AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!

ನಂಜನಗೂಡು ಘಟಕದ ವ್ಯವಸ್ಥಾಪಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಅಷ್ಟೂ ಒಡವೆಗಳನ್ನು ಹಿಂದಿರುಗಿಸಲಾಗಿದೆ. ಇದೇ ವೇಳೆ ಕಂಡಕ್ಟರ್ ಈರಯ್ಯನಿಗೆ ಚಾಮರಾಜನಗರ ಪೊಲೀಸ್ ಡಿವೈಎಸ್ಪಿ ಸನ್ಮಾನ ಮಾಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!
ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 06, 2021 | 12:03 PM

ನಂಜನಗೂಡು: ಸಾರ್ವತ್ರಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕರ್ತವ್ಯ ನಿಷ್ಠೆಯ ಜೊತೆಗೆ ಸಾಕಷ್ಟು ಸಮಯ ಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೆರೆದರೆ ಪ್ರಯಾಣಿಕರ ಪ್ರಯಾಣ ಸುರಕ್ಷಿತವಾಗಿರುವುದರ ಜೊತೆಗೆ ಬೆಲೆಬಾಳುವ ಅವರ ಸಾಮಾನು ಸರಂಜಾಮು ಸಹ ಸುರಕ್ಷಿತವಾಗಿರುತ್ತದೆ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ನಂಜನಗೂಡು ಘಟಕಕ್ಕೆ ಸೇರಿದ ವಾಹನ ಸಂಖ್ಯೆಕೆಎ 10 ಎಫ್- 0157 ವಾಹನದಲ್ಲಿ ನಿನ್ನೆ ಮೈಸೂರಿನಿಂದ ನಂಜನಗೂಡಿಗೆ ಸಂಚಾರ ಮಾಡುವಾಗ ದಾವಣಗೆರೆಯ 7ಜನ ಪ್ರಯಾಣಿಕರು ಬಸ್ ನಲ್ಲಿ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಒಡವೆಗಳನ್ನು ಕಳೆದುಕೊಂಡಿದ್ದರು. ಆದರೆ ಕೆಎಸ್ಆರ್​ಟಿಸಿ ನಿರ್ವಾಹಕ ಈರಯ್ಯ ಅವರ ಸಮಯ ಪ್ರಜ್ಞೆಯಿಂದ ಎಲ್ಲ ಒಡವೆಗಳೂ ಸುರಕ್ಷಿತವಾಗಿ ವಾರಸುದಾರರನ್ನು ತಲುಪಿದೆ.

ನಂಜನಗೂಡು ಘಟಕದ ವ್ಯವಸ್ಥಾಪಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಅಷ್ಟೂ ಒಡವೆಗಳನ್ನು ಹಿಂದಿರುಗಿಸಲಾಗಿದೆ. ಇದೇ ವೇಳೆ ಕಂಡಕ್ಟರ್ ಈರಯ್ಯನಿಗೆ ಚಾಮರಾಜನಗರ ಪೊಲೀಸ್ ಡಿವೈಎಸ್ಪಿ ಸನ್ಮಾನ ಮಾಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಸಿ‌. ಕಳಸದ ಅವರೂ ಸಹ ನಿರ್ವಾಹಕ ಈರಯ್ಯನ ಪ್ರಾಮಾಣಿಕ ಸೇವೆಯನ್ನು ಶ್ಲಾಘಿಸಿದ್ದಾರೆ.

ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!