AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಸಿಬ್ಬಂದಿ ನಿರ್ಲಕ್ಷ್ಯ: ಪರೀಕ್ಷಾರ್ಥಿಗಳ ಕನಸು ನುಚ್ಚುನೂರು

ಗದಗ: KSRTC ಸಿಬ್ಬಂದಿಯ ನಿರ್ಲಕ್ಷ್ಯದಿಂದ 40 ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇಂದು ಕಲಬುರಗಿ ನಗರದಲ್ಲಿ ಸಿವಿಲ್ ಪೊಲೀಸ್ ಪರೀಕ್ಷೆ ಇತ್ತು. ಹೀಗಾಗಿ ಗದಗದಿಂದ ಕಲಬುರಗಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಬೇಕಾಗಿತ್ತು. ಆದ್ರೆ KSRTC ಬಸ್ ಸೌಲಭ್ಯ ಕಲ್ಪಿಸಿಲ್ಲ. ಕಲಬುರಗಿಗೆ ಹೆಚ್ಚುವರಿ ಬಸ್ ಒದಗಿಸುವಂತೆ KSRTC ಸಿಬ್ಬಂದಿಗೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಆದ್ರೆ ಪರೀಕ್ಷಾರ್ಥಿಗಳ ಮನವಿಗೆ KSRTC ಇಲಾಖೆ ಸ್ಪಂದಿಸಿಲ್ಲ. ರಾಜಹಂಸ ಬಸ್ ತಡೆದು ಗಲಾಟೆ: ಗದಗದಿಂದ ಯಾದಗಿರಿಗೆ ಹೊರಟ್ಟಿದ ರಾಜಹಂಸ ಬಸ್​ ಅನ್ನು ಅರ್ಧಗಂಟೆಗೂ ಹೆಚ್ಚು ಕಾಲ […]

KSRTC ಸಿಬ್ಬಂದಿ ನಿರ್ಲಕ್ಷ್ಯ: ಪರೀಕ್ಷಾರ್ಥಿಗಳ ಕನಸು ನುಚ್ಚುನೂರು
ಸಾಧು ಶ್ರೀನಾಥ್​
|

Updated on: Nov 17, 2019 | 10:51 AM

Share

ಗದಗ: KSRTC ಸಿಬ್ಬಂದಿಯ ನಿರ್ಲಕ್ಷ್ಯದಿಂದ 40 ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇಂದು ಕಲಬುರಗಿ ನಗರದಲ್ಲಿ ಸಿವಿಲ್ ಪೊಲೀಸ್ ಪರೀಕ್ಷೆ ಇತ್ತು. ಹೀಗಾಗಿ ಗದಗದಿಂದ ಕಲಬುರಗಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಬೇಕಾಗಿತ್ತು. ಆದ್ರೆ KSRTC ಬಸ್ ಸೌಲಭ್ಯ ಕಲ್ಪಿಸಿಲ್ಲ.

ಕಲಬುರಗಿಗೆ ಹೆಚ್ಚುವರಿ ಬಸ್ ಒದಗಿಸುವಂತೆ KSRTC ಸಿಬ್ಬಂದಿಗೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಆದ್ರೆ ಪರೀಕ್ಷಾರ್ಥಿಗಳ ಮನವಿಗೆ KSRTC ಇಲಾಖೆ ಸ್ಪಂದಿಸಿಲ್ಲ.

ರಾಜಹಂಸ ಬಸ್ ತಡೆದು ಗಲಾಟೆ: ಗದಗದಿಂದ ಯಾದಗಿರಿಗೆ ಹೊರಟ್ಟಿದ ರಾಜಹಂಸ ಬಸ್​ ಅನ್ನು ಅರ್ಧಗಂಟೆಗೂ ಹೆಚ್ಚು ಕಾಲ ತಡೆದು, ಕಲಬುರಗಿ ಬಸ್ ಸೌಲಭ್ಯ ನೀಡುವವರೆಗೂ ಈ ಬಸ್ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಬಳಿಕ ಗದಗ ಹೊಸ ಬಸ್ ನಿಲ್ದಾಣದ ಮ್ಯಾನೇಜರ್​ರನ್ನು ಪರೀಕ್ಷಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಸಕರು, ಜಿಲ್ಲಾಧಿಕಾರಿ ಮಾತಿಗೂ ಬೆಲೆ ಇಲ್ಲ: ಸ್ಥಳಕ್ಕೆ ಭೇಟಿ ನೀಡಿದ ಬೆಟಗೇರಿ ಬಡಾವಣೆ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿದ್ದಾರೆ. ಪಟ್ಟು ಬಿಡದ ಪರೀಕ್ಷಾರ್ಥಿಗಳು ಶಾಸಕ ಹೆಚ್.ಕೆ.ಪಾಟೀಲ್​ಗೆ ಕರೆ ಮಾಡಿದ್ದಾರೆ. ಬಳಿಕ ಶಾಸಕರು ಮತ್ತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಮಾತಿಗೂ ಕೆಎಸ್​ಆರ್​ಟಿಸಿ ಅಧಿಕಾರಿಗಳು ಬೆಲೆ ನೀಡಿಲ್ಲ ಎನ್ನಲಾಗಿದೆ. ಮಧ್ಯರಾತ್ರಿ 1 ಗಂಟೆ ಬಳಿಕ ಬಸ್ ಇಲ್ಲದೇ ಪರೀಕ್ಷಾರ್ಥಿಗಳು ವಾಪಸ್ ಆಗಿದ್ದಾರೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ