AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ಬೆಂಗಳೂರು ಮೈಸೂರು ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ದರ ಹೆಚ್ಚಳದ ಶಾಕ್; ವಿವರ ಇಲ್ಲಿದೆ

ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​ ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉಭಯ ನಗರಗಳ ನಡುವಣ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿದೆ.

KSRTC: ಬೆಂಗಳೂರು ಮೈಸೂರು ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ದರ ಹೆಚ್ಚಳದ ಶಾಕ್; ವಿವರ ಇಲ್ಲಿದೆ
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on:Mar 14, 2023 | 8:59 PM

ಬೆಂಗಳೂರು: ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​ ವೇಯಲ್ಲಿ (Bengaluru-Mysuru highway) ಟೋಲ್ ಸಂಗ್ರಹ ಆರಂಭವಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಉಭಯ ನಗರಗಳ ನಡುವಣ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿದೆ. ಬೆಂಗಳೂರು ಮೈಸೂರು ಪ್ರಯಾಣದ ದರ ಹೆಚ್ಚಳ ಮಾಡಿ ಕೆಎಸ್​ಆರ್​ಟಿಸಿ ಮಂಗಳವಾರ ಪ್ರಕಟಣೆ ಹೊರಡಿಸಿದೆ. ವೋಲ್ವೋ ಹಾಗೂ ಸಾಮಾನ್ಯ ಬಸ್​​ಗಳಿಗೆ ಪ್ರತ್ಯೇಕವಾಗಿ ದರ ಪರಿಷ್ಕರಣೆ ಮಾಡಲಾಗಿದೆ. ಐಷಾರಾಮಿ ಬಸ್​​ಗಳ ಪ್ರಯಾಣ ದರ 20 ರೂ. ಸಾಮಾನ್ಯ ಬಸ್ ಪ್ರಯಾಣದ ದರ 15 ರೂ. ಹಾಗೂ ರಾಜಹಂಸ ಬಸ್​​ಗಳ ಪ್ರಯಾಣ ದರವನ್ನು 18 ರೂ. ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ತಿಳಿಸಿದೆ.

ಉಭಯ ನಗರಗಳ ನಡುವಿನ ಎಲೆಕ್ಟ್ರಿಕ್ ಬಸ್ ಮತ್ತು ವೋಲ್ವೋ ಬಸ್‌ಗಳ ಟಿಕೆಟ್‌ಗಳಿಗೂ ದರ ಹೆಚ್ಚಳ ಅನ್ವಯವಾಗಲಿದೆ. ಟೋಲ್ ಶುಲ್ಕವನ್ನು ಭರಿಸುವುದಕ್ಕಾಗಿ ಮಾತ್ರ ಈ ದರ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ. ನಾವು ಅಂತರರಾಜ್ಯ ಬಸ್​ ಸೇವೆಗಳನ್ನೂ ಹೊಂದಿದ್ದು, ಇತರ ಕಡೆಗಳಲ್ಲಿ ಟೋಲ್‌ಗಳನ್ನು ಪಾವತಿಸುವುದು ನಮಗೆ ಹೆಚ್ಚು ಸಮಸ್ಯೆಯಾಗಿಲ್ಲ. ಆದರೆ ಮೈಸೂರು ಬೆಂಗಳೂರು ಎಕ್ಸ್​​ಪ್ರೆಸ್ ವೇಯಲ್ಲಿ ಟೋಲ್ ದರ ಸ್ವಲ್ಪ ಹೆಚ್ಚಿರುವುದರಿಂದ ಟಿಕೆಟ್ ದರದಲ್ಲಿ ಅನಿವಾರ್ಯವಾಗಿ ಹೆಚ್ಚಳ ಮಾಡಬೇಕಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: Baba Saheb Ambedkar Yatra: IRCTCಯಿಂದ 8 ದಿನಗಳ ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರಾ ಪ್ರವಾಸ ಪ್ಯಾಕೇಜ್ ಘೋಷಣೆ, ಟಿಕೆಟ್ ದರ ಎಷ್ಟು?

ತೀವ್ರ ವಿರೋಧದ ನಡುವೆಯೂ ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​ ವೇಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳವಾರ ಬೆಳಿಗ್ಗೆಯಿಂದ ಮೊದಲ ಹಂತದ ಟೋಲ್ ಸಂಗ್ರಹ ಆರಂಭಿಸಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಾಗುತ್ತಿದೆ.

ಬಸ್​ಗಳ ಏಕಮುಖ ಸಂಚಾರಕ್ಕೆ 460 ರೂ, ಎರಡು ಕಡೆ ಸಂಚಾರಕ್ಕೆ 690 ರೂ, ಬಸ್​​ಗಳ ತಿಂಗಳ ಟೋಲ್ ಪಾಸ್​ ದರ 15,325 ರೂ. ನಿಗದಿಯಾಗಿದೆ. ಇದೀಗ ಈ ಹೊರೆಯನ್ನು ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ವರ್ಗಾಯಿಸಿಲು ಮುಂದಾಗಿದೆ.

ಇತ್ತೀಚೆಗೆ ‘ಅಂಬಾರಿ ಉತ್ಸವ’ ಆರಂಭಿಸಿದ್ದ ಕೆಎಸ್​​ಆರ್​ಟಿಸಿ

ಅಂತರರಾಜ್ಯ ಪ್ರಯಾಣಿಕರಿಗಾಗಿ ಫೆಬ್ರವರಿ 24 ರಿಂದ ಕೆಎಸ್​ಆರ್​ಟಿಸಿ ‘ಅಂಬಾರಿ ಉತ್ಸವ’ ಯೋಜನೆಯಡಿ ‘9600 ವೋಲ್ವೋ ಮಲ್ಟಿ-ಆಕ್ಸಲ್ ಸ್ಲೀಪರ್​’ ಬಸ್​​ಗಳನ್ನು ಆರಂಭಿಸಿತ್ತು. ಈ ಯೋಜನೆಯಡಿ ಯುರೋಪಿಯನ್​ ಮಾದರಿ ಎಸಿ-ಸ್ಲೀಪರ್​​ ಬಸ್​ಗಳು ಬೆಂಗಳೂರು ನಗರದಿಂದ ಮಂಗಳೂರು, ಕುಂದಾಪುರ, ಪಣಜಿ, ಪುಣೆ, ಹೈದರಾಬಾದ್​, ಸಿಕಂದರಾಬಾದ್​, ಎರ್ನಾಕುಲಂ, ತ್ರಿಶೂರ್ ಮತ್ತು ತಿರುವನಂತಪುರಂಗೆ ಸಂಚರಿಸುತ್ತಿವೆ. ಇದಕ್ಕೆ ಜನರಿಂದ ಉತ್ತಮ ಸ್ಪಂದನೆಯೂ ವ್ಯಕ್ತವಾಗಿದೆ ಎಂದು ಕೆಎಸ್​ಆರ್​ಟಿಸಿ ಇತ್ತೀಚೆಗೆ ತಿಳಿಸಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Tue, 14 March 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್