ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ. ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ […]

ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​

Updated on: May 02, 2020 | 10:44 AM

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ.

ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ ಮಾಡುತ್ತಿದೆ.

ಬೆಂಗಳೂರಿನಿಂದ ಬಾಗಲಕೋಟೆಗೆ ತೆರಳಲು 700ರೂಪಾಯಿ ಬದಲು 1,311 ರೂಪಾಯಿ ವಸೂಲಿ ಮಾಡುತ್ತಿದೆ. ಅದೇ ರೀತಿ ಬಳ್ಳಾರಿಗೆ ತೆರಳಲು 450ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800ರೂ. ಬದಲು 1,478 ರೂಪಾಯಿ ಪಡೆಯುತ್ತಿದೆ.

Published On - 10:39 am, Sat, 2 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us