AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳ ಪ್ರಾಬಲ್ಯ: ಕರಾವಳಿ ಭಾಗಕ್ಕೆ ತಟ್ಟದ ಸಾರಿಗೆ ನೌಕರರ ಬಂದ್ ಬಿಸಿ

ಖಾಸಗಿ ಬಸ್​ಗಳೇ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸುವ ಕರಾವಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ನೌಕರರ ಮುಷ್ಕರ ದೊಡ್ಡ ತೊಂದರೆಯನ್ನು ಉಂಟುಮಾಡಿಲ್ಲ. ಸರ್ಕಾರಿ ನಗರ ಸಾರಿಗೆ ಬಸ್​ಗಳೂ ಓಡಾಟ ನಡೆಸುತ್ತಿದ್ದು ಜನಜೀವನ ಸುಗಮವಾಗಿದೆ.

ಖಾಸಗಿ ಬಸ್​ಗಳ ಪ್ರಾಬಲ್ಯ: ಕರಾವಳಿ ಭಾಗಕ್ಕೆ ತಟ್ಟದ ಸಾರಿಗೆ ನೌಕರರ ಬಂದ್ ಬಿಸಿ
ಉಡುಪಿ ಖಾಸಗಿ ಬಸ್ ನಿಲ್ದಾಣ
TV9 Web
| Updated By: ganapathi bhat|

Updated on:Apr 07, 2022 | 10:47 AM

Share

ದಕ್ಷಿಣ ಕನ್ನಡ: ಖಾಸಗಿ ಬಸ್​ಗಳು ಪ್ರಾಬಲ್ಯ ಹೊಂದಿರುವ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿಲ್ಲ. ಜಿಲ್ಲೆಯೊಳಗೆ ಸಂಚರಿಸುವ ಖಾಸಗಿ ಬಸ್​ಗಳು ಎಂದಿನಂತೆ ಸಂಚಾರ ನಡೆಸುತ್ತಿದ್ದು ಪ್ರಯಾಣಿಕರು ಯಾವುದೇ ಸಮಸ್ಯೆ ಅನುಭವಿಸಿಲ್ಲ. ದಿನನಿತ್ಯದ ಕೆಲಸಗಳಿಗೆ ತೊಡಕುಂಟಾಗಿಲ್ಲ. ಜಿಲ್ಲೆಯ ಜನರ ಜೀವನ ಎಂದಿನಂತೆ ಸಾಗುತ್ತಿದೆ.

ಉಡುಪಿಯಲ್ಲಿ ಖಾಸಗಿ ಬಸ್​ಗಳು ಕಾರ್ಯನಿರ್ವಹಿಸುತ್ತಿರುವುದು.

ಖಾಸಗಿ ಸಿಟಿ ಬಸ್ ಸರ್ವೀಸ್, ಎಕ್ಸ್​ಪ್ರೆಸ್ ಬಸ್ ಸರ್ವೀಸ್​ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕರಾವಳಿಯ ಜನರೂ ಖಾಸಗಿ ಬಸ್​ಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ದಿನನಿತ್ಯದ ಕೆಲಸಗಳಿಗೆ, ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ, ನೆರೆಯ ಊರುಗಳಿಗೆ ಖಾಸಗಿ ಬಸ್​ಗಳೇ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸುತ್ತವೆ. ಈ ಕಾರಣದಿಂದ ಕರಾವಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ನೌಕರರ ಮುಷ್ಕರ ದೊಡ್ಡ ವ್ಯತ್ಯಾಸವನ್ನು ಉಂಟುಮಾಡಿಲ್ಲ. ಜನಜೀವನ ಸುಗಮವಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸರ್ಕಾರಿ ನಗರ ಸಂಚಾರಿ ಬಸ್​ಗಳು ಕಾರ್ಯನಿರ್ವಹಿಸಿವೆ.

ರಾಜ್ಯದ ವಿವಿಧ ಭಾಗಗಳಿಗೆ ಸಂಚರಿಸುವ ಸರ್ಕಾರಿ ಬಸ್​ಗಳ ಓಡಾಟದಲ್ಲಿ ವ್ಯತ್ಯಯವಾಗಿದ್ದರೂ ಸರ್ಕಾರಿ ನಗರ ಸಾರಿಗೆ ಬಸ್​ಗಳು ಓಡಾಟ ನಡೆಸುತ್ತಿವೆ. ಉಡುಪಿಯಿಂದ ಆಗುಂಬೆ, ಶಿವಮೊಗ್ಗ, ಕುಂದಾಪುರ, ಭಟ್ಕಳ, ಕೊಟ್ಟಿಗೆಹಾರದ ಕಡೆಗೆ ಹೋಗುವ ಬಸ್​ಗಳು ವ್ಯವಹರಿಸುತ್ತಿವೆ. ಮಂಗಳೂರಿನಲ್ಲೂ ಇದೇ ಪರಿಸ್ಥಿತಿ ಇದ್ದು ನಗರ ಸಾರಿಗೆಗಳು ಓಡಾಟ ನಡೆಸುತ್ತಿವೆ. ಸುಳ್ಯ, ಪುತ್ತೂರು, ಬಂಟ್ವಾಳ ಮುಂತಾದ ಕಡೆಗೆ ಸರ್ಕಾರಿ ಬಸ್ ಸಂಚಾರ ನಡೆಯುತ್ತಿದೆ. ಹಾಗಾಗಿ ಸ್ಥಳೀಯರಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ.

ಆದರೆ, ಉಡುಪಿ, ದಕ್ಷಿಣ ಕನ್ನಡದಿಂದ ಹೊರ ಜಿಲ್ಲೆಗಳಿಗೆ ಪ್ರಯಾಣಿಸುವ ಬಸ್​ಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಪರವೂರಿನ ಪ್ರಯಾಣಿಕರು ಪರದಾಡುವ ಸ್ಥಿತಿ ಎದುರಾಗಿದೆ. ಮೈಸೂರು, ಬೆಂಗಳೂರು, ಹಾಸನದ ಕಡೆಗೆ ಹೋಗುವ ಕೆಲ ಬಸ್​ಗಳು ತಮ್ಮ ಸಂಚಾರ ಆರಂಭಿಸಿವೆಯಾದರೂ ಮುಷ್ಕರ ನಡೆಸಲು ಒತ್ತಡ ಎದುರಾದರೆ ಸಂಚಾರವನ್ನು ಅರ್ಧಕ್ಕೆ ನಿಲ್ಲಿಸುವ ಅಪಾಯವಿದೆ. ಇದರಿಂದ ಪ್ರಯಾಣಿಕರು ಅತಂತ್ರರಾಗುವ ಸಮಸ್ಯೆ ಎದುರಾಗಬಹುದು.

ಉಡುಪಿಯಿಂದ ಮೈಸೂರು, ಹುಬ್ಬಳ್ಳಿ ಭಾಗಕ್ಕೆ ಹೋಗುವ ಬಸ್​ಗಳು ಬೆಳಗ್ಗೆ ನಿಲ್ದಾಣಕ್ಕೆ ಆಗಮಿಸಿದ್ದು, ಸಂಚಾರ ನಡೆಸಿವೆ. ಆದರೆ, ಪ್ರಯಾಣದಲ್ಲಿ ತೊಡಕುಂಟಾಗುವ ಸಾಧ್ಯತೆಯನ್ನು ಕಡೆಗಣಿಸುವಂತಿಲ್ಲ. ಉತ್ತರ ಕರ್ನಾಟಕ, ಬೆಂಗಳೂರು, ಮೈಸೂರು ಭಾಗಕ್ಕೆ ಹೊರಟಿರುವ ಪ್ರಯಾಣಿಕರು ಸಂಕಷ್ಟಕ್ಕೆ ತುತ್ತಾಗುವ ಅಪಾಯವಿದೆ.

ಉಡುಪಿಯಲ್ಲಿ ಪ್ರತಿನಿತ್ಯ ಸರಾಸರಿ 300 ಸರ್ಕಾರಿ ಬಸ್ಸ್​ಗಳು ಓಡಾಟ ನಡೆಸುತ್ತವೆ. ಆದರೆ, ನಿನ್ನೆ ಮತ್ತು ಇಂದು ಸರ್ಕಾರಿ ಬಸ್ ಸಂಚಾರ ಪ್ರಮಾಣ ಕಡಿಮೆಯಾಗಿದೆ. ನಿನ್ನೆ ಅಂದಾಜು 100ರಷ್ಟು ಬಸ್​ಗಳು ಸಂಚರಿಸಿದ್ದವು. ಇಂದು ಸುಮಾರು 30ರಷ್ಟು ಬಸ್​ಗಳು ಮಾತ್ರ ಡಿಪೋದಿಂದ ಹೊರ ಹೊರಟಿವೆ. ಮಂಗಳೂರಿನಲ್ಲೂ ಇದೇ ಪರಿಸ್ಥಿತಿ ಇದ್ದು ಹೊರ ಊರುಗಳಿಂದ ಬಸ್​ಗಳು ಡಿಪೋಕ್ಕೆ ಆಗಮಿಸುತ್ತಿಲ್ಲ. ಡಿಪೋಕ್ಕೆ ಬಸ್​ಗಳ ಆಗಮನದ ಪ್ರಮಾಣ ಕಡಿಮೆಯಾಗಿದೆ. ದೂರದೂರಿಗೆ ಸರ್ಕಾರಿ ಬಸ್​ಗಳಲ್ಲೇ ಪ್ರಯಾಣಿಸುವ ಅನಿವಾರ್ಯತೆ ಹೊಂದಿದವರು ತೊಂದರೆಗೆ ಒಳಗಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಪ್ರಯಾಣ ಮುಂದೂಡಿದ್ದಾರೆ. ಹಾಗಾಗಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಿದ್ದು, ಸರ್ಕಾರಿ ಬಸ್ ನಿಲ್ದಾಣಗಳು ಭಣಗುಡುತ್ತಿವೆ.

ಮತ್ತೊಂದೆಡೆ ಮಡಿಕೇರಿ ಬಸ್ ನಿಲ್ದಾಣದಲ್ಲಿ ನಿಂತಿರುವ ಬಸ್​ಗಳಿಗೆ ಆಯಾ ಡಿಪೋಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮಡಿಕೇರಿಯಲ್ಲಿ ಮಂಗಳೂರು, ಚಾಮರಾಜನಗರ, ಕುಂದಾಪುರ, ಮೈಸೂರು, ಬೆಂಗಳೂರು ಸೇರಿದಂತೆ 17 ಡಿಪೋದ ಅಂದಾಜು 60ರಷ್ಟು ಬಸ್​ಗಳು ತಂಗಿವೆ. ಆಯಾ ಡಿಪೋಕ್ಕೆ ತೆರಳಿ, ಅಲ್ಲಿ ಬಸ್ ನಿಲ್ಲಿಸಲು ಮೈಕ್ ಮೂಲಕ ಎಲ್ಲಾ ಚಾಲಕರಿಗೆ ಸಂಚಾರ ನಿಯಂತ್ರಕರು ಸೂಚನೆ ನೀಡಿದ್ದಾರೆ.

ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ: ಮೆಜೆಸ್ಟಿಕ್‌ಗೆ ಆಗಮಿಸಿದ 2 ಬಸ್‌ಗಳು

Published On - 2:47 pm, Sat, 12 December 20

ರೆಸಾರ್ಟ್​ ನಲ್ಲಿ ಎಂಜಾಯ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು
ರೆಸಾರ್ಟ್​ ನಲ್ಲಿ ಎಂಜಾಯ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು
ಸಾಕು ನಾಯಿಯನ್ನು ಅಮಾನವೀಯವಾಗಿ ಥಳಿಸಿದ ಮನೆಕೆಲಸದಾಕೆ
ಸಾಕು ನಾಯಿಯನ್ನು ಅಮಾನವೀಯವಾಗಿ ಥಳಿಸಿದ ಮನೆಕೆಲಸದಾಕೆ
ಉದ್ಯಮಿಗೆ ಹೃದಯಾಘಾತ:ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಉದ್ಯಮಿಗೆ ಹೃದಯಾಘಾತ:ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
VIDEO: ಫ್ಲೈಯಿಂಗ್ ಫಿಲಿಪ್: ಇದಪ್ಪಾ ಕ್ಯಾಚ್ ಅಂದ್ರೆ..!
VIDEO: ಫ್ಲೈಯಿಂಗ್ ಫಿಲಿಪ್: ಇದಪ್ಪಾ ಕ್ಯಾಚ್ ಅಂದ್ರೆ..!
‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ಪ್ರೇಮ್ ಕೊಟ್ಟ ಉತ್ತರ ಏನು?
‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ಪ್ರೇಮ್ ಕೊಟ್ಟ ಉತ್ತರ ಏನು?
ವಿದ್ಯಾರ್ಥಿಯನ್ನು ಎಳೆದು ಕಪಾಳಮೋಕ್ಷ ಮಾಡಿದ ಐಎಎಸ್ ಅಧಿಕಾರಿ
ವಿದ್ಯಾರ್ಥಿಯನ್ನು ಎಳೆದು ಕಪಾಳಮೋಕ್ಷ ಮಾಡಿದ ಐಎಎಸ್ ಅಧಿಕಾರಿ
ಬಾಲಕನ ಕುತ್ತಿಗೆಗೆ ಕಚ್ಚಿದ ಬೀದಿ ನಾಯಿ, ಆತನ ಸ್ಥಿತಿ ಯಾರಿಗೂ ಬೇಡ
ಬಾಲಕನ ಕುತ್ತಿಗೆಗೆ ಕಚ್ಚಿದ ಬೀದಿ ನಾಯಿ, ಆತನ ಸ್ಥಿತಿ ಯಾರಿಗೂ ಬೇಡ
VIDEO: ಉಫ್... ಹೀಗೂ ಕ್ಯಾಚ್ ಹಿಡೀತಾರಾ... ಅದ್ಭುತ ಅತ್ಯದ್ಭುತ
VIDEO: ಉಫ್... ಹೀಗೂ ಕ್ಯಾಚ್ ಹಿಡೀತಾರಾ... ಅದ್ಭುತ ಅತ್ಯದ್ಭುತ
ಓಪನ್ ಆಗಿ ಹೇಳ್ತೀನಿ, ಏನು ಬೇಕಾದ್ರೂ ಟ್ರೋಲ್ ಮಾಡಿಕೊಳ್ಳಿ: ಜೋಗಿ ಪ್ರೇಮ್
ಓಪನ್ ಆಗಿ ಹೇಳ್ತೀನಿ, ಏನು ಬೇಕಾದ್ರೂ ಟ್ರೋಲ್ ಮಾಡಿಕೊಳ್ಳಿ: ಜೋಗಿ ಪ್ರೇಮ್
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್​ ರೈಲಿನಲ್ಲಿ ಭಾರಿ ಅಗ್ನಿ ಅವಘಡ
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್​ ರೈಲಿನಲ್ಲಿ ಭಾರಿ ಅಗ್ನಿ ಅವಘಡ