AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಇನ್ಮುಂದೆ ದೊರೆಯಲಿದೆ. ಈ ಸಂಬಂಧ ಸರ್ಕಾರ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ನೌಕರರು ಮತ್ತು ಅವರ ಕುಟುಂಬದ ಆರು ಸದಸ್ಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ನೌಕರರು ಮಾಸಿಕ 650 ರೂ. ಮತ್ತು KSRTC 600 ರೂ. ಪಾವತಿಸುತ್ತದೆ. ಈ ಯೋಜನೆಯ ಮಿತಿಗಳು ಮತ್ತು ಆಸ್ಪತ್ರೆಗಳ ಪಟ್ಟಿಯ ಮಾಹಿತಿ ಇಲ್ಲಿದೆ.

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ
ಕೆಎಸ್​ಆರ್​ಟಿಸಿ ನೌಕರರು
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jan 06, 2025 | 1:08 PM

Share

ಬೆಂಗಳೂರು, ಜನವರಿ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್​​)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಆರೋಗ್ಯ ಕಾರ್ಡ್​​ ಪ್ರಯೋಜನಗಳೇನು? ಆಸ್ಪತ್ರೆಗಳ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್​ಆರ್​ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್​ಆರ್​ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

ಆರೋಗ್ಯ ಕಾರ್ಡ್​ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್​ಗಾಗಿ ನೌಕರರು ಪ್ರತಿ ತಿಂಗಳು 650 ರೂಪಾಯಿ ಪಾವತಿ ಮಾಡಬೇಕು. ಕೆಎಸ್ಆರ್​​ಟಿಸಿ ನಿಗಮ 600 ರೂಪಾಯಿ ಪಾವತಿ ಮಾಡುತ್ತದೆ. ಇದರಿಂದ ವರ್ಷಕ್ಕೆ ಒಟ್ಟು 46 ಕೋಟಿ ರೂಪಾಯಿ ಸಂಗ್ರಹವಾಗುತ್ತದೆ ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Mon, 6 January 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು