ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ. ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ […]

ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!
ಸಾಧು ಶ್ರೀನಾಥ್​

Updated on: Nov 19, 2019 | 11:26 AM

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ.

ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ ಭೂಮಿಕಾಳನ್ನ ತಳ್ಳಿದ್ದಾನೆ.

ಬೆಂಗಳೂರಿಂದ ಕನಕಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಭೂಮಿಕಾಳ ಹಲ್ಲು ಮುರಿದು ಹೋಗಿದೆ. ತೀವ್ರವಾಗಿ ಗಾಯಗಳಾಗಿವೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 11:20 am, Tue, 19 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us