AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಸುರಕ್ಷತೆಗಾಗಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಪ್ಯಾನಿಕ್ ಬಟನ್​​, ಜಿಪಿಎಸ್​ ಅಳವಡಿಕೆ

ಕರ್ನಾಟಕ ಸಾರಿಗೆ ಸಂಸ್ಥೆ ಪ್ರಯಾಣಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಠಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಕೈಗೊಳ್ಳುತ್ತಿದೆ. ಇದೀಗ ಮಹಿಳಾ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಪ್ಯಾನಿಕ್ ಬಟನ್​​, ಜಿಪಿಎಸ್​ ಅಳವಡಿಕೆ
ಕೆಎಸ್​ಆರ್​​ಟಿಸಿ
ವಿವೇಕ ಬಿರಾದಾರ
|

Updated on: Aug 14, 2023 | 11:45 AM

Share

ಬೆಂಗಳೂರು (ಆ.14): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (RTC) ಪ್ರಯಾಣಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಠಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಕೈಗೊಳ್ಳುತ್ತಿದೆ. ಇದೀಗ ಮಹಿಳಾ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ಗಳಲ್ಲಿ ಪ್ಯಾನಿಕ್ ಬಟನ್ (Panic Button) ಮತ್ತು ಜಿಪಿಎಸ್ (GPS) ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಪ್ರಯಾಣಿಕರು ಒಮ್ಮೆ ಪ್ಯಾನಿಕ್ ಬಟನ್ ಒತ್ತಿದರೇ, ಕೆಎಸ್‌ಆರ್‌ಟಿಸಿಯ ಕೇಂದ್ರೀಕೃತ ನಿಯಂತ್ರಣ ಕೊಠಡಿಗೆ ಸಂದೇಶ ರವಾನೆಯಾಗುತ್ತದೆ. ಆಗ ಕೇಂದ್ರೀಕೃತ ನಿಯಂತ್ರಣ ಕೊಠಡಿ ಸಿಬ್ಬಂದಿ ಜಿಪಿಎಸ್ ಮೂಲಕ ಬಸ್​​ ಸ್ಥಳವನ್ನು ಟ್ರ್ಯಾಕ್ ಮಾಡುತ್ತಾರೆ. ನಂತರ ಹತ್ತಿರದ ಪೊಲೀಸ್​​ ಠಾಣೆಗೆ ಮಾಹಿತಿ ನೀಡುತ್ತಾರೆ.

ಕೇಂದ್ರೀಕೃತ ನಿಯಂತ್ರಿತ ಕೊಠಡಿ, ಪ್ಯಾನಿಕ್ ಬಟನ್ ಮತ್ತು ರಿಯಲ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 30.74 ಕೋಟಿ ರೂ. ಒಪ್ಪಿಗೆ ದೊರೆತಿದೆ. ಈ ವ್ಯವಸ್ಥೆಯಿಂದ ನಿಯಂತ್ರಣ ಕೊಠಡಿಯಲ್ಲಿ ಕುಳಿತು, ನಾವು ಬಸ್ ಇರುವ ಸ್ಥಳ, ಬಸ್ ಹೋಗುವ ವೇಗವನ್ನು ತಿಳಿಯಬಹುದು ಎಂದು ಕೆಸ್​ಆರ್​ಟಿಸಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC: ಕೆಎಸ್​ಆರ್​ಟಿಸಿ ಹಳೆಯ ಬಸ್​​​ಗಳಿಗೆ ಮರುಜೀವ; ಹೊಚ್ಚಹೊಸದಾಗಿ ರಸ್ತೆಗಿಳಿಯಲಿವೆ 500 ಬಸ್​ಗಳು!

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ ಕೆಎಸ್‌ಆರ್‌ಟಿಸಿಯ ಪ್ರೀಮಿಯಂ ಮತ್ತು ಪ್ರೀಮಿಯಂ ಅಲ್ಲದ ಎಲ್ಲ 8,000 ಬಸ್‌ಗಳು ಪ್ಯಾನಿಕ್ ಬಟನ್‌ ಮತ್ತು ಜಿಪಿಎಸ್ ಸೌಲಭ್ಯವನ್ನು ಅಳವಡಿಸಲಾಗುವುದು. ಈ ಯೋಜನೆಗೆ ಮೂರನೇ ಎರಡರಷ್ಟು ವೆಚ್ಚ (ಮುಕ್ಕಾಲು ಭಾಗ) ಕೇಂದ್ರ ಸರ್ಕಾರ ಮತ್ತು ಮೂರನೇ ಒಂದು (ಕಾಲುಭಾಗ) ವೆಚ್ಚವನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ. ಬೆಂಗಳೂರಿನಲ್ಲಿ ಕೇಂದ್ರೀಕೃತ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?