AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ 20 ಐಷಾರಾಮಿ ಐರಾವತ್ ಕ್ಲಬ್ ಕ್ಲಾಸ್ 2.0 ಮಾದರಿಯ ಬಸ್‌ಗಳು ಸೇರ್ಪಡೆಗೊಳ್ಳಲಿವೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಐರಾವತ್ ಕ್ಲಬ್ ಕ್ಲಾಸ್ 2.0 ಒಂದು ಬಸ್ಸಿನ ದರ ರೂ.1.78 ಕೋಟಿ ರೂ. ಆಗಿದ್ದು ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ.

ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್
Kiran Surya
| Edited By: |

Updated on: Oct 07, 2024 | 8:19 PM

Share

ಬೆಂಗಳೂರು, ಅಕ್ಟೋಬರ್​​ 07: ಕೆಎಸ್​​ಆರ್​ಟಿಸಿ (KSRTC) ನಿಗಮಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ 20 ಬಸ್​ಗಳು ಸೇರ್ಪಡೆಗೊಳ್ಳಲಿವೆ. ಆ ಮೂಲಕ ಕೆಎಸ್ಆರ್​ಟಿಸಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿರುವ ಒಂದು ಬಸ್ಸಿನ ದರ ರೂ. 1.78 ಕೋಟಿ ರೂ. ಆಗಿದೆ.

ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್​​ಆರ್​ಟಿಸಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕೆಎಸ್​​ಆರ್​ಟಿಸಿ ಎಂಡಿ ಅನ್ಬುಕುಮಾರ್​​ ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ಬಸ್​ಗಳನ್ನು ಪರೀಕ್ಷಿಸಿದ್ದಾರೆ.

ಹೊಸ ಬಸ್​ಗಳ ವಿಶೇಷತೆಗಳು ಹೀಗಿವೆ

ಕೆಎಸ್​​ಆರ್​ಟಿಸಿ ನಿಗಮಕ್ಕೆ ಸೇರ್ಪಡೆಗೊಳ್ಳುತ್ತಿರುವ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ ಹೊಸ ಬಸ್​ಗಳು ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್​ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ, ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿದೆ. ಏರೋ ಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.

ಈ ಬಸ್​ಗಳು 3.5% ಉದ್ದ ಮತ್ತು 5.6% ಎತ್ತರ ಇರುವುದರಿಂದ ಸೀಟ್​ಗಳ ನಡುವಿನ ಅಂತರ ಮತ್ತು ಹೆಚ್ಚಿನ ಹೆಡ್‌ ರೂಂ ಹೊಂದಿದೆ. ಜೊತೆಗೆ ಯುಎಸ್​ಬಿ+ಸಿ ಟೈಪ್​ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಉತ್ತಮ ಎಸಿ, ಫೈರ್ ಅಲಾರ್ಮ್, ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ ಸಾಧ್ಯತೆ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತದ ಆತಂಕ

9.5% ರಷ್ಟು ವಿಂಡ್‌ಶೀಲ್ಡ್ ಗಾಜು ವಿಸ್ತಾರವಾಗಿದೆ. ಈ ಬಸ್​​ನಲ್ಲಿ ಸಾಕಷ್ಟು ಲಗೇಜ್​ ಸ್ಥಳಾವಕಾಶವಿದೆ. ಅಂದರೆ ಹಿಂದಿನ ಬಸ್​ಗಳಿಗೆ ಹೋಲಿಸಿದರೆ ಶೇಕಾಡಾ 20% ರಷ್ಟು ವಿಸ್ತಾರವಾಗಿದೆ. ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ನೀಡಲಾಗಿದೆ. ಬಸ್​ ಒಳಗೆ ಆಸನದ ಎರಡು ಬರಿಯಲ್ಲಿ ನೀರಿನ ಪೈಪುಗಳಿದ್ದು ಬೆಂಕಿ ಅವಘಡ ಸಂದರ್ಭದಲ್ಲಿ ಸ್ವಯಂಪ್ರೇರಿತವಾಗಿ ಸಿಂಪಡಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್