AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಸುರಕ್ಷತೆಗಾಗಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಪ್ಯಾನಿಕ್ ಬಟನ್​​, ಜಿಪಿಎಸ್​ ಅಳವಡಿಕೆ

ಕರ್ನಾಟಕ ಸಾರಿಗೆ ಸಂಸ್ಥೆ ಪ್ರಯಾಣಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಠಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಕೈಗೊಳ್ಳುತ್ತಿದೆ. ಇದೀಗ ಮಹಿಳಾ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಪ್ಯಾನಿಕ್ ಬಟನ್​​, ಜಿಪಿಎಸ್​ ಅಳವಡಿಕೆ
ಕೆಎಸ್​ಆರ್​​ಟಿಸಿ
ವಿವೇಕ ಬಿರಾದಾರ
|

Updated on: Aug 14, 2023 | 11:45 AM

Share

ಬೆಂಗಳೂರು (ಆ.14): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (RTC) ಪ್ರಯಾಣಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಠಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಕೈಗೊಳ್ಳುತ್ತಿದೆ. ಇದೀಗ ಮಹಿಳಾ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ಗಳಲ್ಲಿ ಪ್ಯಾನಿಕ್ ಬಟನ್ (Panic Button) ಮತ್ತು ಜಿಪಿಎಸ್ (GPS) ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಪ್ರಯಾಣಿಕರು ಒಮ್ಮೆ ಪ್ಯಾನಿಕ್ ಬಟನ್ ಒತ್ತಿದರೇ, ಕೆಎಸ್‌ಆರ್‌ಟಿಸಿಯ ಕೇಂದ್ರೀಕೃತ ನಿಯಂತ್ರಣ ಕೊಠಡಿಗೆ ಸಂದೇಶ ರವಾನೆಯಾಗುತ್ತದೆ. ಆಗ ಕೇಂದ್ರೀಕೃತ ನಿಯಂತ್ರಣ ಕೊಠಡಿ ಸಿಬ್ಬಂದಿ ಜಿಪಿಎಸ್ ಮೂಲಕ ಬಸ್​​ ಸ್ಥಳವನ್ನು ಟ್ರ್ಯಾಕ್ ಮಾಡುತ್ತಾರೆ. ನಂತರ ಹತ್ತಿರದ ಪೊಲೀಸ್​​ ಠಾಣೆಗೆ ಮಾಹಿತಿ ನೀಡುತ್ತಾರೆ.

ಕೇಂದ್ರೀಕೃತ ನಿಯಂತ್ರಿತ ಕೊಠಡಿ, ಪ್ಯಾನಿಕ್ ಬಟನ್ ಮತ್ತು ರಿಯಲ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 30.74 ಕೋಟಿ ರೂ. ಒಪ್ಪಿಗೆ ದೊರೆತಿದೆ. ಈ ವ್ಯವಸ್ಥೆಯಿಂದ ನಿಯಂತ್ರಣ ಕೊಠಡಿಯಲ್ಲಿ ಕುಳಿತು, ನಾವು ಬಸ್ ಇರುವ ಸ್ಥಳ, ಬಸ್ ಹೋಗುವ ವೇಗವನ್ನು ತಿಳಿಯಬಹುದು ಎಂದು ಕೆಸ್​ಆರ್​ಟಿಸಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC: ಕೆಎಸ್​ಆರ್​ಟಿಸಿ ಹಳೆಯ ಬಸ್​​​ಗಳಿಗೆ ಮರುಜೀವ; ಹೊಚ್ಚಹೊಸದಾಗಿ ರಸ್ತೆಗಿಳಿಯಲಿವೆ 500 ಬಸ್​ಗಳು!

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ ಕೆಎಸ್‌ಆರ್‌ಟಿಸಿಯ ಪ್ರೀಮಿಯಂ ಮತ್ತು ಪ್ರೀಮಿಯಂ ಅಲ್ಲದ ಎಲ್ಲ 8,000 ಬಸ್‌ಗಳು ಪ್ಯಾನಿಕ್ ಬಟನ್‌ ಮತ್ತು ಜಿಪಿಎಸ್ ಸೌಲಭ್ಯವನ್ನು ಅಳವಡಿಸಲಾಗುವುದು. ಈ ಯೋಜನೆಗೆ ಮೂರನೇ ಎರಡರಷ್ಟು ವೆಚ್ಚ (ಮುಕ್ಕಾಲು ಭಾಗ) ಕೇಂದ್ರ ಸರ್ಕಾರ ಮತ್ತು ಮೂರನೇ ಒಂದು (ಕಾಲುಭಾಗ) ವೆಚ್ಚವನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ. ಬೆಂಗಳೂರಿನಲ್ಲಿ ಕೇಂದ್ರೀಕೃತ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!