ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಇನ್ಮುಂದೆ ದೊರೆಯಲಿದೆ. ಈ ಸಂಬಂಧ ಸರ್ಕಾರ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ನೌಕರರು ಮತ್ತು ಅವರ ಕುಟುಂಬದ ಆರು ಸದಸ್ಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ನೌಕರರು ಮಾಸಿಕ 650 ರೂ. ಮತ್ತು KSRTC 600 ರೂ. ಪಾವತಿಸುತ್ತದೆ. ಈ ಯೋಜನೆಯ ಮಿತಿಗಳು ಮತ್ತು ಆಸ್ಪತ್ರೆಗಳ ಪಟ್ಟಿಯ ಮಾಹಿತಿ ಇಲ್ಲಿದೆ.

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ
ಕೆಎಸ್​ಆರ್​ಟಿಸಿ ನೌಕರರು
Follow us
Kiran Surya
| Updated By: ವಿವೇಕ ಬಿರಾದಾರ

Updated on:Jan 06, 2025 | 1:08 PM

ಬೆಂಗಳೂರು, ಜನವರಿ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್​​)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಆರೋಗ್ಯ ಕಾರ್ಡ್​​ ಪ್ರಯೋಜನಗಳೇನು? ಆಸ್ಪತ್ರೆಗಳ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್​ಆರ್​ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್​ಆರ್​ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

ಆರೋಗ್ಯ ಕಾರ್ಡ್​ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್​ಗಾಗಿ ನೌಕರರು ಪ್ರತಿ ತಿಂಗಳು 650 ರೂಪಾಯಿ ಪಾವತಿ ಮಾಡಬೇಕು. ಕೆಎಸ್ಆರ್​​ಟಿಸಿ ನಿಗಮ 600 ರೂಪಾಯಿ ಪಾವತಿ ಮಾಡುತ್ತದೆ. ಇದರಿಂದ ವರ್ಷಕ್ಕೆ ಒಟ್ಟು 46 ಕೋಟಿ ರೂಪಾಯಿ ಸಂಗ್ರಹವಾಗುತ್ತದೆ ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Mon, 6 January 25

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್