AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸರ್ಕಾರಿ ರೆಡ್​ ಬಸ್ ಸಂಚಾರಕ್ಕೆ ಸಿಕ್ತು ಹಸಿರು ನಿಶಾನೆ! BMTCಗೆ​?

ಬೆಂಗಳೂರು: ಕಾತುರದಿಂದ ಕಾಯುತ್ತಿದ್ದ ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಿಂದಾಗಿ ರಸ್ತೆಗಿಳಿಯದೇ ಸ್ತಗಿತಗೊಂಡಿದ್ದ ಕೆಂಪು ಬಸ್​ಗಳು ನಾಳೆಯಿಂದ ರಸ್ತೆಗಿಳಿಯಲಿವೆ. ನಾಳೆಯಿಂದ ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಒಂದು ಬಸ್‌ನಲ್ಲಿ 30 ಜನರಿಗೆ ಮಾತ್ರ ಅವಕಾಶವಿರುತ್ತದೆ. ರಾಜ್ಯದೊಳಗೆ ಮಾತ್ರ KSRTC ಬಸ್‌ಗಳ ಸಂಚಾರ ನಡೆಸಲಿವೆ. ಬಿಎಂಟಿಸಿ ಬಸ್ ಸಂಚಾರ ಬೇಡ:ಸವದಿ ಮೇ ಅಂತ್ಯದವರೆಗೆ ಬಿಎಂಟಿಸಿ ಬಸ್ ಸಂಚಾರ ಬೇಡ ಎಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ […]

ರಾಜ್ಯದಲ್ಲಿ ಸರ್ಕಾರಿ ರೆಡ್​ ಬಸ್ ಸಂಚಾರಕ್ಕೆ ಸಿಕ್ತು ಹಸಿರು ನಿಶಾನೆ! BMTCಗೆ​?
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​
|

Updated on:May 18, 2020 | 1:06 PM

Share

ಬೆಂಗಳೂರು: ಕಾತುರದಿಂದ ಕಾಯುತ್ತಿದ್ದ ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಿಂದಾಗಿ ರಸ್ತೆಗಿಳಿಯದೇ ಸ್ತಗಿತಗೊಂಡಿದ್ದ ಕೆಂಪು ಬಸ್​ಗಳು ನಾಳೆಯಿಂದ ರಸ್ತೆಗಿಳಿಯಲಿವೆ. ನಾಳೆಯಿಂದ ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಒಂದು ಬಸ್‌ನಲ್ಲಿ 30 ಜನರಿಗೆ ಮಾತ್ರ ಅವಕಾಶವಿರುತ್ತದೆ. ರಾಜ್ಯದೊಳಗೆ ಮಾತ್ರ KSRTC ಬಸ್‌ಗಳ ಸಂಚಾರ ನಡೆಸಲಿವೆ.

ಬಿಎಂಟಿಸಿ ಬಸ್ ಸಂಚಾರ ಬೇಡ:ಸವದಿ ಮೇ ಅಂತ್ಯದವರೆಗೆ ಬಿಎಂಟಿಸಿ ಬಸ್ ಸಂಚಾರ ಬೇಡ ಎಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಸಲಹೆ ನೀಡಿದ್ದಾರೆ.

ಕೆಎಸ್ಆರ್​ಟಿಸಿ ಬಸ್ ಸಂಚಾರಕ್ಕೆ ಪಾಲಿಸಬೇಕಿರುವ ನಿಯಮಗಳು: -ಪ್ರತಿ KSRTC ಬಸ್​ನಲ್ಲಿ 30 ಜನರಿಗೆ ಮಾತ್ರ ಪ್ರಯಾಣಿಸಲು ಅವಕಾಶ -ಎಸಿ ಬಸ್​ಗಳ ಸಂಚಾರಕ್ಕೆ ಅನುಮತಿ ಇಲ್ಲ -ಪ್ರಯಾಣಿಕರು ಸಾಮಾಜಿಕ ಅಂತರ ಪಾಲಿಸೋದು ಕಡ್ಡಾಯ -ಡಬಲ್​ ಸೀಟ್​ನಲ್ಲಿ ಒಬ್ಬರಿಗೆ, ಮೂರು ಆಸನದ ಸೀಟ್​ನಲ್ಲಿ ಇಬ್ಬರಿಗೆ ಮಾತ್ರ ಕೂರಲು ಅವಕಾಶ -ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು -ಬಸ್ ಹತ್ತುವ ಮುನ್ನ ಥರ್ಮಲ್ ಸ್ಕ್ಯಾನ್, ಕೈಗೆ ಸ್ಯಾನಿಟೈಸರ್ ಹಾಕುವುದು ಕಡ್ಡಾಯ -ಬಸ್​ನಲ್ಲಿ ನಿಂತು ಕೊಂಡು ಪ್ರಯಾಣಿಸಲು ಅವಕಾಶ ಇಲ್ಲ -ಕಂಟೇನ್ಮೆಂಟ್ ಝೋನ್‌ಗಳಲ್ಲಿ ಬಸ್ ನಿಲ್ಲಿಸಲ್ಲ -ಮಾರ್ಗ ಮಧ್ಯದಲ್ಲಿ ತಿಂಡಿ ಊಟಕ್ಕೆ ನಿಲ್ಲಿಸದಿರಲು ಪ್ಲಾನ್‌ -ಪ್ರಯಾಣಿಕರು ತಮ್ಮ ವಿಳಾಸ, ಮೊಬೈಲ್, ಹೆಸರು ಕಡ್ಡಾಯವಾಗಿ ನೀಡಬೇಕು -ಪ್ರತಿ ಬಸ್ ನಿಲ್ದಾಣದಲ್ಲಿ ಹೆಲ್ತ್ ಚೆಕ್ ಮಾಡುವುದು ಕಡ್ಡಾಯ -ಬಸ್ ಒಳಗೆ ಒಬ್ಬ ಪ್ರಯಾಣಿಕನಿಂದ ಮತ್ತೊಮ್ಮೆ ಪ್ರಯಾಣಿಕ ನೀರು ಕೇಳಿ ಕುಡಿಯುವಂತಿಲ್ಲ. -ಬಳಕೆ ಮಾಡಿದ ಬಾಟಲ್ ಬೇರೆಯವರು ಬಳಸುವಂತಿಲ್ಲ -ಲಗೇಜ್​ಗಳನ್ನ ತಂದರೆ ಸ್ಯಾನಿಟೈಸರ್ ಸ್ಪ್ರೇ ಕಡ್ಡಾಯ ಹಾಗೂ 70 ವರ್ಷ ಮೇಲ್ಪಟ್ಟವರು, ಗರ್ಭಿಣಿ, ಮಕ್ಕಳಿಗೆ ಬಸ್ ಪ್ರಯಾಣಕ್ಕೆ ಅವಕಾಶ ನೀಡಬೇಕ ಎಂಬುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.

Published On - 12:49 pm, Mon, 18 May 20

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌