AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ಕೆಎಸ್​ಆರ್​ಟಿಸಿ ಹಳೆಯ ಬಸ್​​​ಗಳಿಗೆ ಮರುಜೀವ; ಹೊಚ್ಚಹೊಸದಾಗಿ ರಸ್ತೆಗಿಳಿಯಲಿವೆ 500 ಬಸ್​ಗಳು!

ಹೆಚ್ಚಿನ ಬಸ್‌ಗಳಲ್ಲಿ ಎಂಜಿನ್ ಒಂದೇ ಆಗಿರುತ್ತದೆ ಮತ್ತು ಅಗತ್ಯವಿದ್ದರೆ ಅದನ್ನು ನವೀಕರಿಸಲಾಗುತ್ತದೆ. ಆದರೆ, ಬಸ್‌ಗಳು ರಸ್ತೆಗಿಳಿದು 15 ವರ್ಷ ಪೂರೈಸಿದ ನಂತರ ಅವುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

KSRTC: ಕೆಎಸ್​ಆರ್​ಟಿಸಿ ಹಳೆಯ ಬಸ್​​​ಗಳಿಗೆ ಮರುಜೀವ; ಹೊಚ್ಚಹೊಸದಾಗಿ ರಸ್ತೆಗಿಳಿಯಲಿವೆ 500 ಬಸ್​ಗಳು!
ಕೆಎಸ್​ಆರ್​ಟಿಸಿ ಬಸ್
ಗಣಪತಿ ಶರ್ಮಾ
|

Updated on:Jul 17, 2023 | 8:54 PM

Share

ಬೆಂಗಳೂರು, ಜುಲೈ 17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಹೊಸ ಬಸ್‌ಗಳನ್ನು ಖರೀದಿಸಿ ಬಲ ಹೆಚ್ಚಿಸಿಕೊಳ್ಳಲು ಮುಂದಾಗಿರುವುದರ ಜತೆಗೆ, ಹಳೆಯ ಬಸ್‌ಗಳನ್ನು ನವೀಕರಿಸಲು ಬಸ್ ಡಿಪೋಗಳಿಗೆ ಜವಾಬ್ದಾರಿ ವಹಿಸಿದೆ. 10 ಲಕ್ಷ ಕಿಲೋಮೀಟರ್ ಕ್ರಮಿಸಿದ ಸುಮಾರು 500 ಬಸ್‌ಗಳನ್ನು ಈಗ ನವೀಕರಿಸಲಾಗಿದೆ ಮತ್ತು ಹೊಚ್ಚಹೊಸದಾಗಿ ಕಾಣುವಂತೆ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ (Anbu Kumar) ಹೇಳಿದ್ದಾರೆ.

ಹೊಸ ಬಸ್‌ನ ಬೆಲೆ ಸುಮಾರು 40 ಲಕ್ಷ ರೂಪಾಯಿ ಇದೆ. ಆದರೆ ನಮ್ಮ ಸಿಬ್ಬಂದಿ ಕೇವಲ 3 ಲಕ್ಷ ರೂಪಾಯಿಗಳಿಗೆ ಹಳೆಯ ಬಸ್‌ಗಳನ್ನು ಹೊಸದಾಗಿ ಕಾಣುವಂತೆ ಮಾಡುತ್ತಿದ್ದಾರೆ ಎಂದು ಅವರು ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ನಿಗಮವು ಭಾರೀ ನಷ್ಟವನ್ನು ಅನುಭವಿಸಿತ್ತು ಮತ್ತು ಈಗ ಚೇತರಿಸಿಕೊಳ್ಳುತ್ತಿದೆ. ಕೋವಿಡ್ ಕಾರಣದಿಂದ, ಕೆಎಸ್‌ಆರ್‌ಟಿಸಿಗೆ ಯಾವುದೇ ಹೊಸ ಬಸ್‌ಗಳನ್ನು ಖರೀದಿಸಲು ಸಾಧ್ಯವಾಗಿರಲಿಲ್ಲ ಮತ್ತು ಹಳೆಯ ಬಸ್‌ಗಳನ್ನು ನವೀಕರಿಸಿ ಹೊಚ್ಚ ಹೊಸ ರೂಪದಲ್ಲಿ ಪುನರ್​​ ರೂಪಿಸುವ ಯೋಚನೆ ಹೊಳೆಯಿತು. ಒಂದು ವರ್ಷದಲ್ಲಿ ಸುಮಾರು 500 ಹಳೆಯ ಬಸ್‌ಗಳನ್ನು ನವೀಕರಿಸಿದ್ದೇವೆ ಮತ್ತು ಪ್ರತಿ ವಾರ ಇದಕ್ಕೆ ಮತ್ತಷ್ಟು ಸೇರ್ಪಡಯಾಗುತ್ತಿವೆ ಎಂದು ಕುಮಾರ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಸುಮಾರು 10 ವರ್ಷಗಳಷ್ಟು ಹಳೆಯದಾದ ಮತ್ತು 10 ಲಕ್ಷ ಕಿಮೀ ಅಥವಾ ಅದಕ್ಕಿಂತ ಹೆಚ್ಚಿನ ಸಂಚಾರ ಮಾಡಿರುವ ಬಸ್‌ಗಳನ್ನು ನವೀಕರಿಸಲು ಆಯ್ಕೆ ಮಾಡುತ್ತೇವೆ. ಬಸ್ ಅನ್ನು ಆಯ್ಕೆ ಮಾಡಿದ ನಂತರ, ಚಾಸಿಸ್ ಹೊರತುಪಡಿಸಿ, ಅದನ್ನು ಸಂಪೂರ್ಣವಾಗಿ ಕಿತ್ತುಹಾಕಲಾಗುತ್ತದೆ. ಚಾಸಿಸ್ ಸವೆದು ಹೋದರೆ, ಅದನ್ನು ಕೂಡ ಸರಿಪಡಿಸಲಾಗುತ್ತದೆ ಮತ್ತು ಆಸನಗಳಿಂದ ಕಿಟಕಿಗಳವರೆಗೆ ಎಲ್ಲವನ್ನೂ ಬದಲಾಯಿಸಲಾಗುತ್ತದೆ. ಹೊರಭಾಗವನ್ನು ಸಹ ಮರುನಿರ್ಮಾಣ ಮಾಡಲಾಗುತ್ತದೆ. ಬಣ್ಣ ಬಳಿದ ನಂತರ ನವೀಕರಿಸಿದ ಬಸ್ ಹೊಚ್ಚಹೊಸ ಬಸ್‌ನಂತೆಯೇ ಉತ್ತಮವಾಗಿ ಕಾಣಿಸುತ್ತದೆ ಎಂದು ನವೀಕರಣಕ್ಕಾಗಿ ಬಸ್‌ಗಳನ್ನು ಆಯ್ಕೆ ಮಾಡುವ ಮಾನದಂಡವನ್ನು ಕುಮಾರ್ ವಿವರಿಸಿದ್ದಾರೆ.

ಇದನ್ನೂ ಓದಿ: KSRTC ಬಸ್​ ಸೌಲಭ್ಯದಿಂದ ವಂಚಿತವಾಗಿವೆ ದಕ್ಷಿಣ ಕರ್ನಾಟಕದ ಸಾವಿರಾರು ಗ್ರಾಮಗಳು

ಹೆಚ್ಚಿನ ಬಸ್‌ಗಳಲ್ಲಿ ಎಂಜಿನ್ ಒಂದೇ ಆಗಿರುತ್ತದೆ ಮತ್ತು ಅಗತ್ಯವಿದ್ದರೆ ಅದನ್ನು ನವೀಕರಿಸಲಾಗುತ್ತದೆ. ಆದರೆ, ಬಸ್‌ಗಳು ರಸ್ತೆಗಿಳಿದು 15 ವರ್ಷ ಪೂರೈಸಿದ ನಂತರ ಅವುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹಳೆ ಬಸ್​ಗಳ ನವೀಕರಣದ ಮೂಲಕ ನಿಗಮಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯ ಮಾಡಲು ಸಾಧ್ಯವಾಗಿದ್ದು, ಹಳೆಯ ಬಸ್‌ಗಳನ್ನು ನವೀಕರಿಸಲು ಬಸ್ ಡಿಪೋಗಳ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಕುಮಾರ್ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 pm, Mon, 17 July 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್