AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಪ್ರವಾಸದ ಕನಸು ನನಸು ಮಾಡಲು ಮುಂದೆ ಬಂದ ಕೆಎಸ್ಆರ್​ಟಿಸಿ, ಟೂರ್ ಪ್ಯಾಕೇಜ್ ಮಾಹಿತಿ ಇಲ್ಲಿದೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಇದರಿಂದ ಮಳೆಗಾಲದಲ್ಲಿ ಕಳೆಗಟ್ಟುವ ಪ್ರೇಕ್ಷಣೀಯ ಸ್ಥಳಗಳು ಪ್ರವಾಸಿಗರನ್ನು (Tourists) ಕೈಚಾಚಿ ಕರೆಯುತ್ತಿವೆ. ಪ್ರವಾಸಿಗರ ಪ್ರವಾಸದ ಕನಸು ನನಸು ಮಾಡಲು ಕೆಎಸ್ಆರ್​ಟಿಸಿ ಮುಂದೆ ಬಂದಿದೆ.

ಪ್ರವಾಸಿಗರ ಪ್ರವಾಸದ ಕನಸು ನನಸು ಮಾಡಲು ಮುಂದೆ ಬಂದ ಕೆಎಸ್ಆರ್​ಟಿಸಿ, ಟೂರ್ ಪ್ಯಾಕೇಜ್ ಮಾಹಿತಿ ಇಲ್ಲಿದೆ
ಕೆಎಸ್​ಆರ್​ಟಿಸಿ ಬಸ್
ರಮೇಶ್ ಬಿ. ಜವಳಗೇರಾ
| Updated By: Digi Tech Desk|

Updated on:Aug 09, 2023 | 3:35 PM

Share

ಬೆಂಗಳೂರು, (ಆಗಸ್ಟ್ 09): ಕರ್ನಾಟಕದ (Karnataka) ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ(Rain) ಸುರಿಯುತ್ತಿದ್ದು, ವಿಶ್ವವಿಖ್ಯಾತ ಶಿವಮೊಗ್ಗದ ಜೋಗ ಜಲಪಾತ(Jog Falls) ಮೈದುಂಬಿಕೊಂಡು ಧುಮ್ಮಿಕ್ಕುತ್ತಿದೆ. ಕೇವಲ ಜೋಗ ಮಾತ್ರವಲ್ಲದೇ ಗಗನಚುಕ್ಕಿ, ಭರಚುಕ್ಕಿ ಫಾಲ್ಸ್ ಭೋರ್ಗರೆಯುತ್ತಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿವೆ. ಈ ಜಲಪಾತಗಳ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರಿಗಾಗಿ ಕೆಎಸ್​ಆರ್​ಟಿಸಿ ಆಗಸ್ಟ್ 12ರಿಂದ ಟೂರ್ ಪ್ಯಾಕೇಜ್ ಸೇವೆಯನ್ನು ಆರಂಭಿಸಲಿದೆ. ಬೆಂಗಳೂರಿನಿಂದ ಗಗನಚುಕ್ಕಿ ಭರಚುಕ್ಕಿ ಅವಳಿ ಫಾಲ್ಸ್​ ಜೊತೆಗೆ ಜೋಗ ಜಲಪಾತಕ್ಕೆ ಪ್ರವಾಸ ನಿಯೋಜಿಸಿದೆ. ಆ, 12ರಿಂದ ಪ್ರತಿ ವೀಕೆಂಡ್ ಅಂದ್ರೆ ಶುಕ್ರವಾರ ಮತ್ತು ಶನಿವಾರ ಜೋಗ ಜಲಪಾತ ಪ್ರವಾಸವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: Shakti scheme effect: ಶಕ್ತಿ ಯೋಜನೆಯಿಂದ 2 ತಿಂಗಳಲ್ಲಿ ಮಹಿಳೆಯರಿಂದಲೇ 27 ಕೋಟಿ ಲಾಭ, ನಷ್ಟದ ಹಾದಿಯಲ್ಲಿದ್ದ ಕೆಎಸ್​​ಆರ್​​​ಟಿಸಿಗೆ ಕೋಟಿ ಕೋಟಿ ಆದಾಯ!

ಸಾಗರ, ವರದಮೂಲ ಇಕ್ಕೇರಿ, ಕೆಳದಿ ವೀಕ್ಷಿಸಿ ನಂತ ಜೋಗಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ವಯಸ್ಕರರಿಗೆ 2,500 ರೂ. ಹಾಗೂ ಮಕ್ಕಳಿಗೆ 2,300 ರೂ ಟೂರ್​ ಪ್ಯಾಕೇಜ್​  ಶುಲ್ಕ(ನಾನ್ ಎಸಿ ಸ್ಲೀಪರ್ ಬಸ್) ನಿಗದಿ ಮಾಡಲಾಗಿದೆ.

ಜೋಗ್ ಫಾಲ್ಸ್ ಟೂರ್ ವೇಳಾಪಟ್ಟಿ

ಬೆಂಗಳೂರಿನಿಂದ ರಾತ್ರಿ 9:30ಕ್ಕೆ ಬಸ್ ಹೊರಡಲಿದ್ದು, ಮರುದಿನ ಬೆಳಿಗ್ಗೆ 5 ಗಂಟೆ ವೇಳೆಗೆ ಸಾಗರ ತಲುಪಲಿದೆ. ಬಳಿಕ ಬೆಳಗ್ಗೆ ಪ್ರಯಾಣಿಕರಿಗೆ ಉಪಹಾರಕ್ಕೆ ಸಮಯಾವಕಾಶ ನೀಡಲಾಗುತ್ತದೆ. ನಂತರ ವರದಹಳ್ಳಿ, ವರದಮೂಲ, ಇಕ್ಕೇರಿ ಮತ್ತು ಕೆಳದಿ ಸ್ಥಳಗಳಿಗೆ ಬಸ್ ತೆರಳಲಿದೆ. ನಂತರ ಪ್ರಯಾಣಿಕರನ್ನು ಮಧ್ಯಾಹ್ನ 12:45ಕ್ಕೆ ಬಸ್ ಸಾಗರಕ್ಕೆ ವಾಪಸ್ ಆಗಲಿದ್ದು, ಊಟದ ಬಳಿಕ ಸಾಗರದಿಂದ ಜೋಗ್ ಫಾಲ್ಸ್‌ಗೆ ತೆರಳಲಿದೆ. ಬಳಿಕ ಪ್ರಯಾಣಿಕರಿಗೆ ಸಂಜೆ 7 ರಿಂದ 8 ವರೆಗೆ ಒಂದು ಗಂಟೆ ಶಾಪಿಂಗ್ ಮಾಡಲು ಸಮಯವಕಾಶ ಸಹ ನೀಡಲಾಗುತ್ತದೆ. ಇದೆಲ್ಲ ಮುಗಿದ ಬಳಿಕ ರಾತ್ರಿ 8.30ಕ್ಕೆ ಊಟದ ನಂತರ ಬಸ್ ಸಾಗರದಿಂದ ಬೆಂಗಳೂರಿಗೆ ಹಿಂದಿರುಗಲಿದೆ.

ಬೆಂಗಳುರು ಟು ಸೋಮನಾಥಪುರ

ಹಾಗೇ ಪ್ರತಿ ಶನಿವಾರ ಮತ್ತು ಭಾನುವಾರ ಬೆಂಗಳೂರಿನಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಿಗೆ ಪ್ರವಾಸ ಏರ್ಪಡಿಸಲಾಗಿದೆ. ಬೆಂಗಳೂರಿನಿಂದ ಹೊರಟು ಸೋಮನಾಥಪುರ, ತಲಕಾಡು, ಮಧ್ಯರಂಗ ಬಳಿಕ ಭರಚುಕ್ಕಿ ಮತ್ತು ಗಗನಚುಕ್ಕಿ ತೋರಿಸಲಾಗುತ್ತದೆ. ವಯಸ್ಕರರಿಗೆ 450 ರೂ. ಹಾಗೂ ಮಕ್ಕಳಿಗೆ 300 ರೂ. ಪ್ರಯಾಣ ಶುಲ್ಕ ನಿಗದಿ ಮಾಡಲಾಗಿದೆ.

ಟೂರ್ ಪ್ಯಾಕೇಜ್ ಮಾಹಿತಿಯನ್ನು ಟ್ವೀಟ್​ ಮಾಡಿರುವ ಕೆಎಸ್​ಆರ್​ಟಿಸಿ

ಆಸಕ್ತರು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಇವುಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ 7760990287, 776090988ಗೆ ಕರೆ ಮಾಡಬಹುದಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:30 pm, Wed, 9 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ