AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ರಾಜ್ಯದ 5 ನಗರಗಳಿಗೆ ಇ-ಬಸ್​ ಸಂಪರ್ಕ, ಯಾವ್ಯಾವ ಊರುಗಳು, ಈ ಸ್ಟೋರಿ ಓದಿ

ಮುಂಬರುವ ದಿನಗಳಲ್ಲಿ ಕೆಎಸ್​ಆರ್​ಟಿಸಿಯ ಎಲೆಕ್ಟ್ರಿಕ್​ ಬಸ್​ಗಳು ವಿರಾಜಪೇಟ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ 5 ನಗರಗಳಿಗೆ ಕೂಡ ಸಂಪರ್ಕ ಕಲ್ಪಿಸಲಿವೆ.

ಶೀಘ್ರದಲ್ಲೇ ರಾಜ್ಯದ 5 ನಗರಗಳಿಗೆ ಇ-ಬಸ್​ ಸಂಪರ್ಕ, ಯಾವ್ಯಾವ ಊರುಗಳು, ಈ ಸ್ಟೋರಿ ಓದಿ
ಕೆಎಸ್​ಆರ್​ಟಿಸಿ ಇ-ಬಸ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 20, 2023 | 11:30 AM

Share

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮೊದಲ ಹಂತದಲ್ಲಿ ಎಲೆಕ್ಟ್ರಿಕ್​ ಬಸ್ (E-Bus) ​ಗಳನ್ನು ಬೆಂಗಳೂರು-ಮೈಸೂರು ಮಧ್ಯೆ ಪ್ರಾರಂಭಿಸಿತ್ತು. ಮುಂಬರುವ ದಿನಗಳಲ್ಲಿ ಈ ಎಲೆಕ್ಟ್ರಿಕ್​ ಬಸ್​ಗಳು ವಿರಾಜಪೇಟ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ 5 ನಗರಗಳಿಗೆ ಕೂಡ ಸಂಪರ್ಕ ಕಲ್ಪಿಸಲಿವೆ. ಕೇಂದ್ರ ಸರ್ಕಾರದ ಫೇಮ್-2 (FAME- Faster Adoption and Manufacturing of Electric Vehicles) ಯೋಜನೆಯಡಿ, ಕೆಎಸ್​ಆರ್​ಟಿಸಿಯ 50 ಎಸಿ ಇ-ಬಸ್​ಗಳನ್ನು ಖಾಸಗಿ ಸಂಸ್ಥೆಗಳಿಗೆ ಬಾಡಿಗೆಗೆ ನೀಡಿದೆ. ಈ ಹೊಸ ಬಸ್‌ಗಳಿಗೆ ‘EV ಪವರ್ ಪ್ಲಸ್’ ಎಂದು ನಾಮಕರಣ ಮಾಡಲಾಗಿದೆ.

ಬೆಂಗಳೂರು-ಮೈಸೂರು ನಡುವೆ ಪರಿಚಯಿಸಲಾದ ಸೇವೆಗೆ ಉತ್ತಮ ಪ್ರೋತ್ಸಾಹ ಸಿಕ್ಕಿದೆ. ಹೊಸ ಮಾರ್ಗಗಳಲ್ಲಿಯೂ ಹೆಚ್ಚಿನ ಪ್ರೋತ್ಸಾಹ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಕೆಎಸ್‌ಆರ್‌ಟಿಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು-ಮೈಸೂರು ಕೆಎಸ್​ಆರ್​ಟಿಸಿ ಎಲೆಕ್ಟ್ರಿಕ್​ ಬಸ್​

2023ರ ಜನವರಿ 16 ರಿಂದ ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​ ಬಸ್​ಗಳು ಬೆಂಗಳೂರು-ಮೈಸೂರು ಸಂಚಾರ ಪ್ರಾರಂಭಿಸಿದ್ದವು. ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌, ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಂಡಿದೆ.

ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪಿತ್ತು. ಬೆಂಗಳೂರಿಂದ ಮೈಸೂರಿಗೆ ಹೊರಡುವ ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿದೆ.

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತವೆ. ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗಿದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸುತ್ತಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 am, Mon, 20 March 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’