ಬೆಂಗಳೂರು, ಫೆಬ್ರವರಿ 11: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಸಾಧನೆಗೆ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ. ಕೆಎಸ್ಆರ್ಟಿಸಿ ಜಾರಿಗೆ ತಂದ ಹೊಸ ಹೊಸ ಉಪಕ್ರಮಗಳು ಜನರಿಗೆ ಹತ್ತಿರವಾಗಿದೆ. ಈ ಕಾರಣದಿಂದ ಸಂಸ್ಥೆಗೆ ರಾಷ್ಟ್ರೀಯ ಹಾಗೂ ವಿಶ್ಚ ನಾವೀನ್ಯತೆ ಪ್ರಶಸ್ತಿಗಳು ಲಭಿಸಿವೆ.
ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 17, 18 ಮತ್ತು 21 ರಂದು ಮುಂಬೈನಲ್ಲಿ ನಡೆಯಲಿದೆ.
ಕೆಎಸ್ಆರ್ಟಿಸಿ ಬಹುತೇಕ ಎಲ್ಲಾ ಬಸ್ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಯುಪಿಐ ಆ್ಯಪ್ ಮೂಲಕ ಟಿಕೆಟ್ಗೆ ದುಡ್ಡು ಪಾವತಿಸಲು ಇದರಿಂದ ಸುಲಭವಾಗಲಿದೆ. ಕಂಡಕ್ಟರ್ಗಳಿಗೆ ಇಟಿಎಂ ಯಂತ್ರಗಳನ್ನು ನೀಡಲಾಗಿದೆ. ಡಿಜಿಟಲ್ ಪಾವತಿಗಳನ್ನು ಹೆಚ್ಚಿಸುವ ಗುರಿ ಹೊಂದಿರುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:29 am, Tue, 11 February 25