AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಕಿಟಕಿಯಿಂದ ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಯಿತೇ?: ವೈರಲ್ ವಿಡಿಯೋದ ಸತ್ಯಾಸತ್ಯತೆ ಇಲ್ಲಿದೆ

ಕಿಟಕಿ ಮೂಲಕ ಕೆಎಸ್​ಆರ್ ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಕೈ ಕಟ್ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೆಎಸ್ಆರ್​ಟಿಸಿ ಸ್ಪಷ್ಟನೆ ನೀಡಿದೆ.

Fact Check: ಕಿಟಕಿಯಿಂದ ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಯಿತೇ?: ವೈರಲ್ ವಿಡಿಯೋದ ಸತ್ಯಾಸತ್ಯತೆ ಇಲ್ಲಿದೆ
Follow us
ರಮೇಶ್ ಬಿ. ಜವಳಗೇರಾ
|

Updated on: Jun 26, 2023 | 7:24 AM

ಬೆಂಗಳೂರು/ಮಂಡ್ಯ: ರಾಜ್ಯಾದ್ಯಂತ ಮಹಿಳೆಯರಿಗೆ (Women) ಶಕ್ತಿ ಯೋಜನೆ  (Shakti Yojana) ಜಾರಿಯಾಗಿದ್ದು, ಬಸ್​ಗಾಗಿ ಪ್ರಯಾಣಿಕರು ಹಾಗೂ ಕಂಡಕ್ಟರ್ ಗಲಾಟೆ, ಮಾತಿನ ಚಕಮಕಿಯಾಗುತ್ತಿರುವ ವಿಡಿಯೋಗಳು ವೈರಲ್ ಆಗುತ್ತಿವೆ. ಅದರಂತೆ ಕಿಟಕಿ ಮೂಲಕ ಕೆಎಸ್​ಆರ್ ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಕೈ ಕಟ್ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ(Social Media) ಹರಿದಾಡುತ್ತಿದೆ. ಬಸ್ ಗದ್ದಲ ಇದ್ದ ಕಾರಣ ಮಹಿಳೆ ಕಿಟಕಿಯಿಂದ ಹತ್ತುವಾಗ ಕೈ ಮುರಿದಿದೆ ಎಂದು ಆರೋಪಿಸಲಾಗಿದೆ. ಆದ್ರೆ, ಇದನ್ನು ಕೆಎಸ್​ಆರ್​ಟಿಸಿ ಅಲ್ಲಗೆಳೆದಿದ್ದು, ಘಟನೆ ಬಗ್ಗೆ ಸ್ಪಷ್ಟನೆ ನೀಡಿದೆ. ಕಿಟಿಕಿಯಿಂದ ಹತ್ತುವಾಗ ಮಹಿಳೆಯ ಕೈ ಕಟ್ ಆಗಿಲ್ಲ. ಬದಲಿಗೆ ಲಾರಿಯೊಂದು  ಡಿಕ್ಕಿ ಹೊಡೆದಿದ್ದರಿಂದ ಮಹಿಳೆ ಕೈಗೆ ಗಂಭೀರ ಗಾಯವಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ: ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಭೇಟಿ, ಶಕ್ತಿ ಯೋಜನೆ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆಯ ಕೊಡುಗೆಯಿಂದ ಮಹಿಳೆ ಕೈ ಕಳೆದುಕೊಳ್ಳಬೇಕಾಯ್ತು ಎಂದು ನೆಟ್ಟಿಗರು ಕಾಂಗ್ರೆಸ್​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಕೆಎಸ್​ಆರ್​ಟಿಸಿ ಸುತ್ತೋಲೆ ಹೊರಡಿಸುವ ಮೂಲಕ ವಿಡಿಯೋ ಬಗ್ಗೆ ಸತ್ಯಾಸತ್ಯತೆ ತಿಳಿಸಿದೆ. ಮಹಿಳೆ ಬಸ್ಸಿನ ಕಿಟಕಿಯಿಂದ ಹತ್ತುವಾಗ ಕೈ ಮುರಿದಿದೆ ಎಂಬಂತೆ ಅಪಪ್ರಚಾರ ಮಾಡಲಾಗುತ್ತಿದೆ ಎಂದಿದೆ.

ಜೂನ್ 18ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಬಸ್ (KA-10-F-151) ನಂಜನಗೂಡಿನಿಂದ ಟಿ.ನರಸೀಪುರಕ್ಕೆ ತೆರಳುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1:45 ಗಂಟೆಗೆ ಬಸವರಾಜಪುರದ ಬಳಿಯಲ್ಲಿ ಎದುರಿನಿಂದ ಬಂದ ಲಾರಿ(TN-77-Q-8735)ಯೊಂದು ಬಸ್ಸಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಿಟಕಿ ಬಳಿಯ ಸೀಟಿನಲ್ಲಿ ಕುಳಿತಿದ್ದ ಮಹಿಳೆಯ ಬಲಕೈಗೆ ಗಂಭೀರವಾದ ಗಾಯವಾಗಿದೆ ಎಂದು ಕೆಎಸ್​ಆರ್​ಟಿಸಿ ಸುತ್ತೋಲೆ ಮೂಲಕ ಸ್ಪಷ್ಟಪಡಿಸಿದೆ.

ಇನ್ನು ಗಾಯಗೊಂಡ ಮಹಿಳೆಯನ್ನು ತಕ್ಷಣವೇ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಉತ್ತಮ ಚಿಕಿತ್ಸೆ ನೀಡಲಾಗಿದೆ. ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಅಲ್ಲದೇ ಗಾಯಗೊಂಡಿರುವ ಮಹಿಳಾ ಪ್ರಯಾಣಿಕ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸಂಸ್ಥೆಯೇ ಭರಿಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ