಲಿಗೆ ಬರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Mon, 25 August 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ