AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ 20 ಐಷಾರಾಮಿ ಐರಾವತ್ ಕ್ಲಬ್ ಕ್ಲಾಸ್ 2.0 ಮಾದರಿಯ ಬಸ್‌ಗಳು ಸೇರ್ಪಡೆಗೊಳ್ಳಲಿವೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಐರಾವತ್ ಕ್ಲಬ್ ಕ್ಲಾಸ್ 2.0 ಒಂದು ಬಸ್ಸಿನ ದರ ರೂ.1.78 ಕೋಟಿ ರೂ. ಆಗಿದ್ದು ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ.

ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 07, 2024 | 8:19 PM

Share

ಬೆಂಗಳೂರು, ಅಕ್ಟೋಬರ್​​ 07: ಕೆಎಸ್​​ಆರ್​ಟಿಸಿ (KSRTC) ನಿಗಮಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ 20 ಬಸ್​ಗಳು ಸೇರ್ಪಡೆಗೊಳ್ಳಲಿವೆ. ಆ ಮೂಲಕ ಕೆಎಸ್ಆರ್​ಟಿಸಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿರುವ ಒಂದು ಬಸ್ಸಿನ ದರ ರೂ. 1.78 ಕೋಟಿ ರೂ. ಆಗಿದೆ.

ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್​​ಆರ್​ಟಿಸಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕೆಎಸ್​​ಆರ್​ಟಿಸಿ ಎಂಡಿ ಅನ್ಬುಕುಮಾರ್​​ ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ಬಸ್​ಗಳನ್ನು ಪರೀಕ್ಷಿಸಿದ್ದಾರೆ.

ಹೊಸ ಬಸ್​ಗಳ ವಿಶೇಷತೆಗಳು ಹೀಗಿವೆ

ಕೆಎಸ್​​ಆರ್​ಟಿಸಿ ನಿಗಮಕ್ಕೆ ಸೇರ್ಪಡೆಗೊಳ್ಳುತ್ತಿರುವ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ ಬಸ್​ಗಳು ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್​ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ, ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿದೆ. ಏರೋ ಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.

ಈ ಬಸ್​ಗಳು 3.5% ಉದ್ದ ಮತ್ತು 5.6% ಎತ್ತರ ಇರುವುದರಿಂದ ಸೀಟ್​ಗಳ ನಡುವಿನ ಅಂತರ ಮತ್ತು ಹೆಚ್ಚಿನ ಹೆಡ್‌ ರೂಂ ಹೊಂದಿದೆ. ಜೊತೆಗೆ ಯುಎಸ್​ಬಿ+ಸಿ ಟೈಪ್​ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಉತ್ತಮ ಎಸಿ, ಫೈರ್ ಅಲಾರ್ಮ್, ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ ಸಾಧ್ಯತೆ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತದ ಆತಂಕ

9.5% ರಷ್ಟು ವಿಂಡ್‌ಶೀಲ್ಡ್ ಗಾಜು ವಿಸ್ತಾರವಾಗಿದೆ. ಈ ಬಸ್​​ನಲ್ಲಿ ಸಾಕಷ್ಟು ಲಗೇಜ್​ ಸ್ಥಳಾವಕಾಶವಿದೆ. ಅಂದರೆ ಹಿಂದಿನ ಬಸ್​ಗಳಿಗೆ ಹೋಲಿಸಿದರೆ ಶೇಕಾಡಾ 20% ರಷ್ಟು ವಿಸ್ತಾರವಾಗಿದೆ. ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ನೀಡಲಾಗಿದೆ. ಬಸ್​ ಒಳಗೆ ಆಸನದ ಎರಡು ಬರಿಯಲ್ಲಿ ನೀರಿನ ಪೈಪುಗಳಿದ್ದು ಬೆಂಕಿ ಅವಘಡ ಸಂದರ್ಭದಲ್ಲಿ ಸ್ವಯಂಪ್ರೇರಿತವಾಗಿ ಸಿಂಪಡಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬ್ಯಾಟ್ ಬೀಸಾಡಿ ಸಹ ಆಟಗಾರನೊಂದಿಗೆ ಜಗಳಕ್ಕಿಳಿದ ಪಾಕ್ ಕ್ರಿಕೆಟಿಗ
ಬ್ಯಾಟ್ ಬೀಸಾಡಿ ಸಹ ಆಟಗಾರನೊಂದಿಗೆ ಜಗಳಕ್ಕಿಳಿದ ಪಾಕ್ ಕ್ರಿಕೆಟಿಗ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ