AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ನಾಳೆಯಿಂದಲೇ ಮಹಾರಾಷ್ಟ್ರಕ್ಕೆ ಕೆಎಸ್​ಆರ್​ಟಿಸಿ ಬಸ್ ಸೇವೆ ಆರಂಭ

ಮುಂಬೈ, ಪುಣೆ, ಮಿರಜ್, ಸೊಲ್ಲಾಪುರ, ಪಾಂಡವಪುರ, ತುಳಜಾಪುರಗಳಿಗೆ ಕೆಎಸ್​ಆರ್​ಟಿಸಿ ಬಸ್​ಗಳು ರಾಜ್ಯದಿಂದ ಹೊರಡಲಿವೆ. ಕೆಎಸ್​ಆರ್​ಟಿಸಿ ವೆಬ್​ಸೈಟ್ ಮೂಲಕ ಟಿಕೆಟ್ ಬುಕಿಂಗ್​ಗೆ ಅವಕಾಶವಿದ್ದು, ಬಸ್​ನಲ್ಲಿ ಪ್ರಯಾಣಿಕರು ಕೊವಿಡ್ ನಿಯಮ ಪಾಲಿಸಬೇಕು ಎಂದು ಸಂಸ್ಥೆ ತಿಳಿಸಿದೆ.

KSRTC: ನಾಳೆಯಿಂದಲೇ ಮಹಾರಾಷ್ಟ್ರಕ್ಕೆ ಕೆಎಸ್​ಆರ್​ಟಿಸಿ ಬಸ್ ಸೇವೆ ಆರಂಭ
ಕೆಎಸ್​ಆರ್​ಟಿಸಿ ಬಸ್​ (ಸಾಂದರ್ಭಿಕ ಚಿತ್ರ)
TV9 Web
| Updated By: guruganesh bhat

Updated on:Jun 24, 2021 | 5:36 PM

Share

ಬೆಂಗಳೂರು: ನಾಳೆಯಿಂದಲೇ (ಜೂನ್ 25) ಮಹಾರಾಷ್ಟ್ರಕ್ಕೆ ಕೆಎಸ್​​ಆರ್​​ಟಿಸಿ ಬಸ್​ ಸಂಚಾರ ಆರಂಭವಾಗಿದೆ. ಬೆಂಗಳೂರು, ಮಂಗಳೂರು ಹಾಗೂ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರಕ್ಕೆ ಬಸ್ ನಾಳೆಯಿಂದಲೇ ಆರಂಭವಾಗಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಮುಂಬೈ, ಪುಣೆ, ಮಿರಜ್, ಸೊಲ್ಲಾಪುರ, ಪಾಂಡವಪುರ, ತುಳಜಾಪುರಗಳಿಗೆ ಕೆಎಸ್​ಆರ್​ಟಿಸಿ ಬಸ್​ಗಳು ರಾಜ್ಯದಿಂದ ಹೊರಡಲಿವೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಬಸ್​ಗಳನ್ನು ಬಿಡಲಾಗುತ್ತಿದ್ದು, ಶೇ.50ರಷ್ಟು ಮಾತ್ರವೇ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು. ಕೆಎಸ್​ಆರ್​ಟಿಸಿ ವೆಬ್​ಸೈಟ್ ಮೂಲಕ ಟಿಕೆಟ್ ಬುಕಿಂಗ್​ಗೆ ಅವಕಾಶವಿದ್ದು, ಬಸ್​ನಲ್ಲಿ ಪ್ರಯಾಣಿಕರು ಕೊವಿಡ್ ನಿಯಮ ಪಾಲಿಸಬೇಕು ಎಂದು ಸಂಸ್ಥೆ ತಿಳಿಸಿದೆ.

ಈ ಮುನ್ನ 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಜೂನ್ 21ರಿಂದ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್​ಗಳ ಸಂಚಾರ ನಡೆಸಲು ಸಿಎಂ ಯಡಿಯೂರಪ್ಪ ಆದೇಶಿಸಿದ್ದರು.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಟೋಲ್ ಶುಲ್ಕ ಹೆಚ್ಚಳ; ಜುಲೈ 1ರಿಂದ ಜಾರಿ ಎಲೆಕ್ಟ್ರಾನಿಕ್ ಸಿಟಿ ರಸ್ತೆ ಬಳಕೆ ಶುಲ್ಕ (ಟೋಲ್) ಹೆಚ್ಚಳವಾಗಿದ್ದು, ಜುಲೈ ಒಂದರಿಂದಲೇ ಪರಿಷ್ಕೃತ ಶುಲ್ಕ ಜಾರಿಯಾಗಲಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ಅತ್ತಿಬೆಲೆ ರಸ್ತೆ ಬಳಕೆ ಶುಲ್ಕ ಹೆಚ್ಚಳವಾದ ಹಿನ್ನೆಲೆ ವಾಹನ ಸವಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಟೋಲ್ ಇರುವ ಸುತ್ತಮುತ್ತಲೂ ಐಟಿ ಕಂಪನಿಗಳು, ಹಲವು ಕಾರ್ಖಾನೆಗಳು ಇವೆ. ಕೆ.ಆರ್ ಮಾರ್ಕೆಟ್​ನ ಸಿಂಗಸಂದ್ರಕ್ಕೆ ಸ್ಥಳಾಂತರಿಸಲಾಗಿದೆ. ತರಕಾರಿ ವ್ಯಾಪಾರಿಗಳಿಗೆ ಟೋಲ್ ರಸ್ತೆಯನ್ನೇ ಬಳಸಿ ಹೋಗಬೇಕಾದ ಅನಿವಾರ್ಯ ಎದುರಾಗಿದ್ದು, ಕೂಡಲೇ ಟೋಲ್ ಶುಲ್ಕ ಹೆಚ್ಚಳ ಸಂಬಂಧ ಸರ್ಕಾರ ಮಧ್ಯಸ್ಥಿಕೆ ವಹಿಸಲು ರೈತರು ಆಗ್ರಹಿಸಿದ್ದಾರೆ.

ದ್ವಿಚಕ್ರ ವಾಹನಕ್ಕೆ 20 ರೂ. ನಿಗದಿಯಾಗಿದ್ದು, ಹಿಂತಿರುಗಿ ಬರುವುದಕ್ಕೆ (ಟು ಸೈಡ್) 30 ರೂ. ಶುಲ್ಕ ನಿಗದಿಯಾಗಿದೆ. ಕಾರು, ಜೀಪ್, ವ್ಯಾನ್​ಗಳಿಗೆ 50 ರೂ. ಮತ್ತು ಹಿಂತಿರುಗಿ ಬರುವುದಕ್ಕೆ 80 ರೂ. ಶುಲ್ಕ ನಿಗದಿಯಾಗಿದೆ. ಮಿನಿ ಬಸ್, ಲುಘು ವಾಹನಕ್ಕೆ 80 ರೂ. ವಾಪಸ್ ಬಂದರೆ 110 ರೂ. ಚಾರ್ಜ್ ಮಾಡಲಾಗುತ್ತದೆ. ಬಸ್, ಗೂಡ್ಸ್​ಗೆ 145 ರೂ. ಹಿಂತಿರುಗಿ ಬಂದರೆ 220 ರೂ. ಟೋಲ್ ದರ ಫಿಕ್ಸ್ ಆಗಿದೆ.

ಭಾರಿ ವಾಹನಕ್ಕೆ 295 ರೂ. ಹಾಗೂ ಹಿಂತಿರುಗಿ ಬಂದರೆ 440 ರೂ. ಟೋಲ್ ಚಾರ್ಜ್ ದರ ನಿಗದಿಯಾಗಿದೆ. ವಾಹನಗಳ ಮಾಸಿಕ ಪಾಸ್​ನಲ್ಲಿ ಟೋಲ್ ಶುಲ್ಕ ಭಾರಿ ಹೆಚ್ಚಳವಾಗಿದ್ದು, ಶೇಕಡಾ 75ರಿಂದ 80ರಷ್ಟು ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ತಿಂಗಳ ಪಾಸ್ ದರ 625 ರೂಪಾಯಿ, ಕಾರು, ಜೀಪ್, ವ್ಯಾನ್ಸ್​ಗೆ ಟೋಲ್​ನ ಮಾಸಿಕ ಪಾಸ್ ದರ 1,570 ರೂ. ಲಘು ವಾಹನಗಳಿಗೆ 4,390 ರೂ. ಟ್ರಕ್, ಬಸ್​ಗಳಿಗೆ ತಿಂಗಳ ಪಾಸ್ ದರ 4,390 ರೂ. ಭಾರಿ ವಾಹನಗಳ ತಿಂಗಳ ಪಾಸ್ ದರ 8,780 ರೂ. ಆಗಿದೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರ, ನೊಂದವರ ಗಣತಿ ನಡೆಸಲು ಕಾಂಗ್ರೆಸ್​ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

(KSRTC bus service to Maharashtra to begin tomorrow)

Published On - 5:22 pm, Thu, 24 June 21

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ