AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕೊರೊನಾ ಸೋಂಕಿತರಿಗಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯು ಬಸ್

ರೋಗಿಗಳ ಬಿಪಿ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಇತ್ಯಾದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದ್ದು, ಐ.ವಿ ವ್ಯವಸ್ಥೆಯನ್ನೊಳಗೊಂಡ ಬಸ್​ನಲ್ಲಿ ವೆಂಟಿಲೇಟರ್ ಸೌಲಭ್ಯ ಅಳವಡಿಸಲಾಗಿದೆ.

ಇಂದಿನಿಂದ ಕೊರೊನಾ ಸೋಂಕಿತರಿಗಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯು ಬಸ್
ಪ್ರಾತಿನಿಧಿಕ ಚಿತ್ರ
Skanda
|

Updated on: May 19, 2021 | 1:15 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೋಂಕಿತರ ಸಹಾಯಕ್ಕಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯುಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದ್ದಾರೆ. ನಗರದ ಪ್ರದೇಶಗಳಲ್ಲಿ ಐಸಿಯು ಬೆಡ್​ಗಳಿಗೆ ಅಭಾವ ಸೃಷ್ಟಿಯಾಗಿರುವ ಕಾರಣದಿಂದ ಕೆಎಸ್​ಆರ್​ಟಿಸಿ ಬಸ್​ಗಳನ್ನೇ ಸಂಚಾರಿ ಐಸಿಯುಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಸುಮಾರು 5 ಐಸಿಯು ಬೆಡ್​ಗಳಿರುವ ಬಸ್​ಗಳು ಇಂದಿನಿಂದ ಕಾರ್ಯ ನಿರ್ವಹಿಸಲಿವೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ರೋಗಿಗಳ ಬಿಪಿ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಇತ್ಯಾದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದ್ದು, ಐ.ವಿ ವ್ಯವಸ್ಥೆಯನ್ನೊಳಗೊಂಡ ಬಸ್​ನಲ್ಲಿ ವೆಂಟಿಲೇಟರ್ ಸೌಲಭ್ಯ ಅಳವಡಿಸಲಾಗುವುದು. ಪ್ರತಿಯೊಂದು ಬೆಡ್​ಗೂ ಆಕ್ಸಿಜನ್ ವ್ಯವಸ್ಥೆ ಇರುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ತುರ್ತು ಔಷಧಿ ವ್ಯವಸ್ಥೆ ಹಾಗೂ ಬಸ್​ನಲ್ಲೇ ಜನರೇಟರ್ ವ್ಯವಸ್ಥೆ ಇರುವ ಐಸಿಯು ಬಸ್​ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಚಾಲನೆ ಸಂದರ್ಭದಲ್ಲಿ ಲಕ್ಷ್ಮಣ ಸವದಿಗೆ ಸಚಿವ ಎಸ್.ಟಿ ಸೋಮಶೇಖರ್ ಸಾಥ್ ನೀಡಿದ್ದಾರೆ.

ಗ್ರೀನ್ ಕೋ ಸಂಸ್ಥೆಯಿಂದ ಉಚಿತವಾಗಿ ಆಕ್ಸಿಜನ್ ಸಾಂದ್ರಕ ಕರ್ನಾಟಕದಲ್ಲಿ ಆಕ್ಸಿಜನ್​ ಕೊರತೆ ಹಿನ್ನೆಲೆ ಆಕ್ಸಿಜನ್​ ಸಾಂದ್ರಕ ಹಸ್ತಾಂತರಿಸುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಮಾಡಿದ್ದ ಮನವಿಗೆ ಸ್ಪಂದಿಸಿದ ಗ್ರೀನ್ ಕೋ ಸಂಸ್ಥೆ ರಾಜ್ಯಕ್ಕೆ ಆಕ್ಸಿಜನ್ ಸಾಂದ್ರಕಗಳನ್ನು ಹಸ್ತಾಂತರ ಮಾಡಲು ಒಪ್ಪಿದೆ. ಆ ಪ್ರಕಾರವಾಗಿ ಇಂದು (ಮೇ 19) 200 ಸಾಂದ್ರಕಗಳು ಸರ್ಕಾರದ ಕೈ ಸೇರಲಿವೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಚಿವ ಡಾ.ಕೆ.ಸುಧಾಕರ್‌ ಆಮ್ಲಜನಕದ ಸಾಂದ್ರಕಗಳನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Lockdown Relief Fund: ಅಸಂಘಟಿತ ಕಾರ್ಮಿಕರು, ರಿಕ್ಷಾ ಡ್ರೈವರ್ಸ್, ಹೂ ಬೆಳೆಗಾರರಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಯಡಿಯೂರಪ್ಪ 

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1; ಟ್ವಿಟರ್​ನಲ್ಲಿ ಸಮಾಧಾನ ವ್ಯಕ್ತಪಡಿಸಿದ ಡಾ. ಕೆ.ಸುಧಾಕರ್

Follow Us
Skanda
Skanda
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್