AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು-ಸಾಲು ರಾಷ್ಟ್ರೀಯ ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ

ಕೆಎಸ್​ಆರ್​ಟಿಸಿಗೆ ಒಟ್ಟು 9 ವರ್ಗಗಳಲ್ಲಿ ಹಾಗೂ ಬಿಎಂಟಿಸಿಗೆ 4 ವರ್ಗಗಳಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ Corporate Collateral ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಹಾಗಾದ್ರೆ, ಯಾವೆಲ್ಲ ವರ್ಗಗಳಲ್ಲಿ ಪ್ರಶಸ್ತಿಗಳು ಲಭಿಸಿವೆ ಎನ್ನುವ ವಿವರ ಈ ಕೆಳಗಿನಂತಿದೆ.

ಸಾಲು-ಸಾಲು ರಾಷ್ಟ್ರೀಯ ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ
ಕೆಎಸ್​ಆರ್​ಟಿಸಿ, ಬಿಎಂಟಿಸಿಗೆ ರಾಷ್ಟ್ರೀಯ ಪ್ರಶಸ್ತಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Sep 24, 2023 | 1:01 PM

Share

ಬೆಂಗಳೂರು, (ಸೆಪ್ಟೆಂಬರ್ 24): ಕೆಎಸ್​ಆರ್​ಟಿಸಿಗೆ (Karnataka State Road Transport Corporation) ಒಟ್ಟು 9 ವರ್ಗಗಳಲ್ಲಿ ಹಾಗೂ ಬಿಎಂಟಿಸಿಗೆ 4 ವರ್ಗಗಳಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ Corporate Collateral ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ, ನವದೆಹಲಿಯ ಪಿ.ಹೆಚ್.ಡಿ. ಚೇಂಬರ್ಸ್​ನಲ್ಲಿ ಆಯೋಜಿಸಿದ್ದ 17ನೇ ವಿಶ್ವ ಸಂವಹನ ಸಮ್ಮೇಳನ ಮತ್ತು ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾತ್ತು. ನಿಗಮದ ಪರವಾಗಿ ಕೆಎಸ್​ಆರ್​ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ ನಾಯ್ಡು ಅಲೂರಿ(ಚಿಕ್ಕಬಳ್ಳಾಪುರ ವಿಭಾಗ) ಕೋಲಾರ ವಿಭಾಗದ ವಿ. ಬಸವರಾಜು, ಬೆಂಗಳೂರು ಕೇಂದ್ರೀಯ ವಿಭಾಗದ ಎಸ್. ಲಕ್ಷ್ಮಣ್ ಹಾಗೂ ಮಂಡ್ಯ ವಿಭಾಗದ ಎಸ್.ಪಿ ನಾಗರಾಜ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಬಾಂಗ್ಲಾದೇಶ ಮಾಹಿತಿ ಆಯುಕ್ತ ಗುಲಾಂ ರೆಹಮಾನ್, ಪಿ.ಆರ್.ಸಿ.ಐ ಮುಖ್ಯಸ್ಥ ಎಂ ಬಿ ಜಯರಾಂ, ಎನ್.ಎಫ್.ಎಲ್ ನಿರ್ದೇಶಕ ಬಿ.ವಿ ವಿಠ್ಠಲ್, ಸ್ವಿಜರ್ಲೆಂಡ್ ಮಾಧ್ಯಮ ಹಾಗೂ ಪತ್ರಿಕೋದ್ಯಮ ಸಂಸ್ಥೆ (IMeG) ನಿರ್ದೇಶಕ ಪ್ರೊ. ಮ್ಯಾಥ್ಯು ಹಿಬರ್ಡ್ ವಿವಿಧ ವರ್ಗಗಳಲ್ಲಿ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಹಾಗಾದ್ರೆ, ಯಾವೆಲ್ಲ ವರ್ಗಗಳಲ್ಲಿ ಪ್ರಶಸ್ತಿಗಳು ಲಭಿಸಿವೆ ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ

ಕೆಎಸ್​ಆರ್​ಟಿಸಿಗೆ ದೊರೆ ಪ್ರಶಸ್ತಿಗಳು

1. ವರ್ಷದ ಅತ್ಯುತ್ತಮ ಗ್ರಾಹಕ ಸ್ನೇಹಿ ಸಂಸ್ಥೆ- ಡೈಮಂಡ್ ಪ್ರಶಸ್ತಿ

2. ಅತ್ಯುತ್ತಮ ವರ್ಷದ ಸೇವಾ ಉಪಕ್ರಮ – ಡೈಮಂಡ್ ಪ್ರಶಸ್ತಿ

3. ಸಾಂಸ್ಥಿಕ ಹಾಗೂ ವ್ಯಾವಹಾರಿಕ ಸಂಪರ್ಕ ಉಪಕ್ರಮ- ಡೈಮಂಡ್ ಪ್ರಶಸ್ತಿ

4. ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ- ಬೆಳ್ಳಿ ಪ್ರಶಸ್ತಿ

5. ವಿವಿಧತೆ ಹಾಗೂ ಸಮಾನತೆಯ ಉತ್ತಮ ಉಪಕ್ರಮ- ಬೆಳ್ಳಿ ಪ್ರಶಸ್ತಿ

6. ಅತ್ಯುತ್ತಮ ವರ್ಷದ ಉಪಕ್ರಮ ಉತ್ಪನ್ನ- ಬೆಳ್ಳಿ ಪ್ರಶಸ್ತಿ

7. ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ- ಕಂಚಿನ ಪ್ರಶಸ್ತಿ

8. ಸಾರ್ವಜನಿಕ ಸಂಪರ್ಕ ಅಧ್ಯಯನ- ಕಂಚಿನ ಪ್ರಶಸ್ತಿ

9. ಪ್ರಾದೇಶಿಕ ಆಂತರಿಕ ನಿಯತಕಾಲಿಕ ಮುದ್ರಣ- ಸಮಾಧಾನಕರ ಪ್ರಶಸ್ತಿ.

ಬಿ.ಎಂ.ಟಿ.ಸಿಗೆ ಒಲಿದ ಪ್ರಶಸ್ತಿಗಳು

ಬಿಎಂಟಿಸಿಗೆ ಈ ಕೆಳಕಂಡ 4 ವರ್ಗಗಳಲ್ಲಿ ಪ್ರಶಸ್ತಿ ಲಭಿಸಿದ್ದು, ಸಂಸ್ಥೆಯ ಪರವಾಗಿ ಪಶ್ಚಿಮ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್ ಎನ್, ಪ್ರಶಸ್ತಿಯನ್ನು ಸ್ವೀಕರಿಸಿದರು.

1.ಸಾಂಸ್ಥಿಕ ಕೈಪಿಡಿ ( Corporate Broucher)- ಡೈಮಂಡ್ ಪ್ರಶಸ್ತಿ

2.ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ- ಚಿನ್ನದ ಪ್ರಶಸ್ತಿ

3.ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ- ಬೆಳ್ಳಿ ಪ್ರಶಸ್ತಿ

4.ವರ್ಷದ ಅತ್ಯುತ್ತಮ ಸೃಜನಶೀಲ ಜಾಹೀರಾತು-ಕಂಚಿನ ಪ್ರಶಸ್ತಿ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್