AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸರ್ಕಾರಿ ರೆಡ್​ ಬಸ್ ಸಂಚಾರಕ್ಕೆ ಸಿಕ್ತು ಹಸಿರು ನಿಶಾನೆ! BMTCಗೆ​?

ಬೆಂಗಳೂರು: ಕಾತುರದಿಂದ ಕಾಯುತ್ತಿದ್ದ ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಿಂದಾಗಿ ರಸ್ತೆಗಿಳಿಯದೇ ಸ್ತಗಿತಗೊಂಡಿದ್ದ ಕೆಂಪು ಬಸ್​ಗಳು ನಾಳೆಯಿಂದ ರಸ್ತೆಗಿಳಿಯಲಿವೆ. ನಾಳೆಯಿಂದ ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಒಂದು ಬಸ್‌ನಲ್ಲಿ 30 ಜನರಿಗೆ ಮಾತ್ರ ಅವಕಾಶವಿರುತ್ತದೆ. ರಾಜ್ಯದೊಳಗೆ ಮಾತ್ರ KSRTC ಬಸ್‌ಗಳ ಸಂಚಾರ ನಡೆಸಲಿವೆ. ಬಿಎಂಟಿಸಿ ಬಸ್ ಸಂಚಾರ ಬೇಡ:ಸವದಿ ಮೇ ಅಂತ್ಯದವರೆಗೆ ಬಿಎಂಟಿಸಿ ಬಸ್ ಸಂಚಾರ ಬೇಡ ಎಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ […]

ರಾಜ್ಯದಲ್ಲಿ ಸರ್ಕಾರಿ ರೆಡ್​ ಬಸ್ ಸಂಚಾರಕ್ಕೆ ಸಿಕ್ತು ಹಸಿರು ನಿಶಾನೆ! BMTCಗೆ​?
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​
|

Updated on:May 18, 2020 | 1:06 PM

Share

ಬೆಂಗಳೂರು: ಕಾತುರದಿಂದ ಕಾಯುತ್ತಿದ್ದ ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಿಂದಾಗಿ ರಸ್ತೆಗಿಳಿಯದೇ ಸ್ತಗಿತಗೊಂಡಿದ್ದ ಕೆಂಪು ಬಸ್​ಗಳು ನಾಳೆಯಿಂದ ರಸ್ತೆಗಿಳಿಯಲಿವೆ. ನಾಳೆಯಿಂದ ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಒಂದು ಬಸ್‌ನಲ್ಲಿ 30 ಜನರಿಗೆ ಮಾತ್ರ ಅವಕಾಶವಿರುತ್ತದೆ. ರಾಜ್ಯದೊಳಗೆ ಮಾತ್ರ KSRTC ಬಸ್‌ಗಳ ಸಂಚಾರ ನಡೆಸಲಿವೆ.

ಬಿಎಂಟಿಸಿ ಬಸ್ ಸಂಚಾರ ಬೇಡ:ಸವದಿ ಮೇ ಅಂತ್ಯದವರೆಗೆ ಬಿಎಂಟಿಸಿ ಬಸ್ ಸಂಚಾರ ಬೇಡ ಎಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಸಲಹೆ ನೀಡಿದ್ದಾರೆ.

ಕೆಎಸ್ಆರ್​ಟಿಸಿ ಬಸ್ ಸಂಚಾರಕ್ಕೆ ಪಾಲಿಸಬೇಕಿರುವ ನಿಯಮಗಳು: -ಪ್ರತಿ KSRTC ಬಸ್​ನಲ್ಲಿ 30 ಜನರಿಗೆ ಮಾತ್ರ ಪ್ರಯಾಣಿಸಲು ಅವಕಾಶ -ಎಸಿ ಬಸ್​ಗಳ ಸಂಚಾರಕ್ಕೆ ಅನುಮತಿ ಇಲ್ಲ -ಪ್ರಯಾಣಿಕರು ಸಾಮಾಜಿಕ ಅಂತರ ಪಾಲಿಸೋದು ಕಡ್ಡಾಯ -ಡಬಲ್​ ಸೀಟ್​ನಲ್ಲಿ ಒಬ್ಬರಿಗೆ, ಮೂರು ಆಸನದ ಸೀಟ್​ನಲ್ಲಿ ಇಬ್ಬರಿಗೆ ಮಾತ್ರ ಕೂರಲು ಅವಕಾಶ -ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು -ಬಸ್ ಹತ್ತುವ ಮುನ್ನ ಥರ್ಮಲ್ ಸ್ಕ್ಯಾನ್, ಕೈಗೆ ಸ್ಯಾನಿಟೈಸರ್ ಹಾಕುವುದು ಕಡ್ಡಾಯ -ಬಸ್​ನಲ್ಲಿ ನಿಂತು ಕೊಂಡು ಪ್ರಯಾಣಿಸಲು ಅವಕಾಶ ಇಲ್ಲ -ಕಂಟೇನ್ಮೆಂಟ್ ಝೋನ್‌ಗಳಲ್ಲಿ ಬಸ್ ನಿಲ್ಲಿಸಲ್ಲ -ಮಾರ್ಗ ಮಧ್ಯದಲ್ಲಿ ತಿಂಡಿ ಊಟಕ್ಕೆ ನಿಲ್ಲಿಸದಿರಲು ಪ್ಲಾನ್‌ -ಪ್ರಯಾಣಿಕರು ತಮ್ಮ ವಿಳಾಸ, ಮೊಬೈಲ್, ಹೆಸರು ಕಡ್ಡಾಯವಾಗಿ ನೀಡಬೇಕು -ಪ್ರತಿ ಬಸ್ ನಿಲ್ದಾಣದಲ್ಲಿ ಹೆಲ್ತ್ ಚೆಕ್ ಮಾಡುವುದು ಕಡ್ಡಾಯ -ಬಸ್ ಒಳಗೆ ಒಬ್ಬ ಪ್ರಯಾಣಿಕನಿಂದ ಮತ್ತೊಮ್ಮೆ ಪ್ರಯಾಣಿಕ ನೀರು ಕೇಳಿ ಕುಡಿಯುವಂತಿಲ್ಲ. -ಬಳಕೆ ಮಾಡಿದ ಬಾಟಲ್ ಬೇರೆಯವರು ಬಳಸುವಂತಿಲ್ಲ -ಲಗೇಜ್​ಗಳನ್ನ ತಂದರೆ ಸ್ಯಾನಿಟೈಸರ್ ಸ್ಪ್ರೇ ಕಡ್ಡಾಯ ಹಾಗೂ 70 ವರ್ಷ ಮೇಲ್ಪಟ್ಟವರು, ಗರ್ಭಿಣಿ, ಮಕ್ಕಳಿಗೆ ಬಸ್ ಪ್ರಯಾಣಕ್ಕೆ ಅವಕಾಶ ನೀಡಬೇಕ ಎಂಬುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.

Published On - 12:49 pm, Mon, 18 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ