AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!

ನಂಜನಗೂಡು ಘಟಕದ ವ್ಯವಸ್ಥಾಪಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಅಷ್ಟೂ ಒಡವೆಗಳನ್ನು ಹಿಂದಿರುಗಿಸಲಾಗಿದೆ. ಇದೇ ವೇಳೆ ಕಂಡಕ್ಟರ್ ಈರಯ್ಯನಿಗೆ ಚಾಮರಾಜನಗರ ಪೊಲೀಸ್ ಡಿವೈಎಸ್ಪಿ ಸನ್ಮಾನ ಮಾಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!
ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!
TV9 Web
| Edited By: |

Updated on: Dec 06, 2021 | 12:03 PM

Share

ನಂಜನಗೂಡು: ಸಾರ್ವತ್ರಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕರ್ತವ್ಯ ನಿಷ್ಠೆಯ ಜೊತೆಗೆ ಸಾಕಷ್ಟು ಸಮಯ ಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೆರೆದರೆ ಪ್ರಯಾಣಿಕರ ಪ್ರಯಾಣ ಸುರಕ್ಷಿತವಾಗಿರುವುದರ ಜೊತೆಗೆ ಬೆಲೆಬಾಳುವ ಅವರ ಸಾಮಾನು ಸರಂಜಾಮು ಸಹ ಸುರಕ್ಷಿತವಾಗಿರುತ್ತದೆ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ನಂಜನಗೂಡು ಘಟಕಕ್ಕೆ ಸೇರಿದ ವಾಹನ ಸಂಖ್ಯೆಕೆಎ 10 ಎಫ್- 0157 ವಾಹನದಲ್ಲಿ ನಿನ್ನೆ ಮೈಸೂರಿನಿಂದ ನಂಜನಗೂಡಿಗೆ ಸಂಚಾರ ಮಾಡುವಾಗ ದಾವಣಗೆರೆಯ 7ಜನ ಪ್ರಯಾಣಿಕರು ಬಸ್ ನಲ್ಲಿ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಒಡವೆಗಳನ್ನು ಕಳೆದುಕೊಂಡಿದ್ದರು. ಆದರೆ ಕೆಎಸ್ಆರ್​ಟಿಸಿ ನಿರ್ವಾಹಕ ಈರಯ್ಯ ಅವರ ಸಮಯ ಪ್ರಜ್ಞೆಯಿಂದ ಎಲ್ಲ ಒಡವೆಗಳೂ ಸುರಕ್ಷಿತವಾಗಿ ವಾರಸುದಾರರನ್ನು ತಲುಪಿದೆ.

ನಂಜನಗೂಡು ಘಟಕದ ವ್ಯವಸ್ಥಾಪಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಅಷ್ಟೂ ಒಡವೆಗಳನ್ನು ಹಿಂದಿರುಗಿಸಲಾಗಿದೆ. ಇದೇ ವೇಳೆ ಕಂಡಕ್ಟರ್ ಈರಯ್ಯನಿಗೆ ಚಾಮರಾಜನಗರ ಪೊಲೀಸ್ ಡಿವೈಎಸ್ಪಿ ಸನ್ಮಾನ ಮಾಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಸಿ‌. ಕಳಸದ ಅವರೂ ಸಹ ನಿರ್ವಾಹಕ ಈರಯ್ಯನ ಪ್ರಾಮಾಣಿಕ ಸೇವೆಯನ್ನು ಶ್ಲಾಘಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ