AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ 20 ಐಷಾರಾಮಿ ಐರಾವತ್ ಕ್ಲಬ್ ಕ್ಲಾಸ್ 2.0 ಮಾದರಿಯ ಬಸ್‌ಗಳು ಸೇರ್ಪಡೆಗೊಳ್ಳಲಿವೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಐರಾವತ್ ಕ್ಲಬ್ ಕ್ಲಾಸ್ 2.0 ಒಂದು ಬಸ್ಸಿನ ದರ ರೂ.1.78 ಕೋಟಿ ರೂ. ಆಗಿದ್ದು ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ.

ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
ಕಿರಣ್​ ಸೂರ್ಯ
| Edited By: |

Updated on: Oct 07, 2024 | 8:19 PM

Share

ಬೆಂಗಳೂರು, ಅಕ್ಟೋಬರ್​​ 07: ಕೆಎಸ್​​ಆರ್​ಟಿಸಿ (KSRTC) ನಿಗಮಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ 20 ಬಸ್​ಗಳು ಸೇರ್ಪಡೆಗೊಳ್ಳಲಿವೆ. ಆ ಮೂಲಕ ಕೆಎಸ್ಆರ್​ಟಿಸಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿರುವ ಒಂದು ಬಸ್ಸಿನ ದರ ರೂ. 1.78 ಕೋಟಿ ರೂ. ಆಗಿದೆ.

ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್​​ಆರ್​ಟಿಸಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕೆಎಸ್​​ಆರ್​ಟಿಸಿ ಎಂಡಿ ಅನ್ಬುಕುಮಾರ್​​ ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ಬಸ್​ಗಳನ್ನು ಪರೀಕ್ಷಿಸಿದ್ದಾರೆ.

ಹೊಸ ಬಸ್​ಗಳ ವಿಶೇಷತೆಗಳು ಹೀಗಿವೆ

ಕೆಎಸ್​​ಆರ್​ಟಿಸಿ ನಿಗಮಕ್ಕೆ ಸೇರ್ಪಡೆಗೊಳ್ಳುತ್ತಿರುವ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ ಬಸ್​ಗಳು ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್​ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ, ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿದೆ. ಏರೋ ಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.

ಈ ಬಸ್​ಗಳು 3.5% ಉದ್ದ ಮತ್ತು 5.6% ಎತ್ತರ ಇರುವುದರಿಂದ ಸೀಟ್​ಗಳ ನಡುವಿನ ಅಂತರ ಮತ್ತು ಹೆಚ್ಚಿನ ಹೆಡ್‌ ರೂಂ ಹೊಂದಿದೆ. ಜೊತೆಗೆ ಯುಎಸ್​ಬಿ+ಸಿ ಟೈಪ್​ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಉತ್ತಮ ಎಸಿ, ಫೈರ್ ಅಲಾರ್ಮ್, ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ ಸಾಧ್ಯತೆ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತದ ಆತಂಕ

9.5% ರಷ್ಟು ವಿಂಡ್‌ಶೀಲ್ಡ್ ಗಾಜು ವಿಸ್ತಾರವಾಗಿದೆ. ಈ ಬಸ್​​ನಲ್ಲಿ ಸಾಕಷ್ಟು ಲಗೇಜ್​ ಸ್ಥಳಾವಕಾಶವಿದೆ. ಅಂದರೆ ಹಿಂದಿನ ಬಸ್​ಗಳಿಗೆ ಹೋಲಿಸಿದರೆ ಶೇಕಾಡಾ 20% ರಷ್ಟು ವಿಸ್ತಾರವಾಗಿದೆ. ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ನೀಡಲಾಗಿದೆ. ಬಸ್​ ಒಳಗೆ ಆಸನದ ಎರಡು ಬರಿಯಲ್ಲಿ ನೀರಿನ ಪೈಪುಗಳಿದ್ದು ಬೆಂಕಿ ಅವಘಡ ಸಂದರ್ಭದಲ್ಲಿ ಸ್ವಯಂಪ್ರೇರಿತವಾಗಿ ಸಿಂಪಡಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು