Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ: ಸಚಿವ ಕೆ.ಸುಧಾಕರ್​

ಮಧ್ಯರಾತ್ರಿ ವೇಳೆಗೆ ರೈತರು ಮಾರುಕಟ್ಟೆಗೆ ತರಕಾರಿ ತೆಗೆದುಕೊಂಡು ಬರುತ್ತಾರೆ. ಹೀಗಾಗಿ ರಾತ್ರಿ ಕರ್ಫ್ಯೂ ರೈತರಿಗೆ ತೊಂದರೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ಸಂಜೆ ಬಿಡುಗಡೆ ಆಗಲಿರುವ ಮಾರ್ಗಸೂಚಿಯಲ್ಲಿ ಪ್ರತಿಯೊಂದು ಅಂಶಗಳ ಬಗ್ಗೆ ಇರುತ್ತದೆ ಎಂದು ತಿಳಿಸಿದರು.

KSRTC ಬಸ್​ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ: ಸಚಿವ ಕೆ.ಸುಧಾಕರ್​
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 23, 2020 | 4:50 PM

ಬೆಂಗಳೂರು: ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತೆ ರಾತ್ರಿ ಕರ್ಫ್ಯೂ ಮೊರೆ ಹೋಗಿದೆ. ಸಂಜೆ ವೇಳೆಗೆ ಸರ್ಕಾರ ಮಾರ್ಗ ಸೂಚಿ ಕೂಡ ಹೊರಡಿಸಲಿದೆ. ರಾತ್ರಿ ಕರ್ಫ್ಯೂವಿನಿಂದಾಗಿ ಬಸ್​ ಸಂಚಾರಕ್ಕೆ ತೊಂದರೆ ಆಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕೆ. ಸುಧಾಕರ್​, ಬಸ್​ ಸಂಚಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾತನಾಡಿರುವ ಕೆ. ಸುಧಾಕರ್​, ಕೆಎಸ್​ಆರ್​ಟಿಸಿ ಬಸ್​ ಸಂಚಾರಕ್ಕೆ ಯಾವುದೇ ಅಡ್ಡಿ ಆಗುವುದಿಲ್ಲ. ಹೀಗಾಗಿ, ಬೇರೆಬೇರೆ ಊರುಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಗದು. ಎಲ್ಲರೂ ಮಲಗುವ ಸಂದರ್ಭದಲ್ಲಿ ನಾವು ಕರ್ಫ್ಯೂ ಮಾಡುತ್ತಿದ್ದೇವೆ. ಇದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ ಎಂದರು.

ಮಧ್ಯರಾತ್ರಿ ವೇಳೆಗೆ ರೈತರು ಮಾರುಕಟ್ಟೆಗೆ ತರಕಾರಿ ತೆಗೆದುಕೊಂಡು ಬರುತ್ತಾರೆ. ಹೀಗಾಗಿ ರಾತ್ರಿ ಕರ್ಫ್ಯೂ ರೈತರಿಗೆ ತೊಂದರೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ಸಂಜೆ ಬಿಡುಗಡೆ ಆಗಲಿರುವ ಮಾರ್ಗಸೂಚಿಯಲ್ಲಿ ಪ್ರತಿಯೊಂದು ಅಂಶಗಳೂ ಇರುತ್ತವೆ. ನಮ್ಮ ಸರ್ಕಾರದಲ್ಲಿ ರೈತರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದರು.

ಹೊಸ ವರ್ಷದ ಸಮೀಪದಲ್ಲೇ ಸರ್ಕಾರ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ. ಕೊರೊನಾ ಪ್ರಕರಣಗಳು ಹರಡುತ್ತಿರುವುದು ನಿಯಂತ್ರಣಕ್ಕೆ ಬರದ ಕಾರಣ ಇದು ಹೊಸ ವರ್ಷ ಆಚರಿಸುವ ಸಂದರ್ಭವಲ್ಲ ಎಂದು ಸುಧಾಕರ್​ ಅಭಿಪ್ರಾಯಪಟ್ಟಿದ್ದಾರೆ.

ಮುಂಗಡ ಟಿಕೆಟ್ ಕಾಯ್ದಿರಿಸಿರುವ ಎಲ್ಲ ಪ್ರಯಾಣಿಕರು ರಾತ್ರಿ 10 ಗಂಟೆಯ ಒಳಗೆ ನಿಲ್ದಾಣಗಳನ್ನು ತಲುಪಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಕರಿಗೆ ಮನವಿ ಮಾಡಿದ್ದರು.

ರಾತ್ರಿ​ ಕರ್ಫ್ಯೂ | ಬೆಂಗಳೂರಿನಲ್ಲಿ ಬಸ್​ ಸಂಚಾರದ ಗೊಂದಲ; ಮಾರ್ಗಸೂಚಿಗೆ ಕಾಯುತ್ತಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!