AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿ ಸಾರಿಗೆ ನೌಕರರು; 3 ತಿಂಗಳಿನಿಂದ ಸರಿಯಾದ ಸಂಬಳವಿಲ್ಲದೇ ದುಸ್ತರಗೊಂಡಿದೆ ಬದುಕು

KSRTC workers problem: ರಾಜ್ಯದ ಕೆಎಸ್​ಆರ್​ಟಿಸಿ ನೌಕರರಿಗೆ ನಿಗಮಗಳು ಸರಿಯಾಗಿ ವೇತನವನ್ನೇ ನೀಡಿಲ್ಲ. ಇದರಿಂದ ನೌಕರರ ಬದುಕು ದುಸ್ತರವಾಗಿದೆ. ಈ ಕುರಿತ ವರದಿ ಇಲ್ಲಿದೆ.

ಸಂಕಷ್ಟದಲ್ಲಿ ಸಾರಿಗೆ ನೌಕರರು; 3 ತಿಂಗಳಿನಿಂದ ಸರಿಯಾದ ಸಂಬಳವಿಲ್ಲದೇ ದುಸ್ತರಗೊಂಡಿದೆ ಬದುಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 27, 2021 | 12:35 PM

Share

ಬೆಂಗಳೂರು: ಮೂರು ತಿಂಗಳಿಂದ ಸರಿಯಾದ ಸಂಬಳವಿಲ್ಲದೇ ಸಾರಿಗೆ ನೌಕರರ ಬದುಕು ದುಸ್ತರವಾಗಿದೆ. ಕೇವಲ ಅರ್ಧ ಸಂಬಳವನ್ನು ಮಾತ್ರ ನಿಗಮಗಳು ನೀಡಿವೆ. ನವೆಂಬರ್ ತಿಂಗಳ ಅಂತ್ಯವಾದರೂ ರಾಜ್ಯದ 4 ನಿಗಮಗಳು ನೌಕರರಿಗೆ ವೇತನ ಹಾಕದ ಪರಿಣಾಮ, ಕೆಲಸಗಾರರು ಪರದಾಡುತ್ತಿದ್ದಾರೆ. ಈ ಕುರಿತು ನೌಕರರು ಅಳಲು ತೋಡಿಕೊಂಡಿದ್ದು, ಸರಿಯಾಗಿ ವೇತನ ನೀಡುವಂತೆ ಆಗ್ರಹಿಸಿದ್ದಾರೆ. ಸಂಬಳ ಸಮಸ್ಯೆಗೆ ಸರ್ಕಾರದ ಬಳಿ ಶಾಶ್ವತ ಪರಿಹಾರವೇ ಇಲ್ಲವೇ ಎಂದು ಪ್ರಶ್ನಿಸಿರುವ ನೌಕರರು, ರಾಜ್ಯದ 1 ಲಕ್ಷ 30 ಸಾವಿರ ನೌಕರರ ಸಂಕಟ ಸರ್ಕಾರಕ್ಕೆ ಏಕೆ ಅರ್ಥವಾಗುತ್ತಿಲ್ಲ ಎಂದು ಕೇಳಿದ್ದಾರೆ. ಆಗಸ್ಟ್ ,ಸೆಪ್ಟೆಂಬರ್​ನ ಬಾಕಿ ಅರ್ಧ ಸಂಬಳ, ಅಕ್ಟೋಬರ್ ಪೂರ್ತಿ ಸಂಬಳ ಇನ್ನೂ ಸಿಕ್ಕಿಲ್ಲ. ಸಂಬಳ ಇಲ್ಲದೆ ರಾಜ್ಯದ ಸಾರಿಗೆ ನೌಕರರು ಬದುಕೋದು ಹೇಗೆ? ತಿಂಗಳ ಅರ್ಧ ಅರ್ಧ ಸಂಬಳದಲ್ಲಿ ಜೀವನ ಮಾಡೋಕೆ ಆಗುತ್ತದೆಯೇ ಎಂದು ನೌಕರರು ಅಳಲು ತೋಡಿಕೊಂಡಿದ್ದಾರೆ.

ನೌಕರರ ಸಂಬಳ ಸಮಸ್ಯೆ ಬಗೆಹರಿಸಲು ಸಾರಿಗೆ ಸಚಿವರು ಅಸಹಾಯಕರಾದರೇ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ. ಕಾರಣ, ಮೂರು ತಿಂಗಳಿಂದ ಸರಿಯಾದ ವೇತನ ಇಲ್ಲದೆ ನೌಕರರ ಬದುಕು ದುಸ್ಥರವಾಗಿದ್ದರೂ ಯಾರೊಬ್ಬರೂ ಆ ಕಡೆ ಗಮನವನ್ನೇ ಹರಿಸಿಲ್ಲ. ಎರಡೆರಡು ತಿಂಗಳು ಅರ್ಧ ಸಂಬಳ ಕೊಟ್ಟು ಸುಮ್ಮನೆ ಆದ ಸಾರಿಗೆ ನಿಗಮಗಳು ಸುಮ್ಮನಾಗಿವೆ. ಬಿಎಂಟಿಸಿ, ಕೆಎಸ್ಆರ್​​ಟಿಸಿ ಹಾಗೂ ನಾಲ್ಕು ಸಾರಿಗೆ ನಿಗಮ ನೌಕರರು ಸಂಬಳ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ. ಕೊರೊನಾದಿಂದ ಸಂಪೂರ್ಣ ಆನ್ ಲಾಕ್ ಆಗಿ, ಬಿಎಂಟಿಸಿಯಲ್ಲಿ ನಿತ್ಯ ₹ 3.5 ಕೋಟಿ, ಕೆಎಸ್ಆರ್​ಟಿಸಿಗೆ ನಿತ್ಯ ₹ 6.5 ಕೋಟಿ ಆದಾಯ ಬಂದರೂ ವೇತನಕ್ಕೆ ದುಡ್ಡು ಇಲ್ಲವೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ನಿಗಮಗಳು ತಮ್ಮ ನೌಕರರಿಗೆ ಬಾಕಿ ಸಂಬಳವನ್ನು ನೀಡಿಲ್ಲ. ಮೂರು ತಿಂಗಳಿಂದ ನೌಕರರ ಕುಟುಂಬಗಳು ಕರೆಂಟ್ ಬಿಲ್, ನೀರಿನ ಬಿಲ್, ಮನೆ ಬಾಡಿಗೆ ಕಟ್ಟಿಲ್ಲ. ಈ ರೀತಿ ಸಂಬಳ ಆದರೆ ಜೀವನ ಮಾಡೋದು ಹೇಗೆ ಅಂತ ನೌಕರರು ಪ್ರಶ್ನೆ ಮಾಡಿದ್ದಾರೆ. ವೇತನಇಲ್ಲದೆ 1 ಲಕ್ಷ 30 ಸಾವಿರ ನೌಕರರು ಕುಟುಂಬಗಳು ಬದುಕುವುದು ಹೇಗೆ? ಕೊಟ್ಟಿರೋ ಅರ್ಧ ಸಂಬಳದಲ್ಲಿ ಎರಡು ತಿಂಗಳು ಜೀವನ ಮಾಡೋದು ಹೇಗೆ ಎಂಬ ಪ್ರಶ್ನೆಗೆ ಸಚಿವರು, ಅಧಿಕಾರಿಗಳು ಮೌನ ತಾಳಿದ್ದಾರೆ. ಬಿಎಂಟಿಸಿ, ಕೆಎಸ್​​ಆರ್​​ಟಿಸಿ, ವಾಯುವ್ಯ ಕಲ್ಯಾಣ ಸಾರಿಗೆ ನಿಗಮದ ನೌಕರರ ಬದುಕು ಮೂರಾಬಟ್ಟೆಯಾಗಿದ್ದರೂ ಕೂಡ, ವೇತನ ನೀಡದೇ ಸಾರಿಗೆ ನಿಗಮಗಳು ಕೈಕಟ್ಟಿ ಕುಳಿತಿವೆ!

ಇದನ್ನೂ ಓದಿ:

ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?

3 ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವ ಮಸೂದೆ ಸಂಸತ್ತಿನಲ್ಲಿ ಸೋಮವಾರ ಮಂಡನೆ; ಬಿಜೆಪಿ ಸಂಸದರಿಗೂ ವಿಪ್ ಜಾರಿ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ