AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಲಘು ಮತ್ತು ಭಾರೀ ವಾಹನ ಚಾಲನಾ ತರಬೇತಿ ನೀಡುತ್ತಿದೆ. ಇದು ಚಾಲಕ ವೃತ್ತಿಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಸುವರ್ಣಾವಕಾಶವಾಗಿದೆ. 20-45 ವಯೋಮಿತಿ ಮತ್ತು 8/10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಸಹಾಯ ಮತ್ತು KSRTC ಚಾಲಕ ಹುದ್ದೆಗಳಿಗೆ ಆದ್ಯತೆ ಸಿಗಲಿದೆ. ಫೆಬ್ರವರಿ 20, 2026ರೊಳಗೆ ಅರ್ಜಿ ಸಲ್ಲಿಸಿ.

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 06, 2026 | 5:40 PM

Share

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ನೀಡಲು ಮುಂದಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಹೇಳಲಾಗಿದೆ. ಲಘು ಮೋಟಾರು ವಾಹನ (LMV) ಮತ್ತು ಭಾರೀ ಮೋಟಾರು ವಾಹನ (HMV) ಎರಡ ತರಬೇತಿ ಕೂಡ ಇರುತ್ತದೆ. ಕರ್ನಾಟಕದ ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಮುಖ್ಯ ಉದ್ದೇಶ, ಎಸ್‌ಸಿ ಸಮುದಾಯದ ಯುವಕರಿಗೆ ಉತ್ತಮ ತರಬೇತಿ ನೀಡಿ. ಸಾರಿಗೆ ಸಂಸ್ಥೆಗಳಲ್ಲಿ ಅಥವಾ ಖಾಸಗಿಯಾಗಿ ಉದ್ಯೋಗ ಪಡೆಯಲು ಸಜ್ಜುಗೊಳಿಸುವುದಾಗಿದೆ.

ಅರ್ಹತಾ ಮಾನದಂಡಗಳು:

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ತುಂಬಿರಬೇಕು ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ವಿದ್ಯಾರ್ಹತೆ: ಕನಿಷ್ಠ 8ನೇ ತರಗತಿ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು (ತರಬೇತಿಯ ವಿಧಕ್ಕೆ ಅನುಗುಣವಾಗಿ).

ದಾಖಲೆಗಳು: ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಮತ್ತು ಫೋಟೋಗಳು ಅಗತ್ಯ

ಅರ್ಜಿ ಸಲ್ಲಿಸುವುದು ಹೇಗೆ?

ಸ್ಥಳ: ಆಸಕ್ತ ಅಭ್ಯರ್ಥಿಗಳು ತಮ್ಮ ಹತ್ತಿರದ KSRTC ವಿಭಾಗೀಯ ಕಚೇರಿ ಅಥವಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಫಾರಂ ಪಡೆಯಬಹುದು.

ಆಯ್ಕೆ ಪ್ರಕ್ರಿಯೆ: ಅರ್ಜಿಗಳನ್ನು ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ.

ಸೌಲಭ್ಯ: ತರಬೇತಿಯ ಸಮಯದಲ್ಲಿ ಅಭ್ಯರ್ಥಿಗಳಿಗೆ ಉಚಿತ ವಸತಿ ಅಥವಾ ಪ್ರೋತ್ಸಾಹಧನ ನೀಡುವ ಸಾಧ್ಯತೆಯೂ ಇರುತ್ತದೆ (ಇದು ಆಯಾ ವಿಭಾಗದ ನಿಯಮಕ್ಕೆ ಒಳಪಟ್ಟಿರುತ್ತದೆ).

ಈ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಅಧಿಕೃತ ಚಾಲನಾ ಪರವಾನಗಿ (Driving License) ಪಡೆಯಲು ಸಂಸ್ಥೆಯೇ ನೆರವು ನೀಡುತ್ತದೆ. ಅಲ್ಲದೆ, ಭವಿಷ್ಯದಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆದಾಗ ಈ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ ‘ಎಮರ್ಜೆನ್ಸಿ ಕೋಟಾ’: ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ: ಈಗಾಗಲೇ ಅರ್ಜಿ ವಿತರಣೆ ಪ್ರಕ್ರಿಯೆ ಆರಂಭವಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸಾಮಾನ್ಯವಾಗಿ ಈ ರೀತಿಯ ಅಧಿಸೂಚನೆಗಳು ಹೊರಬಂದ 15 ರಿಂದ 20 ದಿನಗಳ ಕಾಲಾವಕಾಶ ಇರುತ್ತದೆ. ಫೆಬ್ರವರಿ ತಿಂಗಳ ಮೂರನೇ ವಾರದೊಳಗೆ (ಅಂದಾಜು ಫೆಬ್ರವರಿ 20, 2026) ಅರ್ಜಿಗಳನ್ನು ಸಲ್ಲಿಸುವುದು ಉತ್ತಮ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?