Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Logo: ಕರ್ನಾಟಕದ ಕೈ ತಪ್ಪಿದ ಕೆಎಸ್​​ಆರ್​ಟಿಸಿ ಲೋಗೊ, ಕೇರಳ ಪಾಲು; ಕೇರಳ ರಸ್ತೆ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆ

ನಮಗೆ ಯಾವುದೇ ರೀತಿಯ ಅಧಿಕೃತ ಆದೇಶ ಬಂದಿಲ್ಲ. ಅಧಿಕೃತ ಆದೇಶ ಕೈಸೇರಿದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಕಾನೂನು ಹೋರಾಟದ ಬಗ್ಗೆ ಮುಂದೆ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.

KSRTC Logo: ಕರ್ನಾಟಕದ ಕೈ ತಪ್ಪಿದ ಕೆಎಸ್​​ಆರ್​ಟಿಸಿ ಲೋಗೊ, ಕೇರಳ ಪಾಲು; ಕೇರಳ ರಸ್ತೆ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆ
ಕೆಎಸ್​ಆರ್​ಟಿಸಿ ಬಸ್​
Follow us
TV9 Web
| Updated By: ganapathi bhat

Updated on:Jun 02, 2021 | 11:01 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) ಲೋಗೊ ಕರ್ನಾಟಕದ ಕೈ ತಪ್ಪಿ, ಕೇರಳ ಪಾಲಾಗಿದೆ. ಕೆಎಸ್​​ಆರ್​ಟಿಸಿ- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಂಬ ಹೆಸರಿನಲ್ಲಿ ಕರ್ನಾಟಕದ ಸಾರಿಗೆ ಬಸ್​ಗಳು ಸಂಚರಿಸುತ್ತಿದ್ದವು. ಜೊತೆಗೆ, ಕೇರಳ ರಾಜ್ಯದಲ್ಲೂ ಕೆಎಸ್​ಆರ್​ಟಿಸಿ ಎಂಬ ಅದೇ ಹೆಸರಿನಲ್ಲಿ ಬಸ್​ಗಳ ಸಂಚಾರ ನಡೆಯುತ್ತಿತ್ತು. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಹೆಸರಿನಲ್ಲಿ ಅಲ್ಲಿನ ಬಸ್​ಗಳು ಸಂಚಾರ ಮಾಡುತ್ತಿದ್ದವು.

ಎರಡೂ ರಾಜ್ಯದ ಸಾರಿಗೆ ಬಸ್​ಗಳು ‘ಕೆಎಸ್ಆರ್​ಟಿಸಿ’ ಎಂಬ ಒಂದೇ ಟ್ರೇಡ್​​​ ಮಾರ್ಕ್ ಬಳಸುತ್ತಿದ್ದವು. 2014ರಲ್ಲಿ ಈ ಟ್ರೇಡ್ ಮಾರ್ಕ್ ಬಳಸದಂತೆ ಕೇರಳಕ್ಕೆ ಕರ್ನಾಟಕ ಸೂಚನೆ ನೀಡಿತ್ತು. ಈ ಬಗ್ಗೆ ಕೇರಳಕ್ಕೆ ನೋಟಿಸ್ ಕೂಡ ಜಾರಿ ಮಾಡಿತ್ತು. ಅಷ್ಟೇ ಅಲ್ಲದೆ, ಕೇರಳ ಸರ್ಕಾರ ಟ್ರೇಡ್​ ಮಾರ್ಕ್​ಗಳ ರಿಜಿಸ್ಟ್ರಾರ್​​ಗೆ ಅರ್ಜಿ ಸಲ್ಲಿಕೆ ಮಾಡಿತ್ತು.

ಕೇರಳ ಸರ್ಕಾರ ಆ ಸಂದರ್ಭ ಟ್ರೇಡ್ ಮಾರ್ಕ್​ಗಳ ರಿಜಿಸ್ಟ್ರಾರ್​​ಗೆ ಅರ್ಜಿ ಸಲ್ಲಿಸಿತ್ತು. ಸುದೀರ್ಘ 8 ವರ್ಷಗಳಿಂದ ನಡೆದಿದ್ದ ಕಾನೂನು ಹೋರಾಟ ನಡೆದಿತ್ತು. ಕೊನೆಗೆ ಅಂತಿಮವಾಗಿ ಕೇರಳಕ್ಕೆ KSRTC ಟ್ರೇಡ್​ಮಾರ್ಕ್ ಲಭಿಸಿದೆ. ಕೆಎಸ್​​ಆರ್​ಟಿಸಿ ಟ್ರೇಡ್ ​​ಮಾರ್ಕ್ ಕೇರಳ ರಾಜ್ಯಕ್ಕೆ ಒಲಿದ ಬಗ್ಗೆ ಕೇರಳ ರಸ್ತೆ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಕೆಎಸ್​ಆರ್​ಟಿಸಿ ಟ್ರೇಡ್​ಮಾರ್ಕ್​​ ಕೇರಳ ಪಾಲಾದ ವಿಚಾರವಾಗಿ ಟಿವಿ9ಗೆ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಆದರೆ, ನಮಗೆ ಯಾವುದೇ ರೀತಿಯ ಅಧಿಕೃತ ಆದೇಶ ಬಂದಿಲ್ಲ. ಅಧಿಕೃತ ಆದೇಶ ಕೈಸೇರಿದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಕಾನೂನು ಹೋರಾಟದ ಬಗ್ಗೆ ಮುಂದೆ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.

ಟ್ರೇಡ್​ ಮಾರ್ಕ್​​ಗಳ ರಿಜಿಸ್ಟ್ರಾರ್​ ಚೆನ್ನೈನಲ್ಲಿದೆ. ಈ ಟ್ರೇಡ್​​ಮಾರ್ಕ್​​​ ವಿವಾದ 6-7 ವರ್ಷದಿಂದ ನಡೀತಿದೆ. ನಾವು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಟಿವಿ9ಗೆ KSRTC ಎಂಡಿ ಶಿವಯೋಗಿ ಕಳಸದ್ ಮಾಹಿತಿ ನೀಡಿದ್ಧಾರೆ.

ಇದನ್ನೂ ಓದಿ: ಲಾಕ್​ಡೌನ್ ಮುಗಿದ ನಂತರ ಆರಂಭವಾಗುವ ಸಾರಿಗೆ ಸೇವೆಯಲ್ಲಿ ಲಸಿಕೆ ಪಡೆದ ಸಿಬ್ಬಂದಿಗಳಿಗೆ ಆದ್ಯತೆ: ಡಿಸಿಎಂ ಲಕ್ಷ್ಮಣ ಸವದಿ

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಉಚಿತವಾಗಿ ಕೊರೊನಾ ಲಸಿಕೆ ಪೂರೈಸಲಿ; ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Published On - 10:59 pm, Wed, 2 June 21

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ