ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ 20 ಐಷಾರಾಮಿ ಐರಾವತ್ ಕ್ಲಬ್ ಕ್ಲಾಸ್ 2.0 ಮಾದರಿಯ ಬಸ್‌ಗಳು ಸೇರ್ಪಡೆಗೊಳ್ಳಲಿವೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಐರಾವತ್ ಕ್ಲಬ್ ಕ್ಲಾಸ್ 2.0 ಒಂದು ಬಸ್ಸಿನ ದರ ರೂ.1.78 ಕೋಟಿ ರೂ. ಆಗಿದ್ದು ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ.

ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 07, 2024 | 8:19 PM

ಬೆಂಗಳೂರು, ಅಕ್ಟೋಬರ್​​ 07: ಕೆಎಸ್​​ಆರ್​ಟಿಸಿ (KSRTC) ನಿಗಮಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ 20 ಬಸ್​ಗಳು ಸೇರ್ಪಡೆಗೊಳ್ಳಲಿವೆ. ಆ ಮೂಲಕ ಕೆಎಸ್ಆರ್​ಟಿಸಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿರುವ ಒಂದು ಬಸ್ಸಿನ ದರ ರೂ. 1.78 ಕೋಟಿ ರೂ. ಆಗಿದೆ.

ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್​​ಆರ್​ಟಿಸಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕೆಎಸ್​​ಆರ್​ಟಿಸಿ ಎಂಡಿ ಅನ್ಬುಕುಮಾರ್​​ ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ಬಸ್​ಗಳನ್ನು ಪರೀಕ್ಷಿಸಿದ್ದಾರೆ.

ಹೊಸ ಬಸ್​ಗಳ ವಿಶೇಷತೆಗಳು ಹೀಗಿವೆ

ಕೆಎಸ್​​ಆರ್​ಟಿಸಿ ನಿಗಮಕ್ಕೆ ಸೇರ್ಪಡೆಗೊಳ್ಳುತ್ತಿರುವ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ ಬಸ್​ಗಳು ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್​ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ, ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿದೆ. ಏರೋ ಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.

ಈ ಬಸ್​ಗಳು 3.5% ಉದ್ದ ಮತ್ತು 5.6% ಎತ್ತರ ಇರುವುದರಿಂದ ಸೀಟ್​ಗಳ ನಡುವಿನ ಅಂತರ ಮತ್ತು ಹೆಚ್ಚಿನ ಹೆಡ್‌ ರೂಂ ಹೊಂದಿದೆ. ಜೊತೆಗೆ ಯುಎಸ್​ಬಿ+ಸಿ ಟೈಪ್​ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಉತ್ತಮ ಎಸಿ, ಫೈರ್ ಅಲಾರ್ಮ್, ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ ಸಾಧ್ಯತೆ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತದ ಆತಂಕ

9.5% ರಷ್ಟು ವಿಂಡ್‌ಶೀಲ್ಡ್ ಗಾಜು ವಿಸ್ತಾರವಾಗಿದೆ. ಈ ಬಸ್​​ನಲ್ಲಿ ಸಾಕಷ್ಟು ಲಗೇಜ್​ ಸ್ಥಳಾವಕಾಶವಿದೆ. ಅಂದರೆ ಹಿಂದಿನ ಬಸ್​ಗಳಿಗೆ ಹೋಲಿಸಿದರೆ ಶೇಕಾಡಾ 20% ರಷ್ಟು ವಿಸ್ತಾರವಾಗಿದೆ. ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ನೀಡಲಾಗಿದೆ. ಬಸ್​ ಒಳಗೆ ಆಸನದ ಎರಡು ಬರಿಯಲ್ಲಿ ನೀರಿನ ಪೈಪುಗಳಿದ್ದು ಬೆಂಕಿ ಅವಘಡ ಸಂದರ್ಭದಲ್ಲಿ ಸ್ವಯಂಪ್ರೇರಿತವಾಗಿ ಸಿಂಪಡಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು