AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕೊರೊನಾ ಸೋಂಕಿತರಿಗಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯು ಬಸ್

ರೋಗಿಗಳ ಬಿಪಿ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಇತ್ಯಾದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದ್ದು, ಐ.ವಿ ವ್ಯವಸ್ಥೆಯನ್ನೊಳಗೊಂಡ ಬಸ್​ನಲ್ಲಿ ವೆಂಟಿಲೇಟರ್ ಸೌಲಭ್ಯ ಅಳವಡಿಸಲಾಗಿದೆ.

ಇಂದಿನಿಂದ ಕೊರೊನಾ ಸೋಂಕಿತರಿಗಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯು ಬಸ್
ಪ್ರಾತಿನಿಧಿಕ ಚಿತ್ರ
Skanda
|

Updated on: May 19, 2021 | 1:15 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೋಂಕಿತರ ಸಹಾಯಕ್ಕಾಗಿ ಕೆಎಸ್​ಆರ್​ಟಿಸಿ ವತಿಯಿಂದ ಸಂಚಾರಿ ಐಸಿಯುಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದ್ದಾರೆ. ನಗರದ ಪ್ರದೇಶಗಳಲ್ಲಿ ಐಸಿಯು ಬೆಡ್​ಗಳಿಗೆ ಅಭಾವ ಸೃಷ್ಟಿಯಾಗಿರುವ ಕಾರಣದಿಂದ ಕೆಎಸ್​ಆರ್​ಟಿಸಿ ಬಸ್​ಗಳನ್ನೇ ಸಂಚಾರಿ ಐಸಿಯುಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. ಸುಮಾರು 5 ಐಸಿಯು ಬೆಡ್​ಗಳಿರುವ ಬಸ್​ಗಳು ಇಂದಿನಿಂದ ಕಾರ್ಯ ನಿರ್ವಹಿಸಲಿವೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ರೋಗಿಗಳ ಬಿಪಿ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಇತ್ಯಾದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದ್ದು, ಐ.ವಿ ವ್ಯವಸ್ಥೆಯನ್ನೊಳಗೊಂಡ ಬಸ್​ನಲ್ಲಿ ವೆಂಟಿಲೇಟರ್ ಸೌಲಭ್ಯ ಅಳವಡಿಸಲಾಗುವುದು. ಪ್ರತಿಯೊಂದು ಬೆಡ್​ಗೂ ಆಕ್ಸಿಜನ್ ವ್ಯವಸ್ಥೆ ಇರುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ತುರ್ತು ಔಷಧಿ ವ್ಯವಸ್ಥೆ ಹಾಗೂ ಬಸ್​ನಲ್ಲೇ ಜನರೇಟರ್ ವ್ಯವಸ್ಥೆ ಇರುವ ಐಸಿಯು ಬಸ್​ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಚಾಲನೆ ಸಂದರ್ಭದಲ್ಲಿ ಲಕ್ಷ್ಮಣ ಸವದಿಗೆ ಸಚಿವ ಎಸ್.ಟಿ ಸೋಮಶೇಖರ್ ಸಾಥ್ ನೀಡಿದ್ದಾರೆ.

ಗ್ರೀನ್ ಕೋ ಸಂಸ್ಥೆಯಿಂದ ಉಚಿತವಾಗಿ ಆಕ್ಸಿಜನ್ ಸಾಂದ್ರಕ ಕರ್ನಾಟಕದಲ್ಲಿ ಆಕ್ಸಿಜನ್​ ಕೊರತೆ ಹಿನ್ನೆಲೆ ಆಕ್ಸಿಜನ್​ ಸಾಂದ್ರಕ ಹಸ್ತಾಂತರಿಸುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಮಾಡಿದ್ದ ಮನವಿಗೆ ಸ್ಪಂದಿಸಿದ ಗ್ರೀನ್ ಕೋ ಸಂಸ್ಥೆ ರಾಜ್ಯಕ್ಕೆ ಆಕ್ಸಿಜನ್ ಸಾಂದ್ರಕಗಳನ್ನು ಹಸ್ತಾಂತರ ಮಾಡಲು ಒಪ್ಪಿದೆ. ಆ ಪ್ರಕಾರವಾಗಿ ಇಂದು (ಮೇ 19) 200 ಸಾಂದ್ರಕಗಳು ಸರ್ಕಾರದ ಕೈ ಸೇರಲಿವೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಚಿವ ಡಾ.ಕೆ.ಸುಧಾಕರ್‌ ಆಮ್ಲಜನಕದ ಸಾಂದ್ರಕಗಳನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Lockdown Relief Fund: ಅಸಂಘಟಿತ ಕಾರ್ಮಿಕರು, ರಿಕ್ಷಾ ಡ್ರೈವರ್ಸ್, ಹೂ ಬೆಳೆಗಾರರಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಯಡಿಯೂರಪ್ಪ 

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1; ಟ್ವಿಟರ್​ನಲ್ಲಿ ಸಮಾಧಾನ ವ್ಯಕ್ತಪಡಿಸಿದ ಡಾ. ಕೆ.ಸುಧಾಕರ್

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!