AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಕಿಟಕಿಯಿಂದ ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಯಿತೇ?: ವೈರಲ್ ವಿಡಿಯೋದ ಸತ್ಯಾಸತ್ಯತೆ ಇಲ್ಲಿದೆ

ಕಿಟಕಿ ಮೂಲಕ ಕೆಎಸ್​ಆರ್ ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಕೈ ಕಟ್ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೆಎಸ್ಆರ್​ಟಿಸಿ ಸ್ಪಷ್ಟನೆ ನೀಡಿದೆ.

Fact Check: ಕಿಟಕಿಯಿಂದ ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಯಿತೇ?: ವೈರಲ್ ವಿಡಿಯೋದ ಸತ್ಯಾಸತ್ಯತೆ ಇಲ್ಲಿದೆ
ರಮೇಶ್ ಬಿ. ಜವಳಗೇರಾ
|

Updated on: Jun 26, 2023 | 7:24 AM

Share

ಬೆಂಗಳೂರು/ಮಂಡ್ಯ: ರಾಜ್ಯಾದ್ಯಂತ ಮಹಿಳೆಯರಿಗೆ (Women) ಶಕ್ತಿ ಯೋಜನೆ  (Shakti Yojana) ಜಾರಿಯಾಗಿದ್ದು, ಬಸ್​ಗಾಗಿ ಪ್ರಯಾಣಿಕರು ಹಾಗೂ ಕಂಡಕ್ಟರ್ ಗಲಾಟೆ, ಮಾತಿನ ಚಕಮಕಿಯಾಗುತ್ತಿರುವ ವಿಡಿಯೋಗಳು ವೈರಲ್ ಆಗುತ್ತಿವೆ. ಅದರಂತೆ ಕಿಟಕಿ ಮೂಲಕ ಕೆಎಸ್​ಆರ್ ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಕೈ ಕಟ್ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ(Social Media) ಹರಿದಾಡುತ್ತಿದೆ. ಬಸ್ ಗದ್ದಲ ಇದ್ದ ಕಾರಣ ಮಹಿಳೆ ಕಿಟಕಿಯಿಂದ ಹತ್ತುವಾಗ ಕೈ ಮುರಿದಿದೆ ಎಂದು ಆರೋಪಿಸಲಾಗಿದೆ. ಆದ್ರೆ, ಇದನ್ನು ಕೆಎಸ್​ಆರ್​ಟಿಸಿ ಅಲ್ಲಗೆಳೆದಿದ್ದು, ಘಟನೆ ಬಗ್ಗೆ ಸ್ಪಷ್ಟನೆ ನೀಡಿದೆ. ಕಿಟಿಕಿಯಿಂದ ಹತ್ತುವಾಗ ಮಹಿಳೆಯ ಕೈ ಕಟ್ ಆಗಿಲ್ಲ. ಬದಲಿಗೆ ಲಾರಿಯೊಂದು  ಡಿಕ್ಕಿ ಹೊಡೆದಿದ್ದರಿಂದ ಮಹಿಳೆ ಕೈಗೆ ಗಂಭೀರ ಗಾಯವಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ: ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಭೇಟಿ, ಶಕ್ತಿ ಯೋಜನೆ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆಯ ಕೊಡುಗೆಯಿಂದ ಮಹಿಳೆ ಕೈ ಕಳೆದುಕೊಳ್ಳಬೇಕಾಯ್ತು ಎಂದು ನೆಟ್ಟಿಗರು ಕಾಂಗ್ರೆಸ್​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಕೆಎಸ್​ಆರ್​ಟಿಸಿ ಸುತ್ತೋಲೆ ಹೊರಡಿಸುವ ಮೂಲಕ ವಿಡಿಯೋ ಬಗ್ಗೆ ಸತ್ಯಾಸತ್ಯತೆ ತಿಳಿಸಿದೆ. ಮಹಿಳೆ ಬಸ್ಸಿನ ಕಿಟಕಿಯಿಂದ ಹತ್ತುವಾಗ ಕೈ ಮುರಿದಿದೆ ಎಂಬಂತೆ ಅಪಪ್ರಚಾರ ಮಾಡಲಾಗುತ್ತಿದೆ ಎಂದಿದೆ.

ಜೂನ್ 18ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಬಸ್ (KA-10-F-151) ನಂಜನಗೂಡಿನಿಂದ ಟಿ.ನರಸೀಪುರಕ್ಕೆ ತೆರಳುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1:45 ಗಂಟೆಗೆ ಬಸವರಾಜಪುರದ ಬಳಿಯಲ್ಲಿ ಎದುರಿನಿಂದ ಬಂದ ಲಾರಿ(TN-77-Q-8735)ಯೊಂದು ಬಸ್ಸಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಿಟಕಿ ಬಳಿಯ ಸೀಟಿನಲ್ಲಿ ಕುಳಿತಿದ್ದ ಮಹಿಳೆಯ ಬಲಕೈಗೆ ಗಂಭೀರವಾದ ಗಾಯವಾಗಿದೆ ಎಂದು ಕೆಎಸ್​ಆರ್​ಟಿಸಿ ಸುತ್ತೋಲೆ ಮೂಲಕ ಸ್ಪಷ್ಟಪಡಿಸಿದೆ.

ಇನ್ನು ಗಾಯಗೊಂಡ ಮಹಿಳೆಯನ್ನು ತಕ್ಷಣವೇ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಉತ್ತಮ ಚಿಕಿತ್ಸೆ ನೀಡಲಾಗಿದೆ. ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಅಲ್ಲದೇ ಗಾಯಗೊಂಡಿರುವ ಮಹಿಳಾ ಪ್ರಯಾಣಿಕ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸಂಸ್ಥೆಯೇ ಭರಿಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್