
ಬೆಂಗಳೂರು, ಜುಲೈ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ (KSRTC New Luggage Rules) ಬಿಡುಗಡೆ ಮಾಡಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಯಮದ ಪ್ರಕಾರ, ಕೆಎಸ್ಆರ್ಟಿಸಿ ಬಸ್ನಲ್ಲಿ ಮೂವತ್ತು ಕೆಜಿಯವರೆಗೂ ಪ್ರಯಾಣಿಕರು ಉಚಿತವಾಗಿ ಲಗೇಜು ಉಚಿತವಾಗಿ ತೆಗೆದುಕೊಂಡು ಹೋಗಬಹುದಾಗಿದೆ. 30 ಕೆಜಿ ಮೇಲೆ ಲಗೇಜ್ ಇದ್ದರೆ ಹಣ ಪಾವತಿ ಮಾಡಬೇಕಿದೆ. 40 ಕೆಜಿ ತೂಕವಿರುವ ವಾಷಿಂಗ್ ಮಿಷಿನ್, ಫ್ರಿಡ್ಜ್, 25 ಕೆಜಿ ತೂಕದ ಖಾಲಿ ಕಂಟೈನರ್ ಬಸ್ನಲ್ಲಿ ಸಾಗಿಸಲೂ ಅವಕಾಶ ನೀಡಲಾಗಿದೆ.
ಕೆಎಸ್ಆರ್ಟಿಸಿ ಹೊಸ ನಿಯಮದ ಪ್ರಕಾರ, ಕಬ್ಬಿಣ ಪೈಪ್ ಮೋಟಾರ್ಗಳನ್ನೂ ಸಾಗಿಸಬಹುದು ಎನ್ನಲಾಗಿದೆ. ಮೊಲ, ನಾಯಿ ಮರಿ, ಬೆಕ್ಕು, ಪಕ್ಷಿಯನ್ನೂ ಸಾಗಿಸಬಹದು. ನಾಯಿಯನ್ನು ಸಾಗಿಸಬಹುದು. ನಾಯಿಯನ್ನು ಚೈನ್ನಲ್ಲಿ ಬಿಗಿದು ಕಾಳಜಿಯೊಂದಿಗೆ ಬಸ್ನಲ್ಲಿ ಸಾಗಿಸಬಹುದು.
ಈ ನಿಯಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ನಲ್ಲಿ ಸಣ್ಣಪುಟ್ಟ ಮಕ್ಕಳು ಪ್ರಯಾಣ ಮಾಡುತ್ತಾರ. ಈ ವೇಳೆ, ಏನಾದರೂ ತಿನ್ನುವ ವೇಳೆ ಮಕ್ಕಳಿಗೆ ನಾಯಿ ಬಾಯಿ ಹಾಕಿದರೆ ಏನ್ ಕಥೆ? ಈ ನಿಯಮ ಸರಿಯಲ್ಲ ಎಂದು ಕೆಲವು ಮಂದಿ ಪ್ರಯಾಣಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಯಸ್ಕರು 30 ಕೆಜಿ, ಮಕ್ಕಳು 15 ಕೆಜಿ ತೂಕದ ಲಗ್ಗೇಜ್ ಬಸ್ಸಿನಲ್ಲಿ ಕೊಂಡೊಯ್ಯಬಹುದು. ನಾಲ್ಕೈದು ಜನರು ಒಟ್ಟಾಗಿ ಪ್ರಯಾಣಿಸಿದರೂ 30 ಕೆಜಿ ಲಗೇಜ್ ಮಾತ್ರ ಉಚಿತ ಎನ್ನಲಾಗಿದೆ.
ಇದನ್ನೂ ಓದಿ: 3 ಸಾವಿರ ಕೋಟಿ ರೂ. ಪಿಎಫ್ ಬಾಕಿ ಉಳಿಸಿಕೊಂಡ ಕೆಎಸ್ಆರ್ಟಿಸಿ, ಬಿಎಂಟಿಸಿ: ಪಿಎಫ್ ಸಿಗದೆ ಸಂಕಷ್ಟದಲ್ಲಿ ಸಾರಿಗೆ ನೌಕರರು
ಕೂಡಲೇ ಹೊಸ ಲಗೇಜ್ ನಿಯಮವನ್ನು ವಾಪಸ್ ಪಡೆಯಬೇಕು. ಹೊಸ ನಿಯಮದಿಂದ ಸಮಸ್ಯೆ ಆಗಲಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.
Published On - 10:18 am, Mon, 28 July 25