AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕೊರೊನಾ ಸೋಂಕಿತರಿಗಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯು ಬಸ್

ರೋಗಿಗಳ ಬಿಪಿ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಇತ್ಯಾದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದ್ದು, ಐ.ವಿ ವ್ಯವಸ್ಥೆಯನ್ನೊಳಗೊಂಡ ಬಸ್​ನಲ್ಲಿ ವೆಂಟಿಲೇಟರ್ ಸೌಲಭ್ಯ ಅಳವಡಿಸಲಾಗಿದೆ.

ಇಂದಿನಿಂದ ಕೊರೊನಾ ಸೋಂಕಿತರಿಗಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯು ಬಸ್
ಪ್ರಾತಿನಿಧಿಕ ಚಿತ್ರ
Skanda
|

Updated on: May 19, 2021 | 1:15 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೋಂಕಿತರ ಸಹಾಯಕ್ಕಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯುಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದ್ದಾರೆ. ನಗರದ ಪ್ರದೇಶಗಳಲ್ಲಿ ಐಸಿಯು ಬೆಡ್​ಗಳಿಗೆ ಅಭಾವ ಸೃಷ್ಟಿಯಾಗಿರುವ ಕಾರಣದಿಂದ ಕೆಎಸ್​ಆರ್​ಟಿಸಿ ಬಸ್​ಗಳನ್ನೇ ಸಂಚಾರಿ ಐಸಿಯುಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಸುಮಾರು 5 ಐಸಿಯು ಬೆಡ್​ಗಳಿರುವ ಬಸ್​ಗಳು ಇಂದಿನಿಂದ ಕಾರ್ಯ ನಿರ್ವಹಿಸಲಿವೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ರೋಗಿಗಳ ಬಿಪಿ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಇತ್ಯಾದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದ್ದು, ಐ.ವಿ ವ್ಯವಸ್ಥೆಯನ್ನೊಳಗೊಂಡ ಬಸ್​ನಲ್ಲಿ ವೆಂಟಿಲೇಟರ್ ಸೌಲಭ್ಯ ಅಳವಡಿಸಲಾಗುವುದು. ಪ್ರತಿಯೊಂದು ಬೆಡ್​ಗೂ ಆಕ್ಸಿಜನ್ ವ್ಯವಸ್ಥೆ ಇರುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ತುರ್ತು ಔಷಧಿ ವ್ಯವಸ್ಥೆ ಹಾಗೂ ಬಸ್​ನಲ್ಲೇ ಜನರೇಟರ್ ವ್ಯವಸ್ಥೆ ಇರುವ ಐಸಿಯು ಬಸ್​ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಚಾಲನೆ ಸಂದರ್ಭದಲ್ಲಿ ಲಕ್ಷ್ಮಣ ಸವದಿಗೆ ಸಚಿವ ಎಸ್.ಟಿ ಸೋಮಶೇಖರ್ ಸಾಥ್ ನೀಡಿದ್ದಾರೆ.

ಗ್ರೀನ್ ಕೋ ಸಂಸ್ಥೆಯಿಂದ ಉಚಿತವಾಗಿ ಆಕ್ಸಿಜನ್ ಸಾಂದ್ರಕ ಕರ್ನಾಟಕದಲ್ಲಿ ಆಕ್ಸಿಜನ್​ ಕೊರತೆ ಹಿನ್ನೆಲೆ ಆಕ್ಸಿಜನ್​ ಸಾಂದ್ರಕ ಹಸ್ತಾಂತರಿಸುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಮಾಡಿದ್ದ ಮನವಿಗೆ ಸ್ಪಂದಿಸಿದ ಗ್ರೀನ್ ಕೋ ಸಂಸ್ಥೆ ರಾಜ್ಯಕ್ಕೆ ಆಕ್ಸಿಜನ್ ಸಾಂದ್ರಕಗಳನ್ನು ಹಸ್ತಾಂತರ ಮಾಡಲು ಒಪ್ಪಿದೆ. ಆ ಪ್ರಕಾರವಾಗಿ ಇಂದು (ಮೇ 19) 200 ಸಾಂದ್ರಕಗಳು ಸರ್ಕಾರದ ಕೈ ಸೇರಲಿವೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಚಿವ ಡಾ.ಕೆ.ಸುಧಾಕರ್‌ ಆಮ್ಲಜನಕದ ಸಾಂದ್ರಕಗಳನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Lockdown Relief Fund: ಅಸಂಘಟಿತ ಕಾರ್ಮಿಕರು, ರಿಕ್ಷಾ ಡ್ರೈವರ್ಸ್, ಹೂ ಬೆಳೆಗಾರರಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಯಡಿಯೂರಪ್ಪ 

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1; ಟ್ವಿಟರ್​ನಲ್ಲಿ ಸಮಾಧಾನ ವ್ಯಕ್ತಪಡಿಸಿದ ಡಾ. ಕೆ.ಸುಧಾಕರ್

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ