AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ಪ್ರೋತ್ಸಾಹ ಧನ ಘೋಷಣೆ

ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ 200 ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು ಎಂದು ಕೊಪ್ಪಳ ಜಿಲ್ಲೆ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಹೆಚ್​ ಮುಲ್ಲಾ ತಿಳಿಸಿದ್ದಾರೆ.

ಇಂದು ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ಪ್ರೋತ್ಸಾಹ ಧನ ಘೋಷಣೆ
ಕರ್ತವ್ಯಕ್ಕೆ ಹಾಜರಾದವರಿಗೆ ಹೂಗುಚ್ಛ ನೀಡಿದ ಅಧಿಕಾರಿಗಳು
shruti hegde
| Edited By: |

Updated on: Apr 09, 2021 | 12:06 PM

Share

ಕೊಪ್ಪಳ: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಮಂದಿಟ್ಟು ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಸಂಚರಿಸಲು ಬಸ್​ಗಳಿಲ್ಲದೇ ಮೂರು ದಿನಗಳಿಂದ ಪ್ರಯಾಣಿಕರೆಲ್ಲ ಪರದಾಡುವ ಪರಿಸ್ಥಿತಿ ಎದುರಾಗಿದೆ. ಮುಷ್ಕರ ಹಿನ್ನೆಲೆಯಲ್ಲಿ ಅದೆಷ್ಟೋ ಮಂದಿ ಕಾಲ್ನಡಿಗೆಯಲ್ಲಿಯೇ ಸಂಚರಿಸುತ್ತಿದ್ದಾರೆ. ಇನ್ನಿತರ ವಾಹನದಲ್ಲಿ ಪ್ರಯಾಣಿಸೋಣ ಎಂದರೆ ಡಬಲ್​ ಚಾರ್ಜ್​ ಕೇಳುವ ಆಟೋ ಚಾಲಕರು. ಹೀಗಿದ್ದಾಗ ಪ್ರಯಾಣಿಕರೆಲ್ಲ ದಿಕ್ಕು ತೋಚದೇ ಬಸ್​ನಿಲ್ದಾಣದಲ್ಲಿಯೇ ಕುಳಿತಿದ್ದಾರೆ. ಇಂದು ಕರ್ತವ್ಯಕ್ಕೆ ಹಾಜರಾಗುವ ನೌಕರರಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ನಿಯಂತ್ರಣಾಧಿಕಾರಿ ಎ.ಹೆಚ್.ಮುಲ್ಲಾ ಹೇಳಿದ್ದಾರೆ.

ಇಂದು ಬೆಳಿಗ್ಗೆಯಿಂದ ಇಲ್ಲಿಯವರೆಗೆ ಕೊಪ್ಪಳ ಸಾರಿಗೆ ವಿಭಾಗದಿಂದ‌ 6 ಬಸ್​ಗಳು ಸಂಚಾರ ಆರಂಭಿಸಿವೆ. ಕೊಪ್ಪಳದಿಂದ-ಕುಷ್ಟಗಿ ಮತ್ತು ಹೈದರಾಬಾದ್ ಬಸ್​ ಸಂಚಾರಗೊಂಡಿದೆ. ನೌಕರರೆಲ್ಲ ಕರ್ತವ್ಯಕ್ಕೆ ಹಾಜರಾಗುವ ಉದ್ದೇಶದಿಂದ, ಇಂದು ಕರ್ತವ್ಯಕ್ಕೆ ಹಾಜರಾಗುವ ಚಾಲಕ ಮತ್ತು ನಿರ್ವಾಹಕರಿಗೆ 200 ರೂಪಾಯಿ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದೆ ಎಂದು ನಿಯಂತ್ರಣಾಧಿಕಾರಿ ತೀರ್ಮಾನ ಕೈಗೊಂಡಿದ್ದಾರೆ.

ಕೊಪ್ಪಳದಿಂದ ವಿಜಯಪುರಕ್ಕೆ ತೆರಳಿದ ಕೆಎಸ್​ಆರ್​ಟಿಸಿ ಬಸ್ ಸಾರಿಗೆ ಮುಷ್ಕರದ ನಡುವೆ ಸಾರಿಗೆ ನೌಕರ ಕೆಲಸಕ್ಕೆ ಹಾಜರಾಗಿದ್ದಾರೆ. ಕೊಪ್ಪಳದಿಂದ ವಿಜಯಪುರಕ್ಕೆ ಒಂದೇ ಒಂದು ಬಸ್​ ಸಂಚರಿಸಿದೆ. ಕರ್ತವ್ಯಕ್ಕೆ ಹಾಜರಾದ್ದರಿಂದ ನಿಯಂತ್ರಣ ಅಧಿಕಾರಿ ಎ.ಹೆಚ್​ ಮುಲ್ಲಾ ಹೂಗುಚ್ಛ ನೀಡಿ ಗೌರವಿಸಿದ್ದಾರೆ.

ಜಿಲ್ಲೆಯಲ್ಲಿ ಮೂರನೇ ದಿನವೂ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಬಸ್​ನಿಲ್ದಾಣಗಳೆಲ್ಲಾ ಖಾಲಿ ಖಾಲಿಯಾಗಿದೆ. ಸಾರಿಗೆ ಬಸ್​ ಸಂಚಾರ ಇಂದೂ ಇಲ್ಲದ ಕಾರಣ ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಇನ್ನು ಕೆಲವರು ಬಸ್​ ನಿಲ್ದಾಣದಲ್ಲಿಯೇ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಮಹಿಳೆಯರು, ಪುರುಷರು, ಮಕ್ಕಳು ಸೇರಿದಂತೆ ವೃದ್ಧೆಯರು ಬಸ್​ ನಿಲ್ದಾಣದಲ್ಲಿ ದಿಕ್ಕು ತೋಚದೆ ಕುಳಿತಿದ್ದಾರೆ. ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮಕ್ಕೆ ವೃದ್ಧೆಯರು ಹೋಗಬೇಕಾಗಿತ್ತು. ವೃದ್ಧೆಯರಾದ ಫಕೀರಮ್ಮ, ರೇಣುಕಮ್ಮ ಬಸ್ಸಿಗಾಗಿ ಕಾದು ಕುಳಿತಿದ್ದಾರೆ. ಆದರೆ ಯಾವುದೇ ಬಸ್​ಗಳು ಸಂಚರಿಸುತ್ತಿಲ್ಲವಾದ್ದರಿಂದ ಬಸ್​ನಿಲ್ದಾಣದಲ್ಲಿ ದಿಕ್ಕು ತೋಚದೇ ಕುಳಿತಿದ್ದಾರೆ.

ಇದನ್ನೂ ಓದಿ: Karnataka Bus Strike Live: ಸಾರಿಗೆ ನೌಕರರ ಮುಷ್ಕರಕ್ಕೆ ಮೂರನೇ ದಿನ.. ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಸಿಬ್ಬಂದಿ

Bus Strike: ಇತಿಹಾಸದಲ್ಲೇ ಮೊದಲ ಬಾರಿಗೆ ನಾಲ್ಕು ತಿಂಗಳ ಅಂತರದಲ್ಲಿ ಎರಡು ಬಾರಿ ಸಾರಿಗೆ ನೌಕರರ ಮುಷ್ಕರ; ಇಂದು ಸಹ ಪ್ರಯಾಣಿಕರ ಪರದಾಟ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು