AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಇನ್ಮುಂದೆ ದೊರೆಯಲಿದೆ. ಈ ಸಂಬಂಧ ಸರ್ಕಾರ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ನೌಕರರು ಮತ್ತು ಅವರ ಕುಟುಂಬದ ಆರು ಸದಸ್ಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ನೌಕರರು ಮಾಸಿಕ 650 ರೂ. ಮತ್ತು KSRTC 600 ರೂ. ಪಾವತಿಸುತ್ತದೆ. ಈ ಯೋಜನೆಯ ಮಿತಿಗಳು ಮತ್ತು ಆಸ್ಪತ್ರೆಗಳ ಪಟ್ಟಿಯ ಮಾಹಿತಿ ಇಲ್ಲಿದೆ.

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ
ಕೆಎಸ್​ಆರ್​ಟಿಸಿ ನೌಕರರು
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jan 06, 2025 | 1:08 PM

Share

ಬೆಂಗಳೂರು, ಜನವರಿ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್​​)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಆರೋಗ್ಯ ಕಾರ್ಡ್​​ ಪ್ರಯೋಜನಗಳೇನು? ಆಸ್ಪತ್ರೆಗಳ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್​ಆರ್​ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್​ಆರ್​ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

ಆರೋಗ್ಯ ಕಾರ್ಡ್​ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್​ಗಾಗಿ ನೌಕರರು ಪ್ರತಿ ತಿಂಗಳು 650 ರೂಪಾಯಿ ಪಾವತಿ ಮಾಡಬೇಕು. ಕೆಎಸ್ಆರ್​​ಟಿಸಿ ನಿಗಮ 600 ರೂಪಾಯಿ ಪಾವತಿ ಮಾಡುತ್ತದೆ. ಇದರಿಂದ ವರ್ಷಕ್ಕೆ ಒಟ್ಟು 46 ಕೋಟಿ ರೂಪಾಯಿ ಸಂಗ್ರಹವಾಗುತ್ತದೆ ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Mon, 6 January 25

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ