AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ಜೂನ್ 14ರ ಬಳಿಕ ಲಾಕ್​ಡೌನ್ ತೆಗೆದರೆ ರಸ್ತೆಗಿಳಿಯಲಿವೆ ಸರ್ಕಾರಿ ಬಸ್​ಗಳು, ಟಿಕೆಟ್ ದರ ಹೆಚ್ಚಳ ಮಾಡಲ್ಲ​: ಸಾರಿಗೆ ಸಚಿವ ಲಕ್ಷ್ಮಣ ಸವದಿ

KSRTC: ಮತ್ತೆ ಬಸ್ ಸೇವೆ ಆರಂಭಿಸಿದ ನಂತತ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ 4 ನಿಗಮಗಳಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ. ಸರ್ಕಾರಿ ಬಸ್​ಗಳಲ್ಲಿ ಓಡಾಡುವವರು ಬಡವರೇ ಆಗಿರುತ್ತಾರೆ. ಹೀಗಾಗಿ ಸಂಕಷ್ಟದ ಸಮಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲ. ಪ್ರಯಾಣ ದರ ಏರಿಕೆಗೆ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಈ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

KSRTC: ಜೂನ್ 14ರ ಬಳಿಕ ಲಾಕ್​ಡೌನ್ ತೆಗೆದರೆ ರಸ್ತೆಗಿಳಿಯಲಿವೆ ಸರ್ಕಾರಿ ಬಸ್​ಗಳು, ಟಿಕೆಟ್ ದರ ಹೆಚ್ಚಳ ಮಾಡಲ್ಲ​: ಸಾರಿಗೆ ಸಚಿವ ಲಕ್ಷ್ಮಣ ಸವದಿ
ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್​ಗಳು
TV9 Web
| Edited By: |

Updated on:Jun 08, 2021 | 3:57 PM

Share

ಬೆಂಗಳೂರು: ಲಾಕ್​ಡೌನ್​ನಿಂದ ಕೆಎಸ್​​ಆರ್​ಟಿಸಿಗೆ 4,000 ಕೋಟಿ ನಷ್ಟವಾಗಿದ್ದು, ಜೂನ್ 14ರ ಬಳಿಕ ಕರ್ನಾಟಕದಲ್ಲಿ ಲಾಕ್​ಡೌನ್ ಸಡಿಲಿಸಿದರೆ ಹಂತ ಹಂತವಾಗಿ ಸರ್ಕಾರಿ ಬಸ್​ ಸೇವೆ ಆರಂಭಿಸುತ್ತೇವೆ ಎಂದು ವಿಧಾನಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆಎಸ್​​ಆರ್​ಟಿಸಿಗೆ ಆದ ನಷ್ಟವನ್ನು ಸುಧಾರಿಸಿಕೊಳ್ಳಲು 4 ತಿಂಗಳು ಬೇಕಾಗಬಹುದು ಎಂದು ಅಂದಾಜಿಸಿದ್ದಾಗಿ ಅವರು ತಿಳಿಸಿದರು. ಲಾಕ್​ಡೌನ್ ಸಡಿಲಿಕೆಯ ನಂತರ ಬಸ್ ಸಂಚಾರ ಆರಂಭಿಸಿದರೂ ಬಸ್​ಗಳಲ್ಲಿ ಕೊವಿಡ್ ತಡೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ದೈಹಿಕ ಅಂತರ ಕಾಯ್ದುಕೊಂಡು ಪ್ರಯಾಣಿಕರ ಓಡಾಟ ನಡೆಸಬಹುದು. ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆಯೇ ಮಾಸ್ಕ್, ಸ್ಯಾನಿಟೈಸರ್​ ನೀಡಲಿದೆ ಎಂದು ಅವರು ಮಾಹಿತಿ ನೀಡಿದರು.

ಮತ್ತೆ ಬಸ್ ಸೇವೆ ಆರಂಭಿಸಿದ ನಂತತ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ 4 ನಿಗಮಗಳಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ. ಸರ್ಕಾರಿ ಬಸ್​ಗಳಲ್ಲಿ ಓಡಾಡುವವರು ಬಡವರೇ ಆಗಿರುತ್ತಾರೆ. ಹೀಗಾಗಿ ಸಂಕಷ್ಟದ ಸಮಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲ. ಪ್ರಯಾಣ ದರ ಏರಿಕೆಗೆ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಈ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕೊವಿಡ್ 2 ಡೋಸ್ ಲಸಿಕೆ ಪಡೆಯುವವರೆಗೆ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹಾಕುವುದಿಲ್ಲ. ಸಾರಿಗೆ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದ ಬಳಿಕ ಸೇವೆಗೆ ಆಗಮಿಸುವಂತೆ ತಿಳಿಸುತ್ತೇವೆ ಎಂದು ವಿಧಾನಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋತಿಗಳೇಕೆ ಮನೆಗೆ ಬರುತ್ತಿವೆ? ಅರಣ್ಯ ಇಲಾಖೆಗೆ ಮಹತ್ವದ ಸೂಚನೆ ನೀಡಿದ ಹೈಕೋರ್ಟ್​

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಅಕ್ರಮವಾಗಿ ದತ್ತು ಪಡೆಯುವುದನ್ನು ನಿಲ್ಲಿಸಿ: ಸುಪ್ರೀಂಕೋರ್ಟ್ (KSRTC buses begin its service from June 14th if the lockdown is relaxed says Karnataka Transport Minister Laxman Savadi)

Published On - 3:51 pm, Tue, 8 June 21

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ