AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 12 ರಿಂದ ಕರ್ನಾಟಕದಿಂದ ಕೇರಳದ ವಿವಿಧ ಭಾಗಗಳಿಗೆ ಕೆಎಸ್​ಅರ್​ಟಿಸಿ ಬಸ್​ ಸಂಚಾರ ಆರಂಭ: ಕೆಎಸ್​ಅರ್​ಟಿಸಿ

ವಿದ್ಯಾರ್ಥಿಗಳು ಮತ್ತು ವ್ಯಾಪಾರ ಹಾಗೂ ಇನ್ನಿತರ ಕಾರಣಗಳಿಗೆ ಪ್ರತಿನಿತ್ಯ ಕೇರಳ-ಕರ್ನಾಟಕ ನಡುವೆ ಓಡಾಡುವ ಜನರು ಕಡ್ಡಾಯವಾಗಿ 15 ದಿನಗಳಿಗೊಮ್ಮೆ ಆರ್​ಟಿ-ಪಿಸಿಆರ್ ಟೆಸ್ಟ್​ ಮಾಡಿಸಿಕೊಳ್ಳುತ್ತಿರಬೇಕು ಮತ್ತು ತಮ್ಮೊಂದಿಗೆ ಕೊವಿಡ್-19 ನೆಗೆಟಿವ್ ಸರ್ಟಿಫಿಕೇಟ್​ ಹೊಂದಿರಬೇಕು ಎಂದು ಸಹ ಕೆಎಸ್​ಅರ್​ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜುಲೈ 12 ರಿಂದ ಕರ್ನಾಟಕದಿಂದ ಕೇರಳದ ವಿವಿಧ ಭಾಗಗಳಿಗೆ ಕೆಎಸ್​ಅರ್​ಟಿಸಿ ಬಸ್​ ಸಂಚಾರ ಆರಂಭ: ಕೆಎಸ್​ಅರ್​ಟಿಸಿ
ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ
ಅರುಣ್​ ಕುಮಾರ್​ ಬೆಳ್ಳಿ
|

Updated on:Jul 08, 2021 | 7:04 PM

Share

ಬೆಂಗಳೂರು:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್​ಅರ್​ಟಿಸಿ) ಯು ಬುಧವಾರದಂದು ಒಂದು ಪ್ರಕಟಣೆಯನ್ನು ಹೊರಡಿಸಿದ್ದು ಜುಲೈ 12 ರಿಂದ ಬೆಂಗಳೂರು, ಮೈಸೂರು ಮಂಗಳೂರು, ಪುತ್ತೂರು ಮತ್ತು ಇತರ ಕೆಲ ಭಾಗಗಳಿಂದ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್ ಸಂಚಾರ ಸೇವೆಯನ್ನು ಆರಂಭಿಸುವುದಾಗಿ ಹೇಳಿದೆ. ಸದರಿ ಸೇವೆಯು ಸಂಚಾರ ಸಾಂದ್ರತೆ ಮತ್ತು ಅವಶ್ಯಕತೆಗಳ ಮೇಲೆ ಆಧಾರಗೊಂಡಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೇರಳದಲ್ಲಿ ಕೊವಿಡ್​-19 ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಹೆಚ್ಚಿದ್ದರಿಂದ ಕೆಎಸ್​ಅರ್​ಟಿಸಿಯು ಏಪ್ರಿಲ್​ನಿಂದ ಆ ರಾಜ್ಯಕ್ಕೆ ಬಸ್​ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಿತ್ತು. ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣ ಮಾಡಲಿಚ್ಛಿಸುವರು ಕೆಲ ಅವಶ್ಯಕತೆಗಳನ್ನು ಪೂರೈಸಬೇಕಾಗುತ್ತದೆ ಎಂದು ಕೆಎಸ್​ಅರ್​ಟಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

‘ಕೇರಳದಿಂದ ಕರ್ನಾಟಕ್ಕೆ ಕೆಎಸ್​ಅರ್​ಟಿಸಿ ಬಸ್​ಗಳಲ್ಲಿ ಪ್ರಯಾಣ ಮಾಡಲಿಚ್ಚಿಸುವ ಜನ, ಕರ್ನಾಟಕದ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿ ಪ್ರಕಾರ, ತಮ್ಮೊಂದಿಗೆ 72 ಗಂಟೆಗಳಿಗಿಂತ ಹಳೆಯದಾಗಿರದ ಕೊವಿಡ್-19 ಪ್ರಮಾಣ ಪತ್ರವನ್ನು ಕ್ಯಾರಿ ಮಾಡಬೇಕು. ಅದಿಲ್ಲದ ಪಕ್ಷದಲ್ಲಿ ಅವರು ಅವರು ಕನಿಷ್ಟ ಒಂದು ಡೋಸ್ ಕೋವಿಡ್​ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರತಕ್ಕದ್ದು,’ ಎಂದು ಕೆಎಸ್​ಅರ್​ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು ಮತ್ತು ವ್ಯಾಪಾರ ಹಾಗೂ ಇನ್ನಿತರ ಕಾರಣಗಳಿಗೆ ಪ್ರತಿನಿತ್ಯ ಕೇರಳ-ಕರ್ನಾಟಕ ನಡುವೆ ಓಡಾಡುವ ಜನರು ಕಡ್ಡಾಯವಾಗಿ 15 ದಿನಗಳಿಗೊಮ್ಮೆ ಆರ್​ಟಿ-ಪಿಸಿಆರ್ ಟೆಸ್ಟ್​ ಮಾಡಿಸಿಕೊಳ್ಳುತ್ತಿರಬೇಕು ಮತ್ತು ತಮ್ಮೊಂದಿಗೆ ಕೊವಿಡ್-19 ನೆಗೆಟಿವ್ ಸರ್ಟಿಫಿಕೇಟ್​ ಹೊಂದಿರಬೇಕು ಎಂದು ಸಹ ಕೆಎಸ್​ಅರ್​ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಪ್ರಯಾಣಿಕರೆಲ್ಲ ಕಡ್ಡಾಯವಾಗಿ ಮಾಸ್ಕ್​ ಧರಿಸಿರಬೇಕು ಮತ್ತು ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಎಲ್ಲ ಕೋವಿಡ್​-19 ಮಾರ್ಗಸೂಚಿಗಳನ್ನು ಪ್ರಯಾಣಿಸುವಾಗ ಪಾಲಿಸಬೇಕು ಎಂದು ಕೆಎಸ್​ಅರ್​ಟಿಸಿ ಪ್ರಕಟಣೆಯಲ್ಲಿ ಹೇಳಲಾಗಿದೆ.

ಪ್ರಯಾಣ ಮಾಡಲು ಇಚ್ಛಿಸುವರ ಅನುಕೂಲಕ್ಕಾಗಿ ಕೆಎಸ್​ಅರ್​ಟಿಸಿ ಟಿಕೆಟ್​ಗಳನ್ನು ಕಾಯ್ದಿರಿಸುವ ಬಗ್ಗೆಯೂ ವಿವರಗಳನ್ನು ಒದಗಿಸಿದೆ. ಪ್ರಯಾಣ ಬೆಳೆಸಲು ಇಚ್ಛಿಸುವವರು ಮುಂಗಡವಾಗಿ ಟಿಕೆಟ್​ಗಳನ್ನು ಆನ್​ಲೈ​ನ್​ನಲ್ಲಿ  ksrtc.karnataka.gov.in / www.ksrtc.in ಮುಖಾಂತರ ಬುಕ್​ ಮಾಡಬಹುದು. ಅಲ್ಲದೆ ಟಿಕೆಟ್​ಗಳನ್ನು ಕೆಎಸ್​ಅರ್​ಟಿಸಿ ಫ್ರಾಂಚೈಸಿ ಮತ್ತು ಮುಂಗಡ ಟಿಕೆಟ್ ಬುಕಿಂಗ್ ಕೌಂಟರ್​ಗಳಲ್ಲಿ ಬುಕ್ ಮಾಡಬಹುದು ಎಂದು ಅದ ತಿಳಿಸಿದೆ.

ಕೆಎಸ್​ಅರ್​ಟಿಸಿ ಕೊಡಮಾಡುವ ಎಲ್ಲ ಸೌಲಭ್ಯಗಳನ್ನು ಪ್ರಯಾಣಿಕರು ಸದುಪಯೋಗ ಮಾಡಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: KSRTC: ಬಸ್ ಚಾಲನೆ ಮಾಡುವಾಗ ಚಾಲಕ ನಿದ್ರಿಸಿದರೂ ಅಪಘಾತವಾಗಲ್ಲ; ಕೃತಕ ಬುದ್ಧಿಮತ್ತೆ ಬಳಸಿ ಅಪಘಾತ ತಡೆಯಲಿದೆ ಕೆಎಸ್​ಆರ್​ಟಿಸಿ

Published On - 5:50 pm, Thu, 8 July 21

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ