AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿಯ ಈ ಬಸ್​ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್!

ಕರ್ನಾಟಕದ ವಿವಿಧ ನಗರಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೆಎಸ್​ಆರ್​ಟಿಸಿ ಫ್ಲೈಬಸ್ ಇಂದಿನಿಂದ ಹೊಸದೊಂದು ಕೊಡುಗಡೆಯನ್ನು ಪ್ರಯಾಣಿಕರಿಗೆ ನೀಡುತ್ತಿದೆ. ನಂದಿನಿ ಸ್ನ್ಯಾಕ್ ಕಿಟ್ ವಿತರಣೆ ಇಂದಿನಿಂದ ಶುರುವಾಗುತ್ತಿದೆ. ಏನಿದು ಕೆಎಸ್​ಆರ್​​ಟಿಸಿಯ ಹೊಸ ಯೋಜನೆ? ನಂದಿನಿ ಸ್ನ್ಯಾಕ್ ಕಿಟ್ ಕೊಡುವ ಉದ್ದೇಶವೇನು? ಇಲ್ಲಿದೆ ವಿವರ.

ಕೆಎಸ್​ಆರ್​ಟಿಸಿಯ ಈ ಬಸ್​ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:Nov 12, 2025 | 10:14 AM

Share

ಬೆಂಗಳೂರು, ನವೆಂಬರ್ 12: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ ಇಂದಿನಿಂದ ಕೆಎಂಎಫ್​​ (KMF) ನಂದಿನಿ ಸ್ನ್ಯಾಕ್ ಕಿಟ್ (Nandini Snack Kit) ಸಿಗಲಿದೆ! ಈ ಹೊಸ ಯೋಜನೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಇಂದು ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್​ಪೋರ್ಟ್​ಗೆ ತೆರಳುವ ಬಸ್​ಗಳಲ್ಲೂ ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ಈ ಉಪಕ್ರಮ ಆರಂಭಿಸಲಾಗುತ್ತಿದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್, ಅದರ ಡೈರಿ ಆಧಾರಿತ ತಿಂಡಿಗಳು ಮತ್ತು ಪಾನೀಯಗಳಿಗೆ ಇನ್ನಷ್ಟು ಪ್ರಚಾರ ದೊರೆಯುವಂತೆ ಮಾಡುವ ಮೂಲಕ ಅವುಗಳ ಉತ್ತೇಜನಕ್ಕೂ ಈ ಉಪಕ್ರಮ ಸಹ ಸಹಾಯ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂದಿನಿ ಸ್ನ್ಯಾಕ್ ಕಿಟ್​ನಲ್ಲಿ ಏನೇನಿರಲಿದೆ?

ಫ್ಲೈಬಸ್ ಪ್ರಯಾಣಿಕರಿಗೆ ನೀಡುವ ನಂದಿನಿ ಸ್ನ್ಯಾಕ್ ಕಿಟ್​ನಲ್ಲಿ ಏನೇನು ಉತ್ಪನ್ನಗಳು ಇರಲಿವೆ ಎಂಬುದನ್ನು ಕೆಎಸ್​​ಆರ್​ಟಿಸಿ ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲ. ನಂದಿನಿ ಬ್ರ್ಯಾಂಡ್​ನ ಕೆಲವು ಉತ್ಪನ್ನಗಳು ಇರಲಿವೆ ಎಂದು ತಿಳಿಸಿದೆ.

ಕೆಎಸ್‌ಆರ್‌ಟಿಸಿ ಫ್ಲೈಬಸ್ ಸೇವೆಯು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೈಸೂರು, ಮಂಗಳೂರು, ಮಡಿಕೇರಿ, ಮಣಿಪಾಲ, ಉಡುಪಿ ಮತ್ತು ಕುಂದಾಪುರ ಸೇರಿದಂತೆ ಕರ್ನಾಟಕದ ಹಲವಾರು ಪ್ರಮುಖ ನಗರಗಳು ಮತ್ತು ಪಟ್ಟಣಗಳೊಂದಿಗೆ ಸಂಪರ್ಕಿಸುತ್ತದೆ.

ಕೆಎಸ್‌ಆರ್‌ಟಿಸಿ ತನ್ನ ಪ್ರೀಮಿಯಂ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಉಚಿತ ಬಾಟಲ್ ಕುಡಿಯುವ ನೀರನ್ನು ಈ ಹಿಂದೆ ಒದಗಿಸುತ್ತಿತ್ತು. ಆದರೆ, 2019 ರ ಅಕ್ಟೋಬರ್​​ನಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನಿಗಮವು ಏಕ-ಬಳಕೆಯ ಪ್ಲಾಸ್ಟಿಕ್ ಬಾಟಲಿಗಳನ್ನು ನೀಡುವುದನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್

ದಾವಣಗೆರೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹೊಸ ಫ್ಲೈಬಸ್ ಸೇವೆಗೂ ಇಂದು ಚಾಲನೆ ದೊರೆಯುತ್ತಿದೆ. ಈ ಕ್ರಮವು ಕೆಎಸ್‌ಆರ್‌ಟಿಸಿಯ ಪ್ರಯಾಣಿಕರ ಸೌಲಭ್ಯಗಳನ್ನು ಸುಧಾರಿಸುವ ಮತ್ತು ಎರಡನೇ ಸ್ತರದ ನಗರಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ವಿಸ್ತರಿಸುವ ದೊಡ್ಡ ಗುರಿಗೆ ಪೂರಕವಾಗಿದ ಎಂದು ಸಂಸ್ಥೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Wed, 12 November 25

Follow Us
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?