AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti scheme: ಕೆಎಸ್​ಆರ್​ಟಿಸಿಗೆ ಬಂತು ‘ಶಕ್ತಿ’, ದಾಖಲೆಯ 3,930 ಕೋಟಿ ರೂ. ಆದಾಯ

Free Bus Travel for Women; 2023-24ನೇ ಸಾಲಿನಲ್ಲಿ ಕೆಎಸ್​ಆರ್​ಟಿಸಿ ದಾಖಲೆಯ ಆದಾಯ ಸಂಗ್ರಹ ಮಾಡಿದೆ. ಇದಕ್ಕೆ ಶಕ್ತಿ ಯೋಜನೆ ನೇರ ಸಹಾಯ ಮಾಡಿದ್ದಕ್ಕಿಂತಲೂ ಪರೋಕ್ಷವಾಗಿ ನೆರವಾಗಿದ್ದೇ ಹೆಚ್ಚು ಎಂದಿದ್ದಾರೆ ಅಧಿಕಾರಿಗಳು. ಹಾಗಾದರೆ, ಅದ್ಹೇಗೆ ಕೆಎಸ್​ಆರ್​ಟಿಸಿ ಆದಾಯ ಹೆಚ್ಚಳಕ್ಕೆ ಶಕ್ತಿ ಯೋಜನೆ ಪರೋಕ್ಷವಾಗಿ ನೆರವಾಯಿತು? ವಿವರಗಳಿಗೆ ಮುಂದೆ ಓದಿ.

Shakti scheme: ಕೆಎಸ್​ಆರ್​ಟಿಸಿಗೆ ಬಂತು ‘ಶಕ್ತಿ’, ದಾಖಲೆಯ 3,930 ಕೋಟಿ ರೂ. ಆದಾಯ
ಕೆಎಸ್​ಆರ್​ಟಿಸಿಗೆ ಬಂತು ‘ಶಕ್ತಿ’: ದಾಖಲೆಯ 3,930 ಕೋಟಿ ರೂ. ಆದಾಯ
Ganapathi Sharma
|

Updated on: Jun 10, 2024 | 2:41 PM

Share

ಬೆಂಗಳೂರು, ಜೂನ್ 10: ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress Government) ಜಾರಿಗೊಳಿಸಿರುವ, ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ (Free Bus Travel for Women) ಕಲ್ಪಿಸುವ ‘ಶಕ್ತಿ’ (Shakti Scheme) ಯೋಜನೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆದಾಯ ದಾಖಲೆ ಪ್ರಮಾಣದಲ್ಲಿ ಹೆಚ್ಚಳಕ್ಕೆ ನೇರ ಹಾಗೂ ಪರೋಕ್ಷವಾಗಿ ನೆರವಾಗಿರುವುದು ತಿಳಿದುಬಂದಿದೆ. ಯೋಜನೆಯ ಪರಿಣಾಮವಾಗಿ 2023-24ನೇ ಸಾಲಿನಲ್ಲಿ 3,930 ಕೋಟಿ ರೂ. ಆದಾಯವನ್ನು ಕೆಎಸ್‌ಆರ್‌ಟಿಸಿ ಗಳಿಸಿದೆ.

ಕೆಎಸ್‌ಆರ್‌ಟಿಸಿಯ ಒಟ್ಟು ಸಂಚಾರ ಆದಾಯ 2016 ರಲ್ಲಿ 2,738 ಕೋಟಿ ರೂ., 2017 ರಲ್ಲಿ 2,975 ಕೋಟಿ ರೂ., 2018 ರಲ್ಲಿ 3,131 ಕೋಟಿ ರೂ., 2019 ರಲ್ಲಿ 3,182 ಕೋಟಿ ರೂ., 2020ರಲ್ಲಿ 1,569 ಕೋಟಿ ರೂ (ಕೋವಿಡ್​​ನಿಂದಾಗಿ ಕಡಿಮೆ ಆದಾಯ), 2021 ರಲ್ಲಿ 2,037 ಕೋಟಿ ರೂ ಮತ್ತು 2022 ರಲ್ಲಿ ರೂ 3,349 ಕೋಟಿ ಆಗಿತ್ತು. ಶಕ್ತಿ ಯೋಜನೆಯ ಅನುಷ್ಠಾನದ ನಂತರ, 2023-24ನೇ ಸಾಲಿನ ಆದಾಯ ರೂ 3,930 ಕೋಟಿ ಆಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಮಾಹಿತಿ ನೀಡಿದ್ದಾರೆ.“

ಶಕ್ತಿ ಯೋಜನೆ ಪರೋಕ್ಷ ಕಾರಣವಾಗಿದ್ದು ಹೇಗೆ?

2023ರ ಜೂನ್‌ನಿಂದ 2024ರ ಮೇ ವರೆಗೆ ಒಟ್ಟು 4,809 ಕೋಟಿ ರೂ.ಗಳ ಸಂಚಾರ ಆದಾಯ ಸಂಗ್ರಹವಾಗಿದೆ. ಶಕ್ತಿ ಯೋಜನೆಯೇತರ ಪ್ರಯಾಣಿಕರ ಹೆಚ್ಚಳವೇ ಇದಕ್ಕೆ ಕಾರಣ ಎಂದು ಅವರು ತಿಳಿಸಿದರು.

ಶಕ್ತಿ ಆದಾಯ ಶೇ 42.5 (2,044 ಕೋಟಿ ರೂ.) ಇದ್ದರೆ, ಶಕ್ತಿಯೇತರ ಆದಾಯ ಶೇ 57.5 (ರೂ. 2,764 ಕೋಟಿ) ಇತ್ತು. ಆದರೆ, ಮಹಿಳಾ ಪ್ರಯಾಣಿಕರು ನಮ್ಮ ಸೇವೆಯನ್ನು ಬಳಸಿದಾಗ, ಅವರು ಎಲ್ಲಾ ಸಮಯದಲ್ಲೂ ಒಬ್ಬಂಟಿಯಾಗಿ ಪ್ರಯಾಣಿಸಿರುವುದಿಲ್ಲ. ಪತಿ ಅಥವಾ ಮಕ್ಕಳೊಂದಿಗೆ ಪ್ರಯಾಣಿಸಿದ್ದಾರೆ. ಇದರಿಂದ ಶಕ್ತಿಯೇತರ ಆದಾಯ ಹೆಚ್ಚಳವಾಯಿತು ಎಂದು ಅವರು ಮಾಹಿತಿ ನೀಡಿರುವುದಾಗಿ ‘ದಿ ನ್ಯೂ ಇಂಡಿಯನ್​ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಈ ಹಿಂದೆ, ನಮ್ಮ ದೈನಂದಿನ ಆದಾಯವು ಸುಮಾರು 9.7 ಕೋಟಿ ರೂಪಾಯಿಗಳಷ್ಟಿತ್ತು. ಅದು ಈಗ 13.9 ಕೋಟಿ ರೂಪಾಯಿಗಳಿಗೆ ಜಿಗಿದಿದೆ. ಇದಲ್ಲದೆ, ಮಂಗಳವಾರ, ಬುಧವಾರ, ಗುರುವಾರ ಮತ್ತು ಶನಿವಾರದಂತಹ ವಾರದ ಮಧ್ಯದ ದಿನಗಳಲ್ಲಿ ಆದಾಯ ಕಡಿಮೆ ಇತ್ತು. ಆದರೆ ಶಕ್ತಿ ಯೋಜನೆಯ ಅನುಷ್ಠಾನದ ನಂತರ, ಆ ದಿನಗಳಲ್ಲಿಯೂ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಈ ಎಲ್ಲ ಅಂಶಗಳೂ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Shakti Yojana: ಶಕ್ತಿ ಯೋಜನೆಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ, ಜಿಎಸ್​ಟಿ ಸಂಗ್ರಹ ಹೆಚ್ಚಳ

ಡೀಸೆಲ್ ಬೆಲೆ ಲೀಟರ್‌ಗೆ 90 ರೂ.ಗೆ ಏರಿಕೆಯಾಗಿದ್ದರೂ ಯಾವುದೇ ದರ ಏರಿಕೆ ಮಾಡದೆ ಕೆಎಸ್‌ಆರ್‌ಟಿಸಿ ಈ ದಾಖಲೆ ನಿರ್ಮಿಸಿದೆ ಎಂದು ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!