AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 21, 2021 | 4:01 PM

ಬೆಂಗಳೂರು: ಸುಮಾರು 2 ತಿಂಗಳ ನಂತರ ಇಂದಿನಿಂದ ಬಸ್ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಏಪ್ರಿಲ್‌ ತಿಂಗಳ ಪಾಸ್ ಅವಧಿಯನ್ನು ವಿಸ್ತರಿಸಿದೆ. ಇಷ್ಟು ದಿನಗಳ ಕಾಲ ಲಾಕ್‌ಡೌನ್‌ ಇದ್ದ ಕಾರಣ ಬಸ್​ಗಳು ಸಂಚರಿಸಲಿರಲಿಲ್ಲ. ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಪಾಸ್‌ಗಳಿಗೆ ಮಾತ್ರ ಈ ವಿಸ್ತರಣೆ ಅನ್ವಯವಾಗಲಿದ್ದು, ಈ ಅವಧಿಯ ಹಳೆ ಪಾಸ್‌ ತೋರಿಸಿ 18 ದಿನಗಳ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

Karnataka Unlock: ರಾಜ್ಯದ ಇನ್ನೂ 6 ಜಿಲ್ಲೆಗಳು ಅನ್​ಲಾಕ್; ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿದೆ. 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 19ರಂದು ಘೋಷಿಸಿದ್ದರು.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ಈ ಜಿಲ್ಲೆಗಳ ಸಾಲಿಗೆ ಹೊಸದಾಗಿ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ.

ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಕೊವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸಲಹೆ

International Yoga Day 2021: ಕೊರೊನಾ ಸೋಂಕಿತರೊಂದಿಗೆ ಕೊವಿಡ್​ ಕೇಂದ್ರದಲ್ಲೇ ಯೋಗ ದಿನಾಚರಣೆ ಆಚರಿಸಿದ ರೇಣುಕಾಚಾರ್ಯ

(KSRTC extended April month bus pass to 18 days for Karnataka Lockdown)

Published On - 3:31 pm, Mon, 21 June 21

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ