Bus Fare Hike: ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶಾಕ್: ಶೀಘ್ರ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ರಾಜ್ಯ ರಸ್ತೆ ಸಾರಿಗೆ ನಿಗಮಗಳು ಮುಂದಾಗಿವೆ. ಕೆಎಸ್ಆರ್​ಟಿಸಿ ಮತ್ತು ಇತರ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳ ಪ್ರಸ್ತಾಪವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ. ಟಿಕೆಟ್ ದರ ಎಷ್ಟು ಹೆಚ್ಚಾಗಬಹುದು? ವಿವರಗಳಿಗೆ ಮುಂದೆ ಓದಿ.

Bus Fare Hike: ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶಾಕ್: ಶೀಘ್ರ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ
ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶಾಕ್: ಶೀಘ್ರ ಬಸ್ ದರ ಹೆಚ್ಚಳ ಸಾಧ್ಯತೆ
Follow us
Ganapathi Sharma
|

Updated on: Jun 08, 2024 | 4:21 PM

ಬೆಂಗಳೂರು, ಜೂನ್ 8: ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳ ಟಿಕೆಟ್ ದರ (Bus Ticket Fare) ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಡೀಸೆಲ್, ಬಿಡಿಭಾಗಗಳು ಮತ್ತು ಇತರ ಬಿಡಿಭಾಗಗಳ ಬೆಲೆ ಏರಿಕೆಯಾಗಿದೆ. ಜತೆಗೆ, ನೌಕರರ ವೇತನವೂ ಹೆಚ್ಚಾಗಿದೆ. ಹೀಗಾಗಿ ಬಸ್‌ಗಳ ನಿರ್ವಹಣಾ ವೆಚ್ಚ ಹೆಚ್ಚಾಗಿದೆ. ರಾಜ್ಯ ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆ (Shakti Scheme) ಜಾರಿಯಾದ ನಂತರ ರಾಜ್ಯ ಸರ್ಕಾರದಿಂದ ಯಾವುದೇ ವಿಶೇಷ ಅನುದಾನವೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಈ ಹಿಂದೆ, 2020 ರಲ್ಲಿ ಸಾರಿಗೆ ನಿಗಮದ ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗಿತ್ತು. 2020 ರಲ್ಲಿ ಲೀಟರ್‌ ಡೀಸೆಲ್​​​ಗೆ 61 ರೂ. ಇತ್ತು, ಆದರೆ ಈಗ ಅದು 90 ರೂ.ಗೆ ಏರಿದೆ. ಸುಮಾರು ಶೇ 50 ರಷ್ಟು ಹೆಚ್ಚಳವಾಗಿದೆ.

ಟಿಕೆಟ್ ದರ ಶೇ 25-30ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ನಿಗಮದ ಅಧಿಕಾರಿಯೊಬ್ಬರು ಖಚಿತಪಡಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಟಿಕೆಟ್ ದರವನ್ನು ಹೆಚ್ಚಿಸುವಂತೆ ನಾವು ರಾಜ್ಯ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದೇವೆ. ನಮ್ಮ ಗಳಿಕೆಯ ಶೇಕಡಾ 45 ಕ್ಕಿಂತ ಹೆಚ್ಚು ಡೀಸೆಲ್‌ಗೆ ಹೋಗುತ್ತದೆ. ಡೀಸೆಲ್ ಬೆಲೆ ಕಳೆದ ನಾಲ್ಕು ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚಾಗಿದೆ. ಮೊದಲು ದಿನಕ್ಕೆ 3 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೆವು. ಆದರೆ ಈಗ 5 ಕೋಟಿ ರೂಪಾಯಿಗೂ ಹೆಚ್ಚು ಖರ್ಚು ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಾರ್ಷಿಕವಾಗಿ ಹೆದ್ದಾರಿ ಟೋಲ್‌ಗಳನ್ನು ಹೇಗೆ ಹೆಚ್ಚಿಸುತ್ತದೆಯೋ ಹಾಗೆಯೇ ಬಸ್ ನಿಗಮಗಳು ಸಹ ಒಂದು ಸೂತ್ರವನ್ನು ಹೊಂದಿವೆ. ಶೇ 20ರಷ್ಟು ಏರಿಕೆಯಾಗಿರುವ ವೇತನ, ಶೇ 46ರಷ್ಟು ಏರಿಕೆಯಾಗಿರುವ ಡೀಸೆಲ್ ಬೆಲೆ ಮತ್ತು ಬಿಡಿಭಾಗಗಳು ಮತ್ತು ಇತರ ಬೆಲೆಗಳನ್ನು ಪರಿಗಣಿಸಿದರೆ, ಟಿಕೆಟ್ ದರವನ್ನು ಸುಮಾರು ಶೇ 40ರಷ್ಟು ಹೆಚ್ಚಿಸಬೇಕಾಗುತ್ತದೆ. ಆದರೆ ನಮ್ಮದು ಸರ್ಕಾರಿ ಬಸ್ ನಿಗಮವಾಗಿದೆ. ನಮ್ಮ ಆದ್ಯತೆ ಲಾಭ ಗಳಿಸುವುದಲ್ಲ, ಜನರ ಸೇವೆ. ಟಿಕೆಟ್ ದರವನ್ನು ಗಣನೀಯವಾಗಿ ಹೆಚ್ಚಿಸಲು ನಾವು ಬಯಸುವುದಿಲ್ಲ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ಈ ವರ್ಷ ಸರ್ಕಾರ ನಮ್ಮ ಪ್ರಸ್ತಾವನೆಯನ್ನು ಅನುಮೋದಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಬಜೆಟ್‌ನಲ್ಲಿ ಹೊಸ ಬಸ್‌ಗಳನ್ನು ಖರೀದಿಸಲು, ನೌಕರರಿಗೆ ವೇತನವನ್ನು ತೆರವುಗೊಳಿಸಲು, ಕಟ್ಟಡಗಳಿಗೆ ಮತ್ತು ಇತರರಿಗೆ ವಿಶೇಷ ಅನುದಾನವನ್ನು ನಾವು ಪಡೆಯುತ್ತೇವೆ. ಆದರೆ ಶಕ್ತಿ ಯೋಜನೆಯ ನಂತರ, ಸರ್ಕಾರವು ಯಾವುದೇ ಅನುದಾನವನ್ನು ನೀಡುತ್ತಿಲ್ಲ ಮತ್ತು ನಮ್ಮ ಆದಾಯದಿಂದಲೇ ನಿಗಮಗಳನ್ನು ನಡೆಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಎಷ್ಟು ಹೆಚ್ಚಾಗಬಹುದು ಟಿಕೆಟ್ ದರ?

ಶೇಕಡಾ 25-30 ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರವು ಶೇ 15-20 ರ ಹೆಚ್ಚಳಕ್ಕೆ ಅನುಮತಿ ನೀಡಬಹುದು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಟಿಕೆಟ್ ದರ ಹೆಚ್ಚಳದ ಬಗ್ಗೆ ಖಚಿತಪಡಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಇನ್ನೂ ಪ್ರಸ್ತಾವನೆಯನ್ನು ಸ್ವೀಕರಿಸಿಲ್ಲ. ಅವರು ಅದನ್ನು ಶೀಘ್ರದಲ್ಲೇ ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ