AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

ಕೆಎಸ್ಆರ್​ಟಿಸಿ ಡಿಪೋಗಳಿಂದ ಹೊರರಾಜ್ಯಕ್ಕೆ ಹೋಗುವ ಬಸ್​ಗಳಲ್ಲಿ ಡ್ಯೂಟಿ ಬೇಕು ಅಂದರೆ ಅಧಿಕಾರಿಗಳಿಗೆ ಲಂಚ ಕೊಡಬೇಕು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಒಂದು ವೇಳೆ ಲಂಚ ಕೊಡದಿದ್ದರೆ ಕಿರುಕುಳ ಕೊಡುತ್ತಾರೆ ಎನ್ನಲಾಗಿದೆ. ಇದೀಗ ಈ ಆರೋಪ ಸಂಬಂಧ ಮತ್ತು ಗೂಗಲ್ ಪೇ ಮೂಲಕ ಲಂಚ ಪಡೆದಿರುವ ಸಂಪೂರ್ಣ ದಾಖಲೆ ‘ಟಿವಿ9’ಗೆ ಲಭ್ಯವಾಗಿದೆ.

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!
ಕೆಎಸ್ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
Kiran Surya
| Edited By: |

Updated on:Aug 25, 2025 | 7:41 AM

Share

ಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದ ಬಗ್ಗೆ ‘ಟಿವಿ9’ ಸುದ್ದಿ ಪ್ರಸಾರ ಮಾಡಿತ್ತು. ಆ ನಂತರ 13 ಮಂದಿ ಅಧಿಕಾರಿಗಳು ಅಮಾನತು ಕೂಡ ಆಗಿದ್ದರು. ಇದೀಗ ಲಂಚ ಪಡೆಯುವ ಸರದಿ ಕೆಎಸ್ಆರ್​ಟಿಸಿಗೂ (KSRTC) ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದಕ್ಕೆ ಸಾಕ್ಷ್ಯವೂ ಲಭ್ಯವಾಗಿದೆ. ಕೆಎಸ್ಆರ್​ಟಿಸಿ ಡಿಪೋ- 1 ರಲ್ಲಿ ಸುಮಾರು 100ಕ್ಕೂ ಬಸ್​​ಗಳಿವೆ. ಈ ಬಸ್​​ಗಳು ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು ಸೇರಿದಂತೆ ಬೇರೆಬೇರೆ ರಾಜ್ಯಗಳಿಗೆ ಸಂಚಾರ ಮಾಡುತ್ತವೆ. ಇದರಿಂದ ಚಾಲಕ ಮತ್ತು ಕಂಡಕ್ಟರ್​ಗಳಿಗೆ ಸಾವಿರಾರು ರೂಪಾಯಿ ಭತ್ಯೆ ಮತ್ತು ಒಟಿ ದೊರೆಯುತ್ತದೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಅಸಿಸ್ಟೆಂಟ್ ಟ್ರಾಫಿಕ್ ಇನ್ಸ್‌ಪೆಕ್ಟರ್ (ATI) ಸಂಗೀತ, ಅಸಿಸ್ಟೆಂಟ್ ಟ್ರಾಫಿಕ್ ಸೂಪರಿಂಟೆಂಡೆಂಟ್ (ATS) ಸ್ವಪ್ನ, ಡ್ರೈವರ್ ಮತ್ತು ಕಂಡಕ್ಟರ್​​ಗಳಿಂದ ಗೂಗಲ್ ಪೇ, ಫೋನ್ ಪೇ ಮೂಲಕ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದು, ಈ ಬಗ್ಗೆ ಕೆಎಸ್ಆರ್​ಟಿಸಿ ಎಂಡಿಗೆ ದಾಖಲೆ ಸಮೇತ ದೂರು ನೀಡಲಾಗಿದೆ.

ಹಣ ನೀಡಿಲ್ಲವೆಂದಾದರೆ ಅಂತಹ ಡ್ರೈವರ್, ಕಂಡಕ್ಟರ್​​ಗಳಿಗೆ ಸರಿಯಾಗಿ ಡ್ಯೂಟಿ ನೀಡದೆ ಮತ್ತು ರಜೆ ನೀಡದೆ ಸತಾಯಿಸಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಡ್ರೈವರ್, ಕಂಡಕ್ಟರ್​ಗಳು ಅನಿವಾರ್ಯವಾಗಿ ಲಂಚ ನೀಡಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಈ ಇಬ್ಬರು ಅಧಿಕಾರಿಗಳು ಕೇವಲ ಉದಾಹರಣೆ ಅಷ್ಟೇ, ಕೆಎಸ್ಆರ್​ಟಿಸಿ ಡಿಪೋಗಳಲ್ಲಿ ಲಂಚ ನೀಡಿದರೆ ಮಾತ್ರ ಡ್ಯೂಟಿ ಎಂಬ ಕೆಟ್ಟ ವ್ಯವಸ್ಥೆ ಜಾರಿಯಾಲಿದ್ದು, ಈ ಹಣದಲ್ಲಿ ಹಿರಿಯ ಅಧಿಕಾರಿಗಳಿಗೂ ಪಾಲಿದೆ ಎಂಬ ಗಂಭೀರ ಆರೋಪವಿದೆ.

ಕೆಎಸ್ಆರ್​ಟಿಸಿ ಅಧಿಕಾರಿಗಳು ಲಂಚ ಪಡೆದ ಆರೋಪ: ಸಾರಿಗೆ ಸಚಿವರು ಹೇಳಿದ್ದೇನು?

ಕೆಎಸ್ಆರ್​ಟಿಸಿ ಅಧಿಕಾರಿಗಳು ಲಂಚ ಪಡೆಯುತ್ತಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಕೂಡಲೇ ಕ್ರಮ ಕೈಗೊಳ್ಳಲು ಕೆಎಸ್ಆರ್​ಟಿಸಿ ಎಂಡಿ ಅಕ್ರಂ ಪಾಷ ಅವರಿಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಗಣೇಶ ಹಬ್ಬದ ಪ್ರಯುಕ್ತ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

ಒಟ್ಟಿನಲ್ಲಿ, ಹಗಲು ರಾತ್ರಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುವ ಕಂಡಕ್ಟರ್, ಡ್ರೈವರ್​​ಗಳ ಬಳಿಯೇ ಈ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದರೆ, ಇವರಿಗೆಲ್ಲ ಹಿರಿಯ ಅಧಿಕಾರಿಗಳ ಬೆಂಬಲ ಇಲ್ಲದೆ ಇರುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಸರಿಯಾದ ತನಿಖೆ ಮಾಡಿದರೆ ಎಲ್ಲವೂ ಬಯಲಿಗೆ ಬರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Mon, 25 August 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್