AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಹೊಸ ಲಗೇಜ್ ನಿಯಮ: ಹಣ ಕೊಟ್ರೆ ಪ್ರಾಣಿ-ಪಕ್ಷಿ, ಫ್ರಿಡ್ಜ್, ವಾಷಿಂಗ್ ಮಷಿನ್ ಒಯ್ಯಬಹುದು!

ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಶಕ್ತಿ ಯೋಜನೆ ಆರಂಭವಾದ ಮೇಲೆ ಜನರು ಸಂಚಾರ ಮಾಡುವುದೇ ಕಷ್ಟವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಂಥದ್ದರಲ್ಲಿ ಇದೀಗ ಕೆಎಸ್​ಆರ್​ಟಿಸಿ ಹೊಸ ಲಗೇಜ್ ನಿಯಮ ಬಿಡುಗಡೆ ಮಾಡಿದ್ದು ಟಯರ್, ಟ್ಯೂಬ್, ಖಾಲಿ ಕಂಟೈನರ್, ಸಾಕು ಪ್ರಾಣಿ-ಪಕ್ಷಿ, ಫ್ರಿಡ್ಜ್, ವಾಷಿಂಗ್ ಮಷಿನ್ ಸಾಗಿಸಲು ಅನುಮತಿ ನೀಡಿದೆ. ಇದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

ಕೆಎಸ್​ಆರ್​ಟಿಸಿ ಹೊಸ ಲಗೇಜ್ ನಿಯಮ: ಹಣ ಕೊಟ್ರೆ ಪ್ರಾಣಿ-ಪಕ್ಷಿ, ಫ್ರಿಡ್ಜ್, ವಾಷಿಂಗ್ ಮಷಿನ್ ಒಯ್ಯಬಹುದು!
ಕೆಎಸ್​ಆರ್​ಟಿಸಿಯಿಂದ ಹೊಸ ಲಗೇಜ್ ನಿಯಮ
ಕಿರಣ್​ ಸೂರ್ಯ
| Edited By: |

Updated on:Jul 28, 2025 | 12:02 PM

Share

ಬೆಂಗಳೂರು, ಜುಲೈ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ (KSRTC New Luggage Rules) ಬಿಡುಗಡೆ ಮಾಡಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಯಮದ ಪ್ರಕಾರ, ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಮೂವತ್ತು ಕೆಜಿಯವರೆಗೂ ಪ್ರಯಾಣಿಕರು ಉಚಿತವಾಗಿ ಲಗೇಜು ಉಚಿತವಾಗಿ ತೆಗೆದುಕೊಂಡು ಹೋಗಬಹುದಾಗಿದೆ. 30 ಕೆಜಿ ಮೇಲೆ ಲಗೇಜ್ ಇದ್ದರೆ ಹಣ ಪಾವತಿ ಮಾಡಬೇಕಿದೆ. 40 ಕೆಜಿ ತೂಕವಿರುವ ವಾಷಿಂಗ್ ಮಿಷಿನ್, ಫ್ರಿಡ್ಜ್, 25 ಕೆಜಿ ತೂಕದ ಖಾಲಿ ಕಂಟೈನರ್ ಬಸ್​​ನಲ್ಲಿ ಸಾಗಿಸಲೂ ಅವಕಾಶ ನೀಡಲಾಗಿದೆ.

ಕೆಎಸ್​ಆರ್​ಟಿಸಿ ಹೊಸ ನಿಯಮದ ಪ್ರಕಾರ, ಕಬ್ಬಿಣ ಪೈಪ್ ಮೋಟಾರ್​ಗಳನ್ನೂ ಸಾಗಿಸಬಹುದು ಎನ್ನಲಾಗಿದೆ. ಮೊಲ, ನಾಯಿ ಮರಿ, ಬೆಕ್ಕು, ಪಕ್ಷಿಯನ್ನೂ ಸಾಗಿಸಬಹದು. ನಾಯಿಯನ್ನು ಸಾಗಿಸಬಹುದು. ನಾಯಿಯನ್ನು ಚೈನ್​ನಲ್ಲಿ ಬಿಗಿದು ಕಾಳಜಿಯೊಂದಿಗೆ ಬಸ್​​ನಲ್ಲಿ ಸಾಗಿಸಬಹುದು.

ಈ ನಿಯಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್​​ನಲ್ಲಿ ಸಣ್ಣಪುಟ್ಟ ಮಕ್ಕಳು ಪ್ರಯಾಣ ಮಾಡುತ್ತಾರ. ಈ ವೇಳೆ, ಏನಾದರೂ ತಿನ್ನುವ ವೇಳೆ ಮಕ್ಕಳಿಗೆ ನಾಯಿ ಬಾಯಿ ಹಾಕಿದರೆ ಏನ್ ಕಥೆ? ಈ ನಿಯಮ ಸರಿಯಲ್ಲ ಎಂದು ಕೆಲವು ಮಂದಿ ಪ್ರಯಾಣಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಪಂಚಪೀಠಾಧ್ಯಕ್ಷರ ನಿರ್ಣಯಕ್ಕೆ ಲಿಂಗಾಯತ ಮಠಾಧಿಪತಿಗಳ ಸೆಡ್ಡು
Image
ರೈತರಿಗೆ ಗೊಬ್ಬರ ಕೊರತೆಯ ಬರೆ: ಇಂದು ಕರ್ನಾಟಕದಾದ್ಯಂತ ಬಿಜೆಪಿ ಹೋರಾಟ
Image
ಆಗಸ್ಟ್​ 5ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ
Image
3 ಸಾವಿರ ಕೋಟಿ ಪಿಎಫ್ ಬಾಕಿ ಉಳಿಸಿಕೊಂಡ ಸಾರಿಗೆ ನಿಗಮಗಳು: ನೌಕರರಿಗೆ ಸಂಕಷ್ಟ

ವಯಸ್ಕರು 30 ಕೆಜಿ, ಮಕ್ಕಳು 15 ಕೆಜಿ ತೂಕದ ಲಗ್ಗೇಜ್ ಬಸ್ಸಿನಲ್ಲಿ ಕೊಂಡೊಯ್ಯಬಹುದು. ನಾಲ್ಕೈದು ಜನರು ಒಟ್ಟಾಗಿ ಪ್ರಯಾಣಿಸಿದರೂ 30 ಕೆಜಿ ಲಗೇಜ್ ಮಾತ್ರ ಉಚಿತ ಎನ್ನಲಾಗಿದೆ.

ಕೆಎಸ್​ಆರ್​ಟಿಸಿ ಹೊಸ ಲಗೇಜ್ ನಿಯಮದಲ್ಲೇನಿದೆ?

  • 30 ಕೆಜಿ ವರೆಗೆ ಲಗೇಜ್ ಕೊಂಡೊಯ್ಯಲು ಉಚಿತ ಅವಕಾಶ. ಅದಕ್ಕಿಂತ ಹೆಚ್ಚಿನ ಲಗೇಜ್​ಗೆ ದರ ನಿಗದಿ.
  • ವಾಷಿಂಗ್ ಮಷಿನ್, ಫ್ರಿಡ್ಜ್ ಕೊಂಡೊಯ್ಯಲೂ ಅವಕಾಶ.
  • ಟ್ರಕ್​​ನ ಟಯರ್​​​ಗಳನ್ನೂ ತೆಗೆದುಕೊಂಡು ಹೋಗಬಹುದು.
  • ಅಲ್ಯೂಮಿನಿಯಂ ಪೈಪ್, ಪಾತ್ರೆ ಕೊಂಡೊಯ್ಯಲೂ ಅವಕಾಶ.
  • ಕಬ್ಬಿಣದ ಪೈಪ್​​ಗಳನ್ನು ಸಾಗಿಸಲೂ ಅವಕಾಶ.
  • ಬೆಕ್ಕು, ನಾಯಿ, ಮೊಲವನ್ನೂ ಸಾಗಿಸಬಹುದು.

ಇದನ್ನೂ ಓದಿ: 3 ಸಾವಿರ ಕೋಟಿ ರೂ. ಪಿಎಫ್ ಬಾಕಿ ಉಳಿಸಿಕೊಂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ: ಪಿಎಫ್ ಸಿಗದೆ ಸಂಕಷ್ಟದಲ್ಲಿ ಸಾರಿಗೆ ನೌಕರರು

ಕೂಡಲೇ ಹೊಸ ಲಗೇಜ್ ನಿಯಮವನ್ನು ವಾಪಸ್ ಪಡೆಯಬೇಕು. ಹೊಸ ನಿಯಮದಿಂದ ಸಮಸ್ಯೆ ಆಗಲಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 28 July 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?