ಕೆಎಸ್​ಆರ್​ಟಿಸಿಯೂ ಇನ್ಮುಂದೆ ಕ್ಯಾಶ್​ಲೆಸ್: ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿಸುವ ವ್ಯವಸ್ಥೆ ಶೀಘ್ರ ಜಾರಿ

ಕೆಎಸ್​ಆರ್​ಟಿಸಿ ಬಸ್​​​ಗಳಲ್ಲಿ ಟಿಕೆಟ್ ಮಷಿನ್​ಗಳು ಕೈಕೊಟ್ಟು ಚಿಲ್ಲರೆಗಾಗಿ ಪ್ರಯಾಣಿಕರು ಮತ್ತು ಕಂಡಕ್ಟರ್​​​ಗಳ ಮಧ್ಯೆ ಕಿರಿಕ್ ಆಗುವುದು ಸಹಜ. ಇದೀಗ ಇಂಥ ಸಮಸ್ಯೆಗಳಿಗೆ ಮುಕ್ತಿ ಕಾಣಿಸಲು ಸಂಸ್ಥೆ ಮುಂದಾಗಿದೆ. ಪ್ರಯಾಣಿಕರಿಗಾಗಿ ಕೆಎಸ್​ಆರ್​ಟಿಸಿಯೂ ಕ್ಯಾಶ್​ಲೆಸ್ ಆಗಲು ಮುಂದಾಗಿದೆ. ಕ್ಯಾಶ್​ಲೆಸ್ ಪಾವತಿ ವ್ಯವಸ್ಥೆ ಕೆಎಸ್​ಆರ್​ಟಿಸಿ ಬಸ್​​​ಗಳಲ್ಲಿ ಶೀಘ್ರ ಜಾರಿಗೆ ಬರಲಿದೆ.

ಕೆಎಸ್​ಆರ್​ಟಿಸಿಯೂ ಇನ್ಮುಂದೆ ಕ್ಯಾಶ್​ಲೆಸ್: ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿಸುವ ವ್ಯವಸ್ಥೆ ಶೀಘ್ರ ಜಾರಿ
ಕೆಎಸ್​ಆರ್​ಟಿಸಿಯೂ ಇನ್ಮುಂದೆ ಕ್ಯಾಶ್​ಲೆಸ್ (ಸಾಂದರ್ಭಿಕ ಚಿತ್ರ)
Edited By:

Updated on: Jul 05, 2024 | 7:53 AM

ಬೆಂಗಳೂರು, ಜುಲೈ 5: ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್​​ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್​ಆರ್​ಟಿಸಿ ಮುಂದಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಕೆಎಸ್​ಆರ್​ಟಿಸಿ ಮುಂದಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ.

ಕಾರ್ಡ್​​​ಗಳನ್ನು ಬಳಸಿಯೂ ಪಾವತಿ ಮಾಡಬಹುದು!

ಖಾಸಗಿ ಕಂಪೆನಿಯಿಂದ ಒಂದು ಮಷಿನ್​​ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್​​ಗಳ ಖರೀದಿಗೆ ಕೆಎಸ್​ಆರ್​ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ. ಈ ನೂತನ ಮಷಿನ್​​ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್​​​ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು.

6500 ಬಸ್​ಗಳಿಗೆ ಹೊಸ ಮಷಿನ್

ಸದ್ಯ ಈಗ ಇರುವ ಮಷಿನ್​​ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್​ನಿಂದ ಇದು ತಪ್ಪಲಿದೆ. ಇತ್ತೀಚೆಗೆ ಕೆಎಸ್​ಆರ್​ಟಿಸಿ ಬಸ್​​​ಗಳಲ್ಲಿ ಪ್ರಯಾಣ ಮಾಡುವ ಹೆಚ್ಚಿನವರ ಬಳಿ ಕ್ಯಾಶ್ ಇರುವುದಿಲ್ಲ. ಹಾಗಾಗಿ ಪ್ರಯಾಣಿಕರ ಅನಕೂಲಕ್ಕಾಗಿ ಇಟಿಎಂ ಸಹಕಾರಿ ಆಗಲಿದೆ. ನಿಗಮದ 6500 ಬಸ್ಸುಗಳಲ್ಲೂ ಹೊಸ ವ್ಯವಸ್ಥೆ ಪರಿಚಯ ಮಾಡಲಾಗುತ್ತದೆ. ಶಕ್ತಿ ಯೋಜನೆಯ ಪಿಂಕ್‌ ಟಿಕೆಟ್​​​ಗಳನ್ನು ಈ ಇಟಿಎಂ ಮಷಿನ್ ಗಳಲ್ಲಿ ಸ್ಕ್ಯಾನ್ ಮಾಡಿ ಅವಕಾಶ ನೀಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಕೂಡ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ

ಇದನ್ನೂ ಓದಿ: ಹೊಸದಾಗಿ ಸಾವಿರ ಬಸ್​ಗಳನ್ನು ರಸ್ತೆಗೆ ಇಳಿಸಲು ಕೆಎಸ್​ಆರ್​ಟಿಸಿ ಚಿಂತನೆ

ಈ ಹಿಂದೆ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಮಷಿನ್​​ಗಳು ಕೈಕೊಟ್ಟು ಕಂಡಕ್ಟರ್​​ಗಳು ತೊಂದರೆ ಅನುಭವಿಸುತ್ತಿದ್ದರು. ನಂತರ ಹೊಸ ತಂತ್ರಜ್ಞಾನದ ಮಷಿನ್ ಖರೀದಿ ಮಾಡಲಾಗಿತ್ತು. ಇದೀಗ ಕೆಎಸ್​ಆರ್​ಟಿಸಿ ಕೂಡ ಹೊಸ ತಂತ್ರಜ್ಞಾನದ ಮಷಿನ್​ಗಳನ್ನು ಖರೀದಿ ಮಾಡಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us